ಅಘೋರಿಗಳ ಮಾಹಾಯಾಗಕ್ಕೆ ಸಾಕ್ಷಿಯಾದ ಉಡುಪಿಯ ತೊಟ್ಟಂ ಕಡಲಕಿನಾರೆ
ಉಡುಪಿ, ನವೆಂಬರ್ 15: ಮಲ್ಪೆಯ ಸಮೀಪದ ತೊಟ್ಟಂ ಕಡಲ ಕಿನಾರೆ ಅಘೋರಿಗಳ ಅಪರೂಪದ ಮಹಾಯಾಗಕ್ಕೆ ಸಾಕ್ಷಿಯಾಗಿದೆ. ಒಂಭತ್ತು ದಿನಗಳ ಮಹಾಯಾಗ ಅಘೋರಿಗಳಿಂದ ನಡೆಯುತ್ತಿದ್ದು, ಸಮಸ್ತ ಲೋಕಕಲ್ಯಾಣಕ್ಕೆ ಪ್ರಾರ್ಥಿಸಿ ಅಕಾಲ ಮೃತ್ಯುಂಜಯ ಮಹಾಯಾಗ ನೆರವೇರಿಸಲಾಗುತ್ತಿದೆ.
ಸೂರ್ಯಗ್ರಹಣ ಮತ್ತು ಚಂದ್ರಗ್ರಹಣದಿಂದ ಲೋಕಕ್ಕೆ ಅತಿವೃಷ್ಟಿ, ಅನಾವೃಷ್ಟಿ ಅಪಾಯ ತಪ್ಪಿಸಲು ಹಾಗೂ ಲೋಕ ಸುಭಿಕ್ಷೆಯಿಂದ ಕೂಡಿರುವಂತೆ ಪ್ರಾರ್ಥಿಸಿ ಮಾಡಲಾಗುತ್ತಿರುವ ಮಹಾಯಾಗ ಇದಾಗಿದೆ ಎಂದು ಹೇಳಲಾಗುತ್ತಿದೆ. ಸದಾ ಸಂಚಾರದಲ್ಲಿರುವ ಅಘೋರಿಗಳು ಇದ್ದಲ್ಲಿಯೇ ಕೈಗೊಳ್ಳುವ ಸಂಕಲ್ಪ ಮಹಾಯಾಗವಾಗಿದೆ.
ಹಿಮಾಲಯದ ದಕ್ಷಿಣ ಭಾರತಕ್ಕೆ ಆಗಮಿಸಿದ ಆಘೋರಿಗಳಿಂದ ಈ ಯಾಗ ನಡೆಯುತ್ತಿದ್ದು, ಅಪಾರ ಪ್ರಮಾಣದ ಅಮೃತ ಬಳ್ಳಿ, ಗರಿಕೆ , ತುಪ್ಪ ಸೇರಿದಂತೆ ಹಲವು ಬಗೆಯ ಸಮಿದೆಯನ್ನು ಯಾಗಕ್ಕೆ ಹವಿಸ್ಸಾಗಿ ಬಳಕೆ ಮಾಡಲಾಗುತ್ತಿದೆ.
ಖಂಡಗ್ರಸ್ತ ಸೂರ್ಯ ಗ್ರಹಣ, ರಕ್ತಚಂದನ ಚಂದ್ರಗ್ರಹಣದಿಂದ ಲೋಕಕ್ಕೆ ಅತಿವೃಷ್ಟಿ, ಅನಾವೃಷ್ಟಿ, ವಿಪತ್ತು ಸಂಭವಿಸದೆ ಲೋಕ ಸುಭಿಕ್ಷೆಯಿಂದ ಕೂಡಿರುವಂತೆ ಯಾಗ ದ ಸಂದರ್ಭದಲ್ಲಿ ಪ್ರಾರ್ಥನೆ ಮಾಡಲಾಗುತ್ತಿದೆ. ದೇಶದ ನಾನಾ ಭಾಗಗಳಲ್ಲಿ ಇದೇ ರೀತಿಯ ಮಹಾಯಾಗ ನಡೆಸಲಾಗುತ್ತಿದ್ದು, ಜನ ಸಂಪರ್ಕವಿಲ್ಲದೆ ಪ್ರತ್ಯೇಕವಾಗುಳಿದು ಅಕಾಲ ಮಹಾಯಾಗವನ್ನು ಮಾಡಲಾಗುತ್ತಿದೆ.

ಗೌಪ್ಯವಾಗಿ ನಡೆಯುತ್ತಿರುವ ಮಹಾಯಾಗ
ಸ್ಥಳೀಯರ ಸಂಪರ್ಕವಿಲ್ಲದೆ ಕೆಲವೇ ವ್ಯಕ್ತಿಗಳ ಸಹಕಾರದೊಂದಿಗೆ ಅತ್ಯಂತ ಗೌಪ್ಯವಾಗಿ ಈ ಯಾಗ ಮಾಡಲಾಗುತ್ತಿದೆ. ಸತತ 9 ದಿನಗಳ ಕಾಲ ಈ ಯಾಗ ಮುಂದುವರಿಯಲಿದೆ. ಏಕಕಾಲದಲ್ಲಿ ಎರಡು ಗ್ರಹಣಗಳು ಬಂದ ಸಂದರ್ಭದಲ್ಲಿ, ಪ್ರಾಕೃತಿಕ ವಿಕೋಪಗಳು ಸಂಭವಿಸುವ ಅಪಾಯ ಹೆಚ್ಚು ಎಂದು ಹೇಳಲಾಗುತ್ತದೆ. ಅದಕ್ಕೆ ಪೂರಕವೋ ಎಂಬಂತೆ ವಿಶ್ವದ ನಾನಾ ಭಾಗಗಳಲ್ಲಿ ಗ್ರಹಣದ ನಂತರ ಭೂಕಂಪಗಳು ಕೂಡ ಸಂಭವಿಸಿವೆ. ಹಾಗಾಗಿ, ದೇಶದಲ್ಲಿ ಯಾವುದೇ ದೊಡ್ಡ ಹಾನಿ ಸಂಭವಿಸಬಾರದು ಎಂಬ ಉದ್ದೇಶದಿಂದ ಅಘೋರಿಗಳು ಕಡಲ ತೀರದಲ್ಲಿ ಅಕಾಲ ಮೃತ್ಯುಂಜಯ ಮಹಾಯಾಗ ನೆರವೇರಿಸುತ್ತಿದ್ದಾರೆ.
ದೇಶದ ಅನೇಕ ಭಾಗಗಳಲ್ಲಿ ಅಘೋರಿಗಳು ಯಾಗ ನಿರತರಾಗಿದ್ದಾರೆ. ಗುರುವಾರ ಈ ಮಹಾಯಾಗ ಕೊನೆಯ ದಿನವಾಗಿದ್ದು ಈ ಯಾಗದಲ್ಲಿ ಮತ್ತಷ್ಟು ಅಘೋರಿಗಳು ಭಾಗಿಯಾಗುವಂತಹ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications