ಬೆಂಗಳೂರಾಯ್ತು, ಈಗ ಮತ್ತೊಂದು ನಗರದಲ್ಲಿ ಕನ್ನಡಕ್ಕಿಲ್ಲ ಕಿಮ್ಮತ್ತು
ಕರ್ನಾಟಕದಲ್ಲಿ ಬೆಂಗಳೂರಿನ ನಂತರ ಮತ್ತೊಂದು ಪ್ರಮುಖ ನಗರದಲ್ಲಿ ಕನ್ನಡಕ್ಕೆ ಕಿಮತ್ತು ನೀಡುತ್ತಿಲ್ಲ ಎನ್ನುವ ವಿಷಯ ಚರ್ಚೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ನಿರಂತರ ಹೋರಾಟದಿಂದ ನಾಮಫಲಕಗಳಲ್ಲಿ ಕನ್ನಡವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎನ್ನುವ ಕೂಗಿನ ನಡುವೆಯೂ ಕರ್ನಾಟಕದಲ್ಲೇ ಕನ್ನಡಕ್ಕೆ ಕಿಮ್ಮತ್ತು ನೀಡುತ್ತಿಲ್ಲ ಎನ್ನುವುದು ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನ ವಾಣಿಜ್ಯ ಉದ್ದಿಮೆಗಳಲ್ಲಿ (ವಾಣಿಜ್ಯ ಮಳಿಗೆ), ಅಂಗಡಿಗಳ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ನಿರಂತರ ಹೋರಾಟಗಳು ನಡೆದಿದ್ದವು. ಕನ್ನಡಪರ ಸಂಘಟನೆಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಈ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದವು. ಕನ್ನಡಪರ ಹೋರಾಟಗಾರರ ಪ್ರತಿಭಟನೆ ಹಾಗೂ ಒತ್ತಾಯಕ್ಕೆ ಮಣಿದ ಸರ್ಕಾರವೂ ಸಹ ಕನ್ನಡಕ್ಕೆ ಆದ್ಯತೆ ನೀಡುವ ವಿಷಯಕ್ಕೆ ಕಾನೂನಿನ ಬೆಂಬಲವನ್ನೂ ನೀಡಿದೆ.

ಇದೀಗ ಕರಾವಳಿ ಜಿಲ್ಲೆಯ ಉಡುಪಿಯಲ್ಲೂ ಕನ್ನಡ ನಾಮಫಲಕಕ್ಕೆ ಆದ್ಯತೆ ನೀಡುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡದೆ ಇದ್ದರೆ, ಹೋರಾಟ ಮಾಡುವುದಾಗಿ ಕನ್ನಡ ರಕ್ಷಣಾ ವೇದಿಕೆ ಈಗಾಗಲೇ ಎಚ್ಚರಿಕೆ ನೀಡಿದೆ. ಉಡುಪಿ ನಗರದ ಹಲವು ಭಾಗದಲ್ಲಿನ ನಾಮಫಲಕಗಳಲ್ಲಿ ಅನ್ಯ ಭಾಷೆಯನ್ನು ಬಳಸಲಾಗಿದ್ದು. ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂದು ಕರವೇ ಆರೋಪಿಸಿದೆ.
ಉಡುಪಿ ಜಿಲ್ಲೆಯ ನಾಮಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿನ ವಾಣಿಜ್ಯ ಮಳಿಗೆಗಳು, ಹೋಟೆಲ್, ಆಸ್ಪತ್ರೆ, ಶಿಕ್ಷಣ ಸಂಸ್ಥೆ ಹಾಗೂ ಜಾಹೀರಾತು ಫಲಕ ಸೇರಿದಂತೆ ಹಲವು ಕಡೆಗಳಲ್ಲಿ ಸರ್ಕಾರದ ನಿಯಮವನ್ನು ಉಲ್ಲಂಘಿಸಲಾಗಿದೆ. ಇದನ್ನು ತಪ್ಪಿಸಬೇಕು. ರಾಜ್ಯ ಸರ್ಕಾರದ ಮಂಡಿಸಿರುವ ಕಾನೂನಿ ಅನ್ವಯ ಕ್ರಮ ತೆಗೆದುಕೊಳ್ಳಬೇಕು ಎಂದು ಕರವೇ ಆಗ್ರಹಿಸಿದೆ.
ರಾಜ್ಯ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ ವಿಧೇಯಕ)2024 ಅನ್ನು ಮಂಡಿಸಿದೆ. ಈ ವಿಧೇಯಕದ ಅನ್ವಯ ನಾಮಫಲಕಗಳಲ್ಲಿ ಶೇ60ರಷ್ಟು ಕನ್ನಡವನ್ನು ಅಳವಡಿಸಿಕೊಳ್ಳಬೇಕು. ಆದರೆ, ಉಡುಪಿಯಲ್ಲಿ ಈ ನಿಯವನ್ನು ಉಲ್ಲಂಘಿಸಿ ಅನ್ಯಭಾಷೆಗಳನ್ನು ಬಳಸಲಾಗುತ್ತಿದೆ. ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಬರೋಬ್ಬರಿ ಹತ್ತು ತಿಂಗಳುಗಳೇ ಕಳೆದಿವೆ. ಆದರೆ, ಹತ್ತು ತಿಂಗಳಾದರೂ ಉಡುಪಿಯಲ್ಲಿ ಇನ್ನೂ ಕನ್ನಡ ನಾಮಫಲಕಗಳನ್ನು ಅಳವಡಿಸಿಲ್ಲ. ಇದೇ ಮುಂದುವರಿದರೆ, ಅನ್ಯಭಾಷೆಯಲ್ಲಿ ಅಳವಡಿಸಿರುವ ನಾಮಫಲಕಗಳಿಗೆ ಮಸಿ ಬಳಿಯುವುದಾಗಿ ಕರವೇ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿಗೆ ಸೀಮಿತವಾಯ್ತೇ: ನಿರಂತರ ಹೋರಾಟದ ನಂತರ ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಿಕೊಳ್ಳಲಾಗಿದೆ. ಆದರೆ, ಇಲ್ಲೂ ಕೆಲವು ಕಡೆ ಬೆರಳೆಣಿಕೆಯ ಜಾಗದಲ್ಲಿ ಅನ್ಯಭಾಷೆಯ ಬೋರ್ಡ್ಗಳು ಇವೆ. ಆದರೆ, ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡುತ್ತಿಲ್ಲ ಎನ್ನುವ ಆರೋಪ ರಾಜ್ಯದ ವಿವಿಧ ಪ್ರಮುಖ ನಗರಗಳಲ್ಲಿ ಕೇಳಿ ಬಂದಿದೆ.
ಬೆಳಗಾವಿ ಹಾಗೂ ಉಡುಪಿ ಜಿಲ್ಲೆಗಳಲ್ಲಿನ ಅಂಗಡಿಗಳಲ್ಲಿ ಕನ್ನಡ ನಾಮಫಲಕಕ್ಕೆ ಆದ್ಯತೆ ನೀಡುತ್ತಿಲ್ಲ ಎನ್ನುವ ದೂರುಗಳು ಇವೆ. ಹೀಗಾಗಿ, ರಾಜ್ಯದ ಎಲ್ಲ ಭಾಗದಲ್ಲೂ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಆಗ್ರಹಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications