ಅಕ್ರಮ-ಸಕ್ರಮ ದಂಡದಲ್ಲಿ ಕಡಿತ, ಅರ್ಜಿ ಹಾಕಿ
ಉಡುಪಿ, ಜುಲೈ 28 : 'ಕಂದಾಯ ತಿದ್ದುಪಡಿ ಕಾಯ್ದೆ 94ಸಿ ಅನ್ವಯ ಅಕ್ರಮ- ಸಕ್ರಮಕ್ಕೆ ಸಲ್ಲಿಸಿರುವ ಯಾವುದೇ ಅರ್ಜಿಯನ್ನು ತಿರಸ್ಕರಿಸಬಾರದು' ಎಂದು ಅಧಿಕಾರಿಗಳಿಗೆ ಮೀನುಗಾರಿಕೆ, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಸೂಚನೆ ನೀಡಿದರು.
ಉಡುಪಿಯಲ್ಲಿ ಗುರುವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, '94ಸಿ ಅನ್ವಯ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತಿರಸ್ಕರಿಸಬಾರದು. ಅರ್ಜಿದಾರರ ಮನೆ, ಡೀಮ್ಡ್ ಅರಣ್ಯ ರಸ್ತೆ ಪಕ್ಕದಲ್ಲಿ, ಅರಣ್ಯ, ಪರಂಬೋಕು ಜಾಮೀನು, ಕರಾವಳಿ ನಿಯಂತ್ರಣ ವಲಯ ಎಲ್ಲಿ ಇದ್ದರೂ ಸರಿಯೆ ಮೊದಲು ಅರ್ಜಿಯನ್ನು ಸ್ವೀಕರಿಸಿ. ಆ ಸಮಸ್ಯೆ ಬಗೆಹರಿಸಿ ಅರ್ಜಿ ಇತ್ಯರ್ಥಪಡಿಸಬಹುದು' ಎಂದರು.[ಅಕ್ರಮ-ಸಕ್ರಮ ದಂಡ ಶುಲ್ಕ ನಿಗದಿ, ರಿಯಾಯಿತಿ]

'ದಂಡದ ಪ್ರಮಾಣವನ್ನು ಕಡಿಮೆ ಮಾಡಲಾಗಿದ್ದು ಅಳತೆಯ ಆಧಾರದಲ್ಲಿ ಸಾಮಾನ್ಯ ವರ್ಗದವರಿಗೆ ರೂ. 2 , ರೂ.4 ಹಾಗೂ ರೂ. 6 ಸಾವಿರ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ರೂ. 1, ರೂ.2 ಮತ್ತು ರೂ.3 ಸಾವಿರ ನಿಗದಿಪಡಿಸಲಾಗಿದೆ' ಎಂದು ಹೇಳಿದರು.[ನಗರ ಪ್ರದೇಶದಲ್ಲಿ ಅಕ್ರಮ-ಸಕ್ರಮ : ಏನು, ಹೇಗೆ?]
'ಯಾವುದೇ ಅರ್ಜಿದಾರರಿಂದ ಒಂದೇ ಒಂದು ರೂ. ಪಡೆಯದಂತೆ ತಹಶೀಲ್ದಾರ್ ಅವರೇ ಎಚ್ಚರಿಕೆ ವಹಿಸಬೇಕು. ಭ್ರಷ್ಟಾಚಾರ ರಹಿತವಾಗಿ ಅಕ್ರಮ-ಸಕ್ರಮ ನಡೆಯಬೇಕು. ನಗರ ಪ್ರದೇಶದಲ್ಲಿ 600 ಅಡಿಯಷ್ಟು ಮಾತ್ರ ಸಕ್ರಮಕ್ಕೆ ನಿರ್ಧರಿಸಲಾಗಿದೆ. ಇದನ್ನು ಇನ್ನೂ ಹೆಚ್ಚಿಸುವಂತೆ ಮನವಿ ಮಾಡಲಾಗುವುದು' ಎಂದು ತಿಳಿಸಿದರು.[ಕರ್ನಾಟಕ : ಅಕ್ರಮ-ಸಕ್ರಮ, ನಿಮಗಿದು ತಿಳಿದಿರಲಿ]
ಕಿಂಡಿ ಅಣೆಕಟ್ಟುಗಳ ನಿರ್ವಹಣೆ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ರಚಿಸುವ ಸಮಿತಿಗಳಿಗೆ ನೀಡಲು ನಿರ್ಧರಿಸಿದ್ದರೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿ ಗ್ರಾಮ ಪಂಚಾಯತಿಗಳಿಗೆ ಈ ಬಗ್ಗೆ ವಿವರವಾದ ಮಾಹಿತಿ ನೀಡದೆ ಕೇವಲ ಸಮಿತಿ ರಚಿಸಿ ಎಂದು ಪತ್ರ ಬರೆದಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications