Udupi: ಕರಾವಳಿಯತ್ತ ಬರುವ ಪ್ರವಾಸಿಗರೇ ಎಚ್ಚರ..!: ಕಡಲ ಆರ್ಭಟಕ್ಕೆ ಓರ್ವ ಬಲಿ
ಉಡುಪಿ, ಏಪ್ರಿಲ್ 18: ಕರಾವಳಿಯಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ. ಮಳೆಯ ಮುನ್ಸೂಚನೆಯ ಬೆನ್ನಲ್ಲೇ ಕಡಲು ಆರ್ಭಟಿಸುತ್ತಿದೆ. ಅಲೆಗಳ ಆರ್ಭಟದ ಸುಳಿಗೆ ಮೂವರು ಸಿಲುಕಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಈ ಪೈಕಿ ಓರ್ವ ಮೃತನಾಗಿದ್ದರೆ ಮತ್ತಿಬ್ಬರು ಚೇತರಿಸಿಕೊಂಡಿದ್ದಾರೆ.
ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದೆ. ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ. ಉಡುಪಿ ಜಿಲ್ಲೆಯ ಮಲ್ಪೆ ಬೀಚಿನಲ್ಲಿ ಈ ದುರ್ಘಟನೆ ಸಂಭವಿಸಿದೆ . ದೂರದ ಹಾಸನದ ಬೇಲೂರಿನಿಂದ ಪ್ರವಾಸಕ್ಕೆ ಬಂದ ಕುಟುಂಬವೊಂದರ ಮೂವರು ನೀರಿಗೆ ಇಳಿದಿದ್ದರು. ಅಲೆಗಳ ಜೊತೆ ಆಟವಾಡುತ್ತಾ ತೀರದಿಂದ ಸಾಕಷ್ಟು ಮುಂದೆ ಹೋಗಿದ್ದರು.

ಇದಕ್ಕಿದ್ದಂತೆ ಅಲೆಗಳ ಆರ್ಭಟ ಹೆಚ್ಚಿ, ಈ ಬಗ್ಗೆ ಅರಿವಿಲ್ಲದ ಮೂವರು ಪ್ರವಾಸಿಗರು ನೀರು ಪಾಲಾಗಿದ್ದಾರೆ. ಬೀಚ್ ನಿರ್ವಹಣೆ ಮಾಡುವ, ಓಸಿಯನ್ ಅಡ್ವೆಂಚರ್ಸ್ ನವರು, ತಕ್ಷಣ ಜಾಗೃತರಾಗಿ ಕಾರ್ಯಚರಣೆ ನಡೆಸಿದರು. ಬೋಟುಗಳನ್ನು ಬಳಸಿಕೊಂಡು ಕಡಲಿಗಿಳಿದು ಇಬ್ಬರನ್ನು ರಕ್ಷಿಸಿದರು. ಆದರೆ ಮೂರನೇ ವ್ಯಕ್ತಿ ನೀರಿನ ಅಲೆಗೆ ಸಿಲುಕಿರುವುದು ಅರಿವಿಗೆ ಬರುವುದು ತಡವಾಯಿತು.
ಕೂಡಲೇ ಕಾರ್ಯಪ್ರವೃತ್ತರಾಗಿ ಆತನನ್ನು ಮೇಲಕ್ಕೆತ್ತಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಅದಾಗಲೇ ಸಾಕಷ್ಟು ನೀರು ಕುಡಿದಿದ್ದ ಗಿರೀಶ್ ಎಂಬ ಪ್ರವಾಸಿಗ ಕೊನೆಯುಸಿರೆಳೆದ ದುರ್ಘಟನೆ ಸಂಭವಿಸಿದೆ.

ಹಾಸನದ ಬೇಲೂರಿನಿಂದ ಎಂಟು ಮಂದಿಯ ಕುಟುಂಬ ಶೃಂಗೇರಿ ಮೂಲಕ ಮಲ್ಪೆ ಬೀಚ್ ಗೆ ಬಂದಿತ್ತು. ಈ ಪೈಕಿ 42 ವರ್ಷ ಪ್ರಾಯದ ಅನಂತ ಗೌಡ, 27 ವರ್ಷ ಪ್ರಾಯದ ಸಂತೋಷ್ ಹಾಗೂ 26 ವರ್ಷ ದ ಗಿರೀಶ್ ಎಂಬುವರು ನೀರಿನ ಸುಳಿಗೆ ಸಿಕ್ಕಿದರು. ಗಿರೀಶ್ ಮೃತರಾದರೆ ಮತ್ತೆ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಹವಾಮಾನ ವೈಪರಿತ್ಯ ಸಂಭವಿಸಿದಾಗ, ಕಡಲಿನ ಅಲೆಗಳು ಅಬ್ಬರಿಸುವುದು ಸಾಮಾನ್ಯ. ಸ್ಥಳೀಯವಾಗಿ ಇದನ್ನು ಮಾರಿಅಲೆ ಎಂದು ಕರೆಯುತ್ತಾರೆ. ಅಪಾಯದ ಅರಿವಿಲ್ಲದೆ ಪ್ರವಾಸಿಗರು, ನೀರಿಗಿಳಿದಾಗ ಇಂತಹಾ ದುರ್ಘಟನೆಗಳು ಪದೇಪದೇ ಸಂಭವಿಸುತ್ತಿದೆ. ಎಷ್ಟೇ ಎಚ್ಚರಿಕೆಯ ಸೂಚನೆ ನೀಡಿದರೂ ಪ್ರವಾಸಿಗರು ಎಚ್ಚೆತ್ತುಕೊಳ್ಳದ ಕಾರಣ, ಸಾವು ನೋವು ಸಂಭವಿಸುತ್ತಿದೆ.
ಸಾಮಾಜಿಕ ಕಾರ್ಯಕರ್ತ ಈಶ್ವರ ಮಲ್ಪೆ ಇಂದಿನ ದುರ್ಘಟನೆ ಸಂಭವಿಸಿದ ವೇಳೆ ಸಕಾಲದಲ್ಲಿ ಹಾಜರಿದ್ದು ಆಂಬುಲೆನ್ಸ್ ಮೂಲಕ ನೀರುಪಾಲಾದ ಯುವಕರನ್ನು ಮಣಿಪಾಲಕ್ಕೆ ಕೊಂಡೊಯ್ದ ಪರಿಣಾಮ ಎರಡು ಜೀವಗಳು ಉಳಿದಿವೆ. ದುರಾದೃಷ್ಟವಶಾತ್ ಓರ್ವನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಎರಡು ದಿನಗಳ ಕಾಲ ಮಳೆ ಹಾಗೂ ಅಲೆಗಳ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಮಕ್ಕಳ ರಜೆ ಹಾಗೂ ವೀಕೆಂಡ್ ಮಸ್ತಿಯ ಕಾರಣಕ್ಕೆ ಕಡಲ ತೀರಗಳಿಗೆ ಬರುವ ರಾಜ್ಯದ ಇತರ ಮೂಲೆಗಳ ಪ್ರವಾಸಿಗರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Summer: ಕರ್ನಾಟಕದಲ್ಲಿ ಪ್ರಕೃತಿ ವಿಕೋಪ - ಬೇಸಿಗೆ ನೀರಿನ ಸಂಕಷ್ಟ ತಡೆಗೆ ಸಿದ್ಧತೆ; ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications