ಕುಂದಾಪುರ ತಾಪಂ ಜೂನಿಯರ್ ಇಂಜಿನಿಯರ್ ಎಸಿಬಿ ಬಲೆಗೆ
ಉಡುಪಿ, ಏಪ್ರಿಲ್ 11: ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಧಿಕಾರಿಗಳು ಹಲವಾರು ಕಡೆ ದಾಳಿ ನಡೆಸುವುದು ಆರಂಭವಾಗಿದೆ. ಇತ್ತೀಚೆಗೆ ಉಡುಪಿ ಅಬಕಾರಿ ಇಲಾಖೆಯ ಅಧಿಕಾರಿ ಮನೆಗೆ ಎಸಿಬಿ ದಾಳಿ ನಡೆಸಿತ್ತು. ಇದೀಗ ಇನ್ನೊಬ್ಬ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದು, ಕರಾವಳಿ ಭಾಗದಲ್ಲಿ ಎಸಿಬಿ ಶಾಕ್ ನೀಡುತ್ತಿದೆ.
ಬೆಳ್ಳಂಬೆಳಗ್ಗೆಯೇ ದಾಳಿ!
ಏ. 10ರಂದು ಬೆಳ್ಳಂಬೆಳಗ್ಗೆ ಉಡುಪಿಯ ಕುಂದಾಪುರ ತಾಲೂಕು ಪಂಚಾಯತ್ ಜೂನಿಯರ್ ಇಂಜಿನಿಯರ್'ಗೆ ಎಸಿಬಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದಾಳಿ ನಡೆಸಲಾಗಿದ್ದು, ಕುಂದಾಪುರದ ನಾನ ಸಾಹೇಬ್ ರಸ್ತೆಯಲ್ಲಿರುವ ಮನೆ ಹಾಗೂ ಕಚೇರಿ ದಾಳಿ ನಡೆಸಿದ ಅಧಿಕಾರಿಗಳು ಕಡತ ಪರಿಶೀಲನೆ ನಡೆಸಿದ್ದಾರೆ.

ಎಸಿಬಿ ಎಸ್ಪಿ ಶೃತಿ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಹಿಂದೆ ಶೃತಿ ನೇತೃತ್ವದಲ್ಲಿ ಹಲವು ಕಡೆ ದಾಳಿ ನಡೆದಿದ್ದು, ತನಿಖೆಯಲ್ಲಿ ಯಾವುದೇ ಮಾಹಿತಿ ಲಭಿಸಿಲ್ಲ. ಕಾರ್ಯಾಚರಣೆಗೆ ಚಿಕ್ಕಮಗಳೂರು, ಉಡುಪಿ ಎಸಿಬಿ ಅಧಿಕಾರಿಗಳು ಸಾಥ್ ನೀಡಿದ್ದರು.












Click it and Unblock the Notifications