ವೃದ್ದೆಯ ಮಾನವೀಯತೆಯ ಪರಾಕಾಷ್ಠೆ: ಭಿಕ್ಷೆ ಎತ್ತಿ ಬಂದ ಲಕ್ಷ ರೂಪಾಯಿಯನ್ನು ಈಕೆ ಮಾಡಿದ್ದೇನು ಗೊತ್ತೇ?
ಉಡುಪಿ, ಫೆ 5: ಸ್ವತಃ ತನ್ನ ಕುಟುಂಬ ಬಡತನದಲ್ಲಿ ಇದ್ದರೂ, ಜಿಲ್ಲೆಯ ಹಲವು ಕಡೆ ಭಿಕ್ಷೆ ಎತ್ತುವ ಈ ಎಂಬತ್ತರ ವೃದ್ದೆ ಭಿಕ್ಷಾಟನೆಯಲ್ಲಿ ಬರುವ ದುಡ್ಡನ್ನು ಬಳಸಿಕೊಳ್ಳುವುದು ಮಾತ್ರ ಸಾಮಾಜಿಕ ಕೆಲಸಕ್ಕೆ.
ಈಕೆಯ ಹೆಸರು ಅಶ್ವಥಮ್ಮ, ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಗಂಗೊಳ್ಳಿ ಬಳಿಯ ಕಂಚುಗೋಡು ಮೂಲದವರು. ಅಯ್ಯಪ್ಪನ ಪರಮಭಕ್ತೆ, ವರ್ಷ ಪೂರ್ತಿ, ಜಿಲ್ಲೆಯ ವಿವಿದೆಡೆ ಭಿಕ್ಷಾಟನೆ ಮಾಡಿ ಸಂಗ್ರಹಿಸುವ ಹಣವನ್ನು ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ದಾನವಾಗಿ ನೀಡುತ್ತಾ ಬರುತ್ತಿದ್ದಾರೆ.
ತನ್ನ ಸ್ವಂತ ಕುಟುಂಬ ಬಡತನದಲ್ಲಿದ್ದರೂ ಹಣವನ್ನು ಉಳಿತಾಯ ಮಾಡಿ ದಾನ ಮಾಡುವ ಇವರ ಕಾರ್ಯ ಮಾನವ ಕುಲಕ್ಕೆ ಮಾದರಿ. 'ಭಿಕ್ಷಾಟನೆ ಅಜ್ಜಿ'ಎಂದೇ ಪ್ರೀತಿಯಿಂದ ಕರೆಯಲ್ಪಡುವ ಇವರು ಇತ್ತೀಚೆಗೆ ಒಂದು ಲಕ್ಷ ರೂಪಾಯಿ ಹಣವನ್ನು ಅನ್ನದಾನಕ್ಕಾಗಿ ನೀಡಿದ್ದಾರೆ.

ಜಿಲ್ಲೆಯ ಇತಿಹಾಸ ಪ್ರಸಿದ್ದ ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅಶ್ವಥಮ್ಮ, ಒಂದು ಲಕ್ಷ ರೂಪಾಯಿಯನ್ನು ಅನ್ನದಾನ ಸೇವೆಗಾಗಿ ನೀಡಿದ್ದಾರೆ. ದೇವಾಲಯದ ಅರ್ಚಕ ವೇದಮೂರ್ತಿ ಜನಾರ್ದನ ಅಡಿಗ ಮತ್ತು ವ್ಯವಸ್ಥಾಪಕ ಕೆ.ನಾಗರಾಜ ಅವರು ವೃದ್ದೆಗೆ ದೇವರ ಪ್ರಸಾದ ನೀಡಿ ಗೌರವಿಸಿದರು.
ಈ ಹಿಂದೆ ಅಶ್ವಥ್ಥಮ್ಮ ಅವರು ಗಂಗೊಳ್ಳಿ ಸಮೀಪದ ಕಂಚಗೋಡು ದೇವಸ್ಥಾನಕ್ಕೆ 1.5 ಲಕ್ಷ ರೂ, ಪಂಪ ದೇವಸ್ಥಾನಕ್ಕೆ ಒಂದು ಲಕ್ಷ ರೂಪಾಯಿ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ 1.5 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದರು.
ಅಶ್ವಥ್ಥಮ್ಮ ದೇಶಾದ್ಯಂತ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದು, ಈ ವರ್ಷ ಅಯ್ಯಪ್ಪ ಮಾಲಾ ಧರಿಸಿದ್ದು, ಸಾಲಿಗ್ರಾಮ ದೇವಾಲಯದಲ್ಲಿ ಇರುಮುಡಿಯನ್ನು ಕಟ್ಟಿಕೊಂಡಿದ್ದಾರೆ. (ಚಿತ್ರ, ಮಾಹಿತಿ ಕೃಪೆ: ನಮ್ಮ ಕುಂದಾಪುರ ಫೇಸ್ ಬುಕ್)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications