ಕೃಷ್ಣಾಪುರ ಮಠದ ಪರ್ಯಾಯ ಪೂರ್ವ ಅಕ್ಕಿ ಮುಹೂರ್ತ ಸಂಪನ್ನ
ಉಡುಪಿ, ಫೆಬ್ರವರಿ 18: ಮುಂದಿನ ಜನವರಿಯಲ್ಲಿ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ಕೃಷ್ಣಮಠದ ರಥಬೀದಿಯಲ್ಲಿ ವೈಭವದ ಅಕ್ಕಿ ಮುಹೂರ್ತ ನಡೆಯಿತು.
ಅನ್ನಬ್ರಹ್ಮನ ಕ್ಷೇತ್ರ ಎಂದು ಕರೆಯಲ್ಪಡುವ ಕೃಷ್ಣಮಠದಲ್ಲಿ ಅನ್ನಪ್ರಸಾದಕ್ಕೆ ಹೆಚ್ಚಿನ ಮಹತ್ವವಿದ್ದು, ಈ ಹಿನ್ನೆಲೆಯಲ್ಲಿ ಪರ್ಯಾಯ ಪೀಠ ಅಲಂಕರಿಸುವ ಮಠಾಧೀಶರು ನಿತ್ಯ ಸಾವಿರಾರು ಭಕ್ತರಿಗೆ ಅನ್ನಪ್ರಸಾದ ನೀಡುತ್ತಾರೆ. ಹೀಗಾಗಿ ಪರ್ಯಾಯದ ಅವಧಿಯಲ್ಲಿ ಅನ್ನಪ್ರಸಾದ ಸಾಂಗವಾಗಿ ನೆರವೇರಲು, ಅಕ್ಕಿ ಮುಹೂರ್ತ ನಡೆಸುವುದು ವಾಡಿಕೆ.
ಅದರಂತೆ 2022ರ ಜನವರಿಯಂದು ನಡೆಯಲಿರುವ ಕೃಷ್ಣಾಪುರ ಮಠದ ಕೃಷ್ಣನ ಪೂಜಾಧಿಕಾರಕ್ಕೆ ಮುನ್ನ ಐದು ಮಹೂರ್ತಗಳು ನೆರವೇರಲಿದ್ದು, ಅನ್ನ ಪ್ರಸಾದಕ್ಕೆ ಇಂದಿನಿಂದ ಅಕ್ಕಿ ಸಂಗ್ರಹ ನಡೆಯಲಿದೆ.

ಕೃಷ್ಣಾಪುರ ಮಠಾಧೀಶರ ನೇತೃತ್ವದಲ್ಲಿ ಅಕ್ಕಿ ಮುಹೂರ್ತ ಸಂಪನ್ನಗೊಂಡಿದ್ದು, ಅಕ್ಕಿಯ ಮುಡಿಗಳನ್ನು ವಿಶೇಷ ಮೆರವಣಿಗೆಯಲ್ಲಿ ಕೊಂಡೊಯ್ದು ಪೂಜೆ ಸಲ್ಲಿಸಲಾಯಿತು. ಕೃಷ್ಣ ಮಠ- ಅನಂತೇಶ್ವರ- ಚಂದ್ರ ಮೌಳೇಶ್ವರ ದೇವಸ್ಥಾನದಲ್ಲಿ ಅಕ್ಕಿಮುಡಿಗೆ ಪೂಜೆ ಸಲ್ಲಿಸಿ, ನಂತರ ಮಠದೊಳಗೆ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಅಕ್ಕಿ ಮುಹೂರ್ತದಲ್ಲಿ ಅಷ್ಟ ಮಠಗಳ ಮಠಾಧೀಶರು ಪಾಲ್ಗೊಂಡರು. ಕೃಷ್ಣಾಪುರ ಮಠದಲ್ಲಿ ಎಲ್ಲಾ ಸ್ವಾಮೀಜಿಗಳಿಗೆ ಗೌರವ ಅರ್ಪಣೆ ನಡೆಯಿತು. ಈಗಾಗಲೇ ಬಾಳೆ ಮಹೂರ್ತ ಈ ಹಿಂದೆಯೇ ನೆರವೇರಿದ್ದು, ಮಠದ ಎಲ್ಲಾ ಜಮೀನು, ಗದ್ದೆಗಳಲ್ಲಿ ಬಾಳೆ ಬೆಳೆಯುತ್ತಿದೆ. ಮುಂದೆ ಕಟ್ಟಿಗೆ ಮತ್ತು ಚಪ್ಪರ ಮಹೂರ್ತಗಳು ನೆರವೇರಲಿವೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications