ಪಶ್ಚಿಮ ಘಟ್ಟದ ತಪ್ಪಲಿನಿಂದ ಕಡ್ತಲ ಗ್ರಾಮಕ್ಕೆ ಬಂದ ಕಾಳಿಂಗ

ಉಡುಪಿ, ಜುಲೈ.13: ಪಶ್ಚಿಮ ಘಟ್ಟದ ತಪ್ಪಲಲ್ಲಿ ಕಾಣಸಿಗುವ ಅಪರೂಪದ ಕಾಳಿಂಗ ಸರ್ಪ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದಲ್ಲಿ ಕಂಡು ಬಂದಿದೆ. ಆಹಾರ ಅರಸಿಕೊಂಡು ಜನವಸತಿ ಪ್ರದೇಶಕ್ಕೆ ಬಂದ ಭಾರೀ ಗಾತ್ರದ ಈ ಕಾಳಿಂಗ ಸರ್ಪವನ್ನು ಇದೀಗ ಸಂರಕ್ಷಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಪದೇ ಪದೇ ಸರ್ಪ ಕಾಣಿಸಿಕೊಳ್ಳುತ್ತಿದ್ದು, ಆತಂಕಗೊಂಡ ಜನರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಉರಗ ತಜ್ಞ ಅನಿಲ್ ಪ್ರಭು ಅವರ ಸಹಾಯ ಪಡೆದು ಈ ಕಾಳಿಂಗವನ್ನು ಸೆರೆ ಹಿಡಿಯಲಾಯ್ತು.

A King Serpent came to Kadthal village in Karkala Taluk in search of food

ಸುಮಾರು 12 ಅಡಿ ಉದ್ದ, ಹದಿನೈದು ಕೆ.ಜಿ ತೂಗುವ ಈ ಹಾವನ್ನು ಕುದುರೆಮುಖ ಅಭಯಾರಣ್ಯಕ್ಕೆ ಮತ್ತೆ ಬಿಡಲಾಗಿದೆ. "ವಿಷಕಾರಿಯಾದ ಈ ಹಾವು ಮಳೆಗಾಲದಲ್ಲಿ ಹೆಚ್ಚಾಗಿ ಆಹಾರ ಅರಸಿಕೊಂಡು ಹೊರಬರುತ್ತೆ. ಈ ಕಾಳಿಂಗ ಸರ್ಪ ಕೂಡಾ ಆಹಾರವಿಲ್ಲದೆ ಸೊರಗಿದಂತೆ ಕಾಣುತ್ತದೆ.

A King Serpent came to Kadthal village in Karkala Taluk in search of food

ಈ ಗಾತ್ರದ ಕಾಳಿಂಗ ಸರ್ಪವು ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಾತ್ರ ಕಾಣಸಿಗುವ ಅಪರೂಪದ ಸರೀಸೃಪ. ಆಹಾರ ಹುಡುಕಿಕೊಂಡು ಬರುವ ಸರ್ಪಗಳು ಯಾವುದೇ ತೊಂದರೆ ಉಂಟುಮಾಡುವುದಿಲ್ಲ. ಅವುಗಳನ್ನು ಸಂರಕ್ಷಿಸುವ ಕರ್ತವ್ಯ ನಮ್ಮದು ಎಂದು ಉರಗ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+