ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿ ಪ್ರಕರಣ: ಆರೋಪಿ ಶ್ರೇಯಸ್ ನಾಯ್ಕ್ ಎಸ್ಕೇಪ್
ಉಡುಪಿ, ಜೂನ್ 02: ಹಾಸನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ದೇಶದಾದ್ಯಂತ ಸುದ್ದಿ ಮಾಡಿತ್ತು. ಇದೀಗ ಇದೇ ಮಾದರಿ ಎನ್ನಲಾದ ಘಟನೆ ಉಡುಪಿಯಲ್ಲಿ ನಡೆದಿದೆ. ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಉಡುಪಿಯ ಆಸಾಮಿಯೊಬ್ಬನು ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಸೆರೆ ಹಿಡಿದು ಇಟ್ಟುಕೊಳ್ಳುತ್ತಿದ್ದ ಆರೋಪ ಕೇಳಿಬಂದಿದೆ.
ಉದ್ಯಮಿ ಶ್ರೇಯಸ್ ನಾಯ್ಕ (25) ಈ ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದ್ದು, ಸದ್ಯ ಈತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಾಲೆಗೆ ಹೋಗುವ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಶ್ರೇಯಸ್ ನಾಯ್ಕ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.

ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಬಾಲಕಿಯನ್ನು ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬಾಲಕಿಯನ್ನು ಹೆದರಿಸಿ ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ ಆರೋಪ ಕೇಳಿಬಂದಿದೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
ವಿಕೃತ ಕಾಮಿಯಂತೆ ಆಡುತ್ತಿದ್ದ ಶ್ರೇಯಸ್ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಮಾಡಿ ತನ್ನ ಮೊಬೈಲ್ ಹಾಗೂ ಲ್ಯಾಪ್ಟಾಪ್ನಲ್ಲಿರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ.
ಮೇ18 ರಂದು ಆರೋಪಿ ಶ್ರೇಯಸ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್ಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications