ಇಂಜಿನಿಯರಿಂಗ್ ಕಾಲೇಜಿಗೆ ಬಂದವರು ಯಾರು?
ಮಣಿಪಾಲ, ಆ, 21 : ನಗರದ ಮಾಧವ ಪೈ ಕಾಲೇಜು ಆವರಣಕ್ಕೆ ವಿಶೇಷ ಅತಿಥಿಯೊಬ್ಬ ಇತ್ತೀಚೆಗೆ ಭೇಟಿ ನೀಡಿದ್ದ. ಅರಣ್ಯ ನಾಶದ ಪ್ರತೀಕ ಎಂಬಂತೆ ಕಾಡಿನಲ್ಲಿರಬೇಕಾದ ಹೆಬ್ಬಾವು ಕಾಲೇಜಿಗೆ ಆಗಮಿಸಿತ್ತು.
ನಂತರ ಉರಗ ತಜ್ಞ ಗುರುರಾಜ್ ಸಾಣಿಲ್ ಅವರನ್ನು ಕರೆಸಿ ಬೃಹತ್ ಗಾತ್ರದ ಹೆಬ್ಬಾವನ್ನು ಹಿಡಿದು ಆಗುಂಬೆ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಯಿತು.
ಕಾಲೇಜಿನ ಹಿಂಭಾಗದಲ್ಲಿ ಮಲಗಿದ್ದ ಹೆಬ್ಬಾವು ಕಂಡ ವಿದ್ಯಾರ್ಥಿಗಳು ಬೆಚ್ಚಿಬಿದ್ದರು. ಸ್ಥಳಕ್ಕೆ ಆಗಮಿಸಿದ ಗುರುರಾಜ್ ಹಾವು ಹಿಡಿದು 'ಹೆಬ್ಬಾವುಗಳು ಮಾನವರನ್ನು ತಿನ್ನುವುದಿಲ್ಲ, 14 ಅಡಿ ಉದ್ದದ ಈ ಹಾವು ಸುಮಾರು 20 ವರ್ಷ ಪ್ರಾಯದ್ದಿರಬೇಕು' ಎಂದು ಮಾಹಿತಿ ನೀಡಿದರು.
ವಿದ್ಯಾರ್ಥಿಗಳ ಭಯ ದೂರಮಾಡಿದ ಗುರುರಾಜ್ ಅವರಿಗೆ ಹಾವಿನ ವಿವಿಧ ಭಾಗಗಳ ಪರಿಚಯ ಮಾಡಿಕೊಟ್ಟರು. ಸ್ವತಃ ವಿದ್ಯಾರ್ಥಿಗಳೇ ಹಾವಿನ ತಲೆ, ಬಾಲ ಹಿಡಿದು ಸಂಭ್ರಮಿಸಿದರು. ನಂತರ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಯಿತು.

ಹೆಬ್ಬಾವು ಹಿಡಿದ ವಿದ್ಯಾರ್ಥಿಗಳು
ಮಣಿಪಾಲ ಮಾಧವ ಪೈ ಕಾಲೇಜು ಆವರಣಕ್ಕೆ ಬಂದಿದ್ದ 14 ಅಡಿ ಉದ್ದದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಡಲಾಯಿತು.

ಬೃಹತ್ ಗಾತ್ರದ ಹೆಬ್ಬಾವು
ಕಾಡು ಬಿಟ್ಟು ನಾಡಿಗೆ ಬಂದ 14 ಅಡಿ ಉದ್ದದ ಹೆಬ್ಬಾವು ಹಿಡಿದ ಉರಗ ತಜ್ಞ ಗುರುರಾಜ್ ಸಾಣಿಲ್.

ಹಾವು ಹಿಡಿದು ವಿದ್ಯಾರ್ಥಿಗಳ ಸಂಭ್ರಮ
ಮಣಿಪಾಲ ಮಾಧವ ಪೈ ಕಾಲೇಜು ಆವರಣಕ್ಕೆ ಬಂದಿದ್ದ ಹೆಬ್ಬಾವನ್ನು ಹಿಡಿದು ಸಂಭ್ರಮಿಸಿದ ವಿದ್ಯಾರ್ಥಿಗಳು.

ಹೆಬ್ಬಾವು ಮಾನವನ್ನು ತಿನ್ನಲ್ಲ
ಮಣಿಪಾಲ ಮಾಧವ ಪೈ ಕಾಲೇಜು ಆವರಣಕ್ಕೆ ಬಂದಿದ್ದ 14 ಅಡಿ ಉದ್ದದ ಹೆಬ್ಬಾವು ಹಿಡಿದ ಉರಗ ತಜ್ಞ ಗುರುರಾಜ್ ಸಾಣಿಲ್ ಹೆಬ್ಬಾವು ಮಾನವನನ್ನು ತಿನ್ನಲ್ಲ ಎಂದು ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು.

14 ಅಡಿ ಉದ್ದ, 20 ವರ್ಷ
20 ವರ್ಷ ಪ್ರಾಯದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಆಗುಂಬೆ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications