ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರ್ಕಳದ ಅಜೆಕಾರದಲ್ಲಿ ಬಡ ವಿದ್ಯಾರ್ಥಿನಿಗೆ ನವೀಕೃತ ಮನೆ ಹಸ್ತಾಂತರ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಏಪ್ರಿಲ್ 14: ಉಡುಪಿಯ ಯಕ್ಷಗಾನ ಕಲಾರಂಗ ಸಂಸ್ಥೆಯು ಕಾರ್ಕಳ ತಾಲೂಕಿನ ಅಜೆಕಾರದ ವಿದ್ಯಾಪೋಷಕ್ ಫಲಾನುಭವಿ ಅಂತಿಮ ಪದವಿ ಬಡ ವಿದ್ಯಾರ್ಥಿನಿ ನಿರೀಕ್ಷಾಳಿಗೆ ನವೀಕೃತ ಮನೆ 'ಶ್ರೀಗುರು' ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಮನೆಯ ಪ್ರಾಯೋಜಕತ್ವ ವಹಿಸಿದ C4Uನ ಮಾಲೀಕ ಗುರುರಾಜ ಅಮೀನ್ ಮತ್ತು ಜಯಲಕ್ಷ್ಮೀ ಅಮೀನ್ ದಂಪತಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಉದ್ಯಮಿ ಯು.ವಿಶ್ವನಾಥ ಶೆಣೈ, ನಿವೃತ್ತ ಅಧ್ಯಾಪಕ ರಾಜಗೋಪಾಲ ಆಚಾರ್ಯ, ನಿವೃತ್ತ ಬ್ಯಾಂಕ್ ಉದ್ಯೋಗಿ ಬಾಲಕೃಷ್ಣ ಭಟ್ ಕೆ. ಭಾಗವಹಿಸಿದ್ದರು.

Ajekar girl student gets renovated house from Teacher Yaksha Kalaranga

ವಿದ್ಯಾರ್ಥಿನಿ ನಿರೀಕ್ಷಾ ಮಾತನಾಡಿ, ""ವಿದ್ಯಾಪೋಷಕ್ ವಿದ್ಯಾಥಿಗಳ ಎಲ್ಲಾ ರೀತಿಯ ಕಷ್ಟಕ್ಕೆ ಸ್ಪಂದಿಸುತ್ತದೆ. ನಾನು ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆದ ಬಳಿಕ ನನ್ನಂತೆಯೇ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತೇನೆ'' ಎಂದು ಹೃದಯತುಂಬಿ ತನ್ನ ಅನಿಸಿಕೆ ವ್ಯಕ್ತಪಡಿಸಿದಳು. ಈ ಸಂಸ್ಥೆ ನಿರ್ಮಿಸಿ ಕೊಡುತ್ತಿರುವ 19ನೇ ಮನೆಯಾಗಿದೆ.

Recommended Video

#Covid19Updates: 8155 ಜನರಿಗೆ ಕೋವಿಡ್ ಸೋಂಕು.. 23 ಮಂದಿ ಬಲಿ | Oneindia Kannada
Ajekar girl student gets renovated house from Teacher Yaksha Kalaranga
English summary
A poor student gets a renovated house from her teacher andYaksha Kalaranga in Ajekar, Karkala taluk in Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X