Udupi: ಕರಾವಳಿಯತ್ತ ಬರುವ ಪ್ರವಾಸಿಗರೇ ಎಚ್ಚರ..!: ಕಡಲ ಆರ್ಭಟಕ್ಕೆ ಓರ್ವ ಬಲಿ
ಉಡುಪಿ, ಏಪ್ರಿಲ್ 18: ಕರಾವಳಿಯಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ. ಮಳೆಯ ಮುನ್ಸೂಚನೆಯ ಬೆನ್ನಲ್ಲೇ ಕಡಲು ಆರ್ಭಟಿಸುತ್ತಿದೆ. ಅಲೆಗಳ ಆರ್ಭಟದ ಸುಳಿಗೆ ಮೂವರು ಸಿಲುಕಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಈ ಪೈಕಿ ಓರ್ವ ಮೃತನಾಗಿದ್ದರೆ ಮತ್ತಿಬ್ಬರು ಚೇತರಿಸಿಕೊಂಡಿದ್ದಾರೆ.
ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದೆ. ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ. ಉಡುಪಿ ಜಿಲ್ಲೆಯ ಮಲ್ಪೆ ಬೀಚಿನಲ್ಲಿ ಈ ದುರ್ಘಟನೆ ಸಂಭವಿಸಿದೆ . ದೂರದ ಹಾಸನದ ಬೇಲೂರಿನಿಂದ ಪ್ರವಾಸಕ್ಕೆ ಬಂದ ಕುಟುಂಬವೊಂದರ ಮೂವರು ನೀರಿಗೆ ಇಳಿದಿದ್ದರು. ಅಲೆಗಳ ಜೊತೆ ಆಟವಾಡುತ್ತಾ ತೀರದಿಂದ ಸಾಕಷ್ಟು ಮುಂದೆ ಹೋಗಿದ್ದರು.

ಇದಕ್ಕಿದ್ದಂತೆ ಅಲೆಗಳ ಆರ್ಭಟ ಹೆಚ್ಚಿ, ಈ ಬಗ್ಗೆ ಅರಿವಿಲ್ಲದ ಮೂವರು ಪ್ರವಾಸಿಗರು ನೀರು ಪಾಲಾಗಿದ್ದಾರೆ. ಬೀಚ್ ನಿರ್ವಹಣೆ ಮಾಡುವ, ಓಸಿಯನ್ ಅಡ್ವೆಂಚರ್ಸ್ ನವರು, ತಕ್ಷಣ ಜಾಗೃತರಾಗಿ ಕಾರ್ಯಚರಣೆ ನಡೆಸಿದರು. ಬೋಟುಗಳನ್ನು ಬಳಸಿಕೊಂಡು ಕಡಲಿಗಿಳಿದು ಇಬ್ಬರನ್ನು ರಕ್ಷಿಸಿದರು. ಆದರೆ ಮೂರನೇ ವ್ಯಕ್ತಿ ನೀರಿನ ಅಲೆಗೆ ಸಿಲುಕಿರುವುದು ಅರಿವಿಗೆ ಬರುವುದು ತಡವಾಯಿತು.
ಕೂಡಲೇ ಕಾರ್ಯಪ್ರವೃತ್ತರಾಗಿ ಆತನನ್ನು ಮೇಲಕ್ಕೆತ್ತಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಅದಾಗಲೇ ಸಾಕಷ್ಟು ನೀರು ಕುಡಿದಿದ್ದ ಗಿರೀಶ್ ಎಂಬ ಪ್ರವಾಸಿಗ ಕೊನೆಯುಸಿರೆಳೆದ ದುರ್ಘಟನೆ ಸಂಭವಿಸಿದೆ.

ಹಾಸನದ ಬೇಲೂರಿನಿಂದ ಎಂಟು ಮಂದಿಯ ಕುಟುಂಬ ಶೃಂಗೇರಿ ಮೂಲಕ ಮಲ್ಪೆ ಬೀಚ್ ಗೆ ಬಂದಿತ್ತು. ಈ ಪೈಕಿ 42 ವರ್ಷ ಪ್ರಾಯದ ಅನಂತ ಗೌಡ, 27 ವರ್ಷ ಪ್ರಾಯದ ಸಂತೋಷ್ ಹಾಗೂ 26 ವರ್ಷ ದ ಗಿರೀಶ್ ಎಂಬುವರು ನೀರಿನ ಸುಳಿಗೆ ಸಿಕ್ಕಿದರು. ಗಿರೀಶ್ ಮೃತರಾದರೆ ಮತ್ತೆ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಹವಾಮಾನ ವೈಪರಿತ್ಯ ಸಂಭವಿಸಿದಾಗ, ಕಡಲಿನ ಅಲೆಗಳು ಅಬ್ಬರಿಸುವುದು ಸಾಮಾನ್ಯ. ಸ್ಥಳೀಯವಾಗಿ ಇದನ್ನು ಮಾರಿಅಲೆ ಎಂದು ಕರೆಯುತ್ತಾರೆ. ಅಪಾಯದ ಅರಿವಿಲ್ಲದೆ ಪ್ರವಾಸಿಗರು, ನೀರಿಗಿಳಿದಾಗ ಇಂತಹಾ ದುರ್ಘಟನೆಗಳು ಪದೇಪದೇ ಸಂಭವಿಸುತ್ತಿದೆ. ಎಷ್ಟೇ ಎಚ್ಚರಿಕೆಯ ಸೂಚನೆ ನೀಡಿದರೂ ಪ್ರವಾಸಿಗರು ಎಚ್ಚೆತ್ತುಕೊಳ್ಳದ ಕಾರಣ, ಸಾವು ನೋವು ಸಂಭವಿಸುತ್ತಿದೆ.
ಸಾಮಾಜಿಕ ಕಾರ್ಯಕರ್ತ ಈಶ್ವರ ಮಲ್ಪೆ ಇಂದಿನ ದುರ್ಘಟನೆ ಸಂಭವಿಸಿದ ವೇಳೆ ಸಕಾಲದಲ್ಲಿ ಹಾಜರಿದ್ದು ಆಂಬುಲೆನ್ಸ್ ಮೂಲಕ ನೀರುಪಾಲಾದ ಯುವಕರನ್ನು ಮಣಿಪಾಲಕ್ಕೆ ಕೊಂಡೊಯ್ದ ಪರಿಣಾಮ ಎರಡು ಜೀವಗಳು ಉಳಿದಿವೆ. ದುರಾದೃಷ್ಟವಶಾತ್ ಓರ್ವನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಎರಡು ದಿನಗಳ ಕಾಲ ಮಳೆ ಹಾಗೂ ಅಲೆಗಳ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಮಕ್ಕಳ ರಜೆ ಹಾಗೂ ವೀಕೆಂಡ್ ಮಸ್ತಿಯ ಕಾರಣಕ್ಕೆ ಕಡಲ ತೀರಗಳಿಗೆ ಬರುವ ರಾಜ್ಯದ ಇತರ ಮೂಲೆಗಳ ಪ್ರವಾಸಿಗರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್










Click it and Unblock the Notifications