ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಕೊಟ್ಟ ಎಸಿಬಿ

ಉಡುಪಿ, ಡಿಸೆಂಬರ್ 28: ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ತಂಡ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದು, ರಾಜ್ಯದ 17 ಕಡೆಗಳಲ್ಲಿ ಎಸಿಬಿ ದಾಳಿ ನಡೆಸಿದೆ. ಐವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಉಡುಪಿಯಲ್ಲೂ ದಾಳಿ ನಡೆಸಿದ್ದಾರೆ.

ಮಂಗಳೂರಿನ ಸರ್ಕಾರಿ ಶಿಕ್ಷಕ ತರಬೇತಿ ಕೇಂದ್ರದ ರೀಡರ್ ಮಂಜುನಾಥಯ್ಯ ಅವರ ಮನೆ ಮೇಲೆ ಎಸಿಬಿ ಪೊಲೀಸರು ಮುಂಜಾನೆ ದಾಳಿ ನಡೆಸಿದ್ದಾರೆ. ಎಸಿಬಿ ಪಶ್ಚಿಮ ವಲಯ ಎಸ್ಪಿ ಶೃತಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

ಉಡುಪಿಯ ಮಣಿಪಾಲದಲ್ಲಿ ಇರುವ ಮಂಜುನಾಥಯ್ಯ ಅವರ ಪ್ರಿಯದರ್ಶಿನಿ ಫ್ಲಾಟ್ ಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳ ತಂಡ ಮನೆಯಲ್ಲಿ ಇಡಲಾಗಿರುವ ಕಡತ ಪರೀಶಿಲನೆ ನಡೆಸುತ್ತಿದ್ದಾರೆ ಸಾರ್ವಜನಿಕ ದೂರಿನ ಆಧಾರದಲ್ಲಿ ಎಸಿಬಿ ದಾಳಿ ನಡೆಸಿದೆ.

ACB team lead by SP Shruthi raided house in Udupi

ಚಿಕ್ಕಮಗಳೂರಿನ ಬಿರೂರು ಹಾಗೂ ಶಿವಮೊಗ್ಗದ ಚೆನ್ನಗಿರಿಯಲ್ಲಿ ಇರುವ ಮಂಜುನಾಥಯ್ಯ ಅವರ ಸಂಬಂಧಿಕರ ಮನೆ ಮೇಲೂ ಎಸಿಬಿ ದಾಳಿ ನಡೆಸಿದೆ. ಈ ಹಿಂದೆ ಮಂಜುನಾಥಯ್ಯ ಉಡುಪಿ ನಗರಸಭೆ ಪೌರಾಯುಕ್ತನಾಗಿ ಕಾರ್ಯನಿರ್ವಹಿಸಿದ್ದರು. ಅದಕ್ಕೂ ಮುನ್ನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಉಡುಪಿ ನಗರ ಸಭೆಯ ಪೌರಾಯುಕ್ತರಾಗಿದ್ದ ಅವಧಿಯಲ್ಲಿ ಮಂಜುನಾಥಯ್ಯ ಅವರ ಮೇಲೆ ಸಾಕಷ್ಟು ಭ್ರಷ್ಟಾಚಾರದ ಆರೋಪ ಕೇಳಿಬಂದಿತು. ಪೌರಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮಂಜುನಾಥಯ್ಯ ಹಟಾವೊ ಉಡುಪಿ ಬಚಾವೊ ಅನ್ನೊ ಆಂದೋಲನ ವನ್ನು ಉಡುಪಿ ಬಿಜೆಪಿ ನಿರಂತರವಾಗಿ ನಡೆಸಿತ್ತು. ನೂತನ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಜುನಾಥಯ್ಯ ಅವರನ್ನು ಮಂಗಳೂರಿಗೆ ಶಿಕ್ಷಣ ಕ್ಷೇತ್ರಕ್ಕೆ ರೀಡರ್ ಅಗಿ ನೇಮಕ ಮಾಡಲಾಗಿತ್ತು .

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+