ಉಡುಪಿ: ಅದಾನಿ ಗ್ರೂಪ್ಗೆ 52 ಕೋಟಿ ದಂಡ
ಉಡುಪಿ, ಜೂ. 4: ಪರಿಸರಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಉಡುಪಿಯಲ್ಲಿರುವ ಗೌತಮ್ ಅದಾನಿಗೆ ಸೇರಿದ ಯುಪಿಸಿಎಲ್ಗೆ ಚೆನ್ನೈನ ಹಸಿರು ದಕ್ಷಿಣ ವಲಯದ ಪೀಠವು 52 ಕೋಟಿ ರುಪಾಯಿ ದಂಡ ವಿಧಿಸಿದೆ.
ಉಡುಪಿಯ ಪಡುಬಿದ್ರೆ ಸಮೀಪದ ಎಲ್ಲೂರು ಗ್ರಾಮದಲ್ಲಿರುವ ಗೌತಮ್ ಅದಾನಿ ಒಡೆತನದ ಕಲ್ಲಿದ್ದಲ್ಲುಆಧಾರಿತ ಉಷ್ಣ ವಿದ್ಯುತ್ ಸ್ಥಾವರದಿಂದ ಸುಮಾರು 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿಯಾಗಿರುವುದು ದೃಢವಾದ ಹಿನ್ನೆಲೆಯಲ್ಲಿ ಹಸಿರು ಪೀಠ ಈ ದಂಡ ವಿಧಿಸಿದೆ.
ಎಲ್ಲೂರಿನ (ಯುಪಿಸಿಎಲ್) ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರ ಕಾರ್ಖಾನೆಯಿಂದ ಸುತ್ತಮುತ್ತಲಿನ ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪಾರಿಣಾಮ ಉಂಟಾಗಿದೆ ಎಂದು ಜನ ಜಾಗೃತಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ರಾಷ್ಟ್ರೀಯ ಹಸಿರು ಪೀಠ ತೀರ್ಪು ನೀಡಿದ್ದು, 52,02,50,000 ರುಪಾಯಿ ದಂಡ ಕಟ್ಟುವಂತೆ ತಿಳಿಸಿದೆ.

ನ್ಯಾಯಲಯದಲ್ಲಿ ಈ ಪ್ರಕರಣ 2005ರಿಂದಲೂ ವಿಚಾರಣೆಯಲ್ಲಿ ಇತ್ತು. ದೀರ್ಘ ವಿಚಾರಣೆ ಮಾಡಿದ ನಂತರ ಹಸಿರು ಪೀಠ ತೀರ್ಪು ನೀಡಿತು. ಕಂಪೆನಿಯಿಂದ 10 ಕಿಮೀಯಲ್ಲಿ ಹಾನಿಯಾಗಿರುವುದು ಕಂಡು ಬಂದಿದ್ದು, ಸದರಿ ಪರಿಹಾರದ ನಷ್ಟ ಭರಿಸುವಂತೆ ಅದು ಸೂಚಿಸಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆಗೆ ನಿರ್ದೇಶನ ನೀಡಿದ್ದು, ಕಾರ್ಖಾನೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗಿರುವ ಬೆಳೆ ಹಾನಿ ಸಮೀಕ್ಷೆ ನಡೆಸಿ ಬೆಳೆ ಹಾನಿಗೊಳಲಾಗಿರುವ ರೈತರಿಗೆ ನಷ್ಟ ಪರಿಹಾರ ನೀಡುವಂತೆ ಸೂಚನೆ ನೀಡಿದೆ.
ಪರಿಹಾರ ಹಣದ ಶೇ. 50ರಷ್ಟು ಹಣವನ್ನು ಪರಿಸರದ ಮೂಲಸೌಕರ್ಯ ಸುಧಾರಣೆಗೆ ಬಳಸಬೇಕು. ಮುಖ್ಯವಾಗಿ ನೀರು ಪೂರೈಕೆ, ಚರಂಡಿ, ಎಸ್ಟಿಪಿ, ಘನತ್ಯಾಜ್ಯ ವಿಲೇವಾರಿ, ಆರೋಗ್ಯ, ಸೌಲಭ್ಯ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಸಬೇಕು. ಮಧ್ಯಂತರ ಆದೇಶದ ಅನ್ವಯ ಯುಪಿಸಿಎಲ್ ಈಗಾಗಲೇ 5 ಕೋಟಿ ನಿಡಿದೆ. ಉಳಿದ ಹಣ ಮುಂದಿನ ಮೂರು ತಿಂಗಳಲ್ಲಿ ಪಾವತಿಸಬೇಕು ಎಂದು ಎನ್ಜಿಟಿ ಹೇಳಿದೆ.

ಕಲ್ಲಿದ್ದಲ್ಲು ಘಟಕಗಳಿಂದ 2010ರಿಂದ 2020ರವರೆಗೆ ಅವಧಿಯಲ್ಲಿ ಕಾರ್ಖಾನೆ ಸುತ್ತಮುತ್ತಲು ಜನರ ಆರೋಗ್ಯದ ಮೇಲೆ ಉಂಟಾಗಿರುವ ಗಂಭೀರ ಪರಿಣಾಮಗಳ ಕುರಿತು ಪರಿಶೀಲನೆ ನಡೆಸಿ ಈಚೆಗೆ ತಜ್ಞರ ಸಮಿತಿ ವರದಿ ಸಲ್ಲಿಸಿತ್ತು. ಕಾರ್ಖಾನೆ ನಿರ್ದಿಷ್ಟಪ್ರದೇಶದ ವ್ಯಾಪ್ತಿಯಲ್ಲಿ ಜನರಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಳವಾಗಿರುವ ಅಂಶವನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications