ವಕೀಲನಿಂದಲೇ ಯುವತಿಗೆ ಮೋಸ: ನ್ಯಾಯಕ್ಕಾಗಿ ಯುವತಿಯ ಮೊರೆ
ಉಡುಪಿ, ಡಿಸೆಂಬರ್ 21: ವಕೀಲಿಕೆ ಮಾಡಿ ಜನರಿಗೆ ನ್ಯಾಯ ಕೊಡಿಸಬೇಕಾದ ಅಡ್ವೊಕೇಟ್ ಒಬ್ಬ ಯುವತಿಯನ್ನು ಪ್ರೀತಿಯ ಬಲೆಗೆ ಹಾಕಿ, ಮದುವೆಯಾಗುವುದಾಗಿ ನಂಬಿಸಿ ಕೈ ಕೊಟ್ಟಿದ್ದಾನೆ. ಉಡುಪಿ ಜಿಲ್ಲೆಯ ಕಾವಾಡಿಯ ಸುಕುಮಾರ್ ಶೆಟ್ಟಿ ಎಂಬುವವನೇ ಯುವತಿಗೆ ಮೋಸ ಮಾಡಿರುವ ವಕೀಲ.
ಯುವತಿಯೋರ್ವಳನ್ನು ಐದು ವರ್ಷ ಪ್ರೀತಿಸುವ ನಾಟಕವಾಡಿ, ಆಕೆಯನ್ನು ಬಲಾತ್ಕಾರ ಮಾಡಿ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂದು ಯುವತಿಯ ಸಂಬಂಧಿ ಆರೋಪಿಸಿದ್ದಾರೆ. ಮಾತ್ರವಲ್ಲ ಈ ಸಂಬಂಧ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
ಸೋಮವಾರ ಯುವತಿಯ ಭಾವ ಉಮೇಶ್ ಎಂಬುವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2015 ರಿಂದ ಕಾವಾಡಿಯ ಸುಕುಮಾರ್ ಶೆಟ್ಟಿ ಎಂಬಾತ ನನ್ನ ನಾದಿನಿಯನ್ನು ಪ್ರೀತಿಸುತ್ತಿದ್ದ, ವೃತ್ತಿಯಲ್ಲಿ ಆತ ವಕೀಲ.ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಐದು ವರ್ಷ ಕಾಲ ಆಕೆಯನ್ನು ಬಲತ್ಕಾರ ಮಾಡಿದ್ದಾನೆ ಎಂದು ಆರೋಪಿಸಿದ್ದಾನೆ.

ಪ್ರೀತಿಸುವ ವಿಷಯ ಎರಡೂ ಮನೆಯವರಿಗೆ ತಿಳಿದಿತ್ತು. ಆದರೆ ಈ ವರ್ಷ ಫೆಬ್ರವರಿ ನಂತರ ಆತ ಮದುವೆಯಾಗಲು ನಿರಾಕರಿಸಿದ್ದಲ್ಲದೆ, ಯುವತಿಯ ಫೋನ್ ಸಂಪರ್ಕಕ್ಕೂ ಸಿಗುತ್ತಿಲ್ಲ. ಪ್ರೀತಿಸುವಾಗ ಇಲ್ಲದ ಜಾತಿ ನೆಪ ಹೇಳಿ ಈಗ ತಲೆಮರೆಸಿಕೊಂಡಿದ್ದಾನೆ. ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದರೂ ಯಾವುದೇ ಪ್ರಯೋಜನವೂ ಆಗಿಲ್ಲ ಎಂದು ಹೇಳಿದರು.

ರಾಜಕೀಯವಾಗಿ, ಆರ್ಥಿಕವಾಗಿ ಪ್ರಭಾವಿಯಾಗಿರುವ ಸುಕುಮಾರ್ ಶೆಟ್ಟಿ ಪ್ರಭಾವ ಬಳಸಿ ತನಿಖೆಯಾಗದಂತೆ ನೋಡಿಕೊಳ್ಳುತ್ತಿದ್ದಾನೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೂ ಮನವಿ ನೀಡಿದ್ದೇವೆ. ಆತ ಇನ್ನು ನಮ್ಮ ಹುಡುಗಿಯನ್ನು ಮದುವೆಯಾಗುವುದು ಬೇಡ. ಅವನಿಗೆ ಹಲವರ ಜೊತೆ ಅಫೇರ್ ಗಳಿವೆ. ಆತನಿಕೆ ಸೂಕ್ತ ಶಿಕ್ಷ ಆಗಬೇಕು ಎಂದು ಆಗ್ರಹಿಸಿದ್ದಾರೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications