ಕುಂದಾಪುರ ವ್ಯಕ್ತಿಯಿಂದ ಅಪರೂಪದ ನೀಲಿ ತಲೆ ಗಿಳಿ ವಶಕ್ಕೆ!
ಉಡುಪಿ, ಜನವರಿ 17 : ಪಶ್ಚಿಮ ಘಟ್ಟಗಳಲ್ಲಿ ಅಪರೂಪವಾಗಿ ಕಂಡು ಬರುವ ಹಾಗೂ ವಿನಾಶದ ಅಂಚಿನಲ್ಲಿರುವ ನೀಲಿ ಬಣ್ಣದ ಗಿಳಿಯೊಂದನ್ನು ಇಟ್ಟುಕೊಂಡು ಗಿಳಿ ಶಾಸ್ತ್ರ ಹೇಳುತ್ತಾ ಜೀವನ ಸಾಗಿಸುತ್ತಿದ್ದ ಕುಂದಾಪುರ ಮೂಲದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿರುವ ಅರಣ್ಯಾಧಿಕಾರಿಗಳು, ಆತನಿಂದ ಗಿಳಿಯನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.
ತೀರಾ ಅಪರೂಪವೆಂದು ಹೇಳಬಹುದಾದ ಈ ಗಿಳಿಯು, ಪಶ್ಚಿಮ ಘಟ್ಟ ಹಾಗೂ ಮಲೆನಾಡು ಪ್ರದೇಶದಲ್ಲಿ ಈ ಮೊದಲು ಹೆಚ್ಚಾಗಿ ಕಂಡುಬರುತ್ತಿತ್ತು ಎಂದು ಇಲ್ಲಿನ ಹಿರಿತಲೆಗಳು ಹೇಳುತ್ತಾರೆ.

ಇತ್ತೀಚೆಗೆ, ಉಡುಪಿಯಲ್ಲಿರುವ ಕೆಲವಾರು ತಿಂಗಳುಗಳಿಂದ ಬೀಡುಬಿಟ್ಟಿದ್ದ ವ್ಯಕ್ತಿಯೊಬ್ಬ ತನ್ನಲ್ಲಿದ್ದ ಈ ನೀಲಿ ಬಣ್ಣದ ಗಿಳಿಯ ಮೂಲಕ ಗಿಳಿಶಾಸ್ತ್ರ ಹೇಳುತ್ತಿದ್ದಾನೆಂಬ ಮಾಹಿತಿ ಅಧಿಕಾರಿಗಳಿಗೆ ಇತ್ತೀಚೆಗೆ ಸಿಕ್ಕಿತ್ತು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಿದ ಮಾಹಿತಿ ಮೇರಿಗೆ ಕುಂದಾಪುರ ಅರಣ್ಯ ವಲಯದ ಅರಣ್ಯಾಧಿಕಾರಿ ಶರತ್ ಶೆಟ್ಟಿ, ಉಪವಲಯ ಅರಣ್ಯಾಧಿಕಾರಿಗಳಾದ ದಿಲೀಪ್ ಹಾಗೂ ಗುರುರಾಜ್ ಅವರುಳ್ಳ ತಂಡ ಕಾರ್ಯಾಚರಣೆ ನಡೆಸಿದ ಆತನನ್ನು ಬಂಧಿಸಿದ್ದಾರೆ.
ಆತನಿಂದ ವಶಪಡಿಸಿಕೊಂಡ ಗಿಳಿಯನ್ನು ಮಂಗಳೂರಿನ ವಾಮಂಜೂರಿನಲ್ಲಿರುವ ಪಿಲಿಕುಳಕ್ಕೆ ವನ್ಯಜೀವಿ ಧಾಮಕ್ಕೆ ಬಿಟ್ಟಿದ್ದಾರೆ. ಈ ಪ್ರಕರಣದ ಬಗ್ಗೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕೊಟ್ಟಿಲ್ಲ.
ಆ ಗಿಳಿಯ ಪ್ರಬೇಧ ಹಾಗೂ ಅದರ ಮಹತ್ವ, ಗಿಳಿ ಶಾಸ್ತ್ರದ ವ್ಯಕ್ತಿಗೆ ಆ ಗಿಳಿ ಸಿಕ್ಕ ಬಗೆ ಮುಂದಿನ ತನಿಖೆಯಲ್ಲಿ ಬಹಿರಂಗಗೊಳ್ಳಲಿದೆ ಎನ್ನಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications