ಉಡುಪಿ: ಶಿರೂರು ಶ್ರೀಗಳ ಸಾವಿನ ಹಿಂದೆ ಲ್ಯಾಂಡ್ ಮಾಫಿಯಾ?
ಉಡುಪಿ, ಜುಲೈ 20: ನಿನ್ನೆ ವಿಧಿವಶರಾದ ಶಿರೂರು ಶ್ರೀ ಗಳ ಅಕಾಲಿಕ ಸಾವು ಹಲವಾರು ಸಂಶಯಗಳಿಗೆ, ಊಹಾಪೋಹ ಹರಡಲು ಕಾರಣವಾಗಿದೆ. ಶ್ರೀರೂರು ಶ್ರೀ ಗಳ ಪೂರ್ವಾಶ್ರಮದ ಸೋದರ ಪ. ಲಾತವ್ಯ ಆಚಾರ್ಯ ಇದೊಂದು ವಿಷಪ್ರಾಶನ ಪ್ರಕರಣ ಎಂದು ಆರೋಪಿಸಿದ್ದಾರೆ. ಈ ಕುರಿತು ಹಿರಿಯಡ್ಕ ಠಾಣೆಯಲ್ಲೂ ಪ್ರಕರಣ ದಾಖಲಿಸಲಾಗಿದೆ.
ಆದರೆ ಈ ನಡುವೆ ಶಿರೂರು ಶ್ರೀಗಳ ಅಕಾಲಿಕ ನಿಧನ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರಕಿದೆ. ಶ್ರೀ ಗಳ ನಿಧನದ ರಹಸ್ಯ ಬಿಚ್ಚಿಟ್ಟ ಶ್ರೀಗಳ ಆಪ್ತರೋರ್ವರು ಶಿರೂರು ಶ್ರೀ ಗಳ ನಿಧನದ ರಹಸ್ಯ ಬಿಚ್ಚಿಟ್ಟಿದ್ದಾರೆ.
ಶ್ರೀಗಳ ಆಪ್ತರೋರ್ವ ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ್ದು, ಈ ಹಿನ್ನೆಲೆಯಲ್ಲಿ ಶಿರೂರು ಶ್ರೀ ಗಳ ಅಸಹಜ ಸಾವಿನ ಹಿಂದೆ ಲ್ಯಾಂಡ್ ಮಾಫಿಯಾ ಇದೆಯಾ ಎಂಬ ಸಂಶಯ ಮೂಡಲಾರಂಭಿಸಿದೆ.

ಶಿರೂರು ಶ್ರೀ ಗಳ ಸಾವಿನ ಹಿಂದೆ ಮಠಕ್ಕೆ ಸೇರಿದ 500 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಕಾರಣವೇ ಎಂಬ ಪ್ರಶ್ನೆ ಮೂಡಿದೆ. ಸೋದೆ ಮಠದದೊಂದಿಗೆ ಸಂಬಂಧವಿರುವ ಲ್ಯಾಂಡ್ ಮಾಫಿಯಾದ ಶ್ರೀಗಳ ಸಾವಿನಲ್ಲಿ ಕೈವಾಡವಿದೆ ಎಂದು ಆರೋಪಗಳು ಕೇಳಿಬರುತ್ತಿವೆ.
ಸೋದೆ ಮಠ, ಶಿರೂರು ಮಠದ ದ್ವಂದ್ವ ಮಠವಾಗಿದ್ದು ಶಿರೂರು ಶ್ರೀ ಲಕ್ಷ್ಮಿವರ ತೀರ್ಥ ಸ್ವಾಮೀಜಿ ಅವರ ನಿಧನದ ಬಳಿಕ ಆಸ್ತಿಯನ್ನು ಸೋದೆ ಮಠದ ವಶಕ್ಕೆ ಪಡೆಯುವ ಹುನ್ನಾರ ? ಎಂದು ಆರೋಪಿಸಲಾಗಿದೆ.
ಮಠದ ದೇವರ ಮೇಲೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದು, ಇತ್ತೀಚೆಗೆ ಬಂದ ಚಿನ್ನಾಭರಣದ ಬಗ್ಗೆ ಲೆಕ್ಕ ವಿವರಿಸಲಾಗಿಲ್ಲ. ಈ ಹಿನ್ನೆಲೆಯಲ್ಲಿ ಮಠದ ಆಸ್ತಿ ಅರ್ಹರಿಗೆ ಸಲ್ಲಬೇಕೆ ಹೊರತು ಹೊರಗಿನ ಅರ್ಚಕರನ್ನು ನೇಮಿಸುವುದಕ್ಕೆ ತಡೆ ನೀಡಬೇಕಿದೆ ಎಂದು ಶ್ರೀಗಳ ಆಪ್ತ ಮೋಹನ್ ಆಗ್ರಹಿಸಿದ್ದಾರೆ.
ಇದನ್ನು ಬೇರೆಯವರು ವಶಪಡಿಸಿಕೊಳ್ಳುವ ಪ್ರಯತ್ನವನ್ನು ಸರಕಾರ ತಡೆಯಬೇಕು ಹಾಗು ಶ್ರೀಗಳ ಸಾವಿನ ನಿಷ್ಪಕ್ಷಪಾತ ತನಿಖೆಗೆ ಆಗಬೇಕು ಎಂದು ಆತ ಆಗ್ರಹಿಸಿದ್ದಾನೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications