ಕೊಲ್ಲೂರು ಮೂಕಾಂಬಿಕೆ ದೇವಾಲಯದಲ್ಲಿ ಸಾರ್ವಕಾಲಿಕ ದಾಖಲೆ
ಉಡುಪಿ, ಮೇ 12: ಜಿಲ್ಲೆಯ ಪುರಾಣ ಪ್ರಸಿದ್ದ ಕೊಲ್ಲೂರು ಶ್ರೀಮೂಕಾಂಬಿಕೆ ದೇವಾಲಯದ ಕಾಣಿಕೆ ಹುಂಡಿಯ ಎಣಿಕೆ ಕಾರ್ಯ ಮುಗಿದಿದ್ದು, ದಾಖಲೆ ಮೊತ್ತದ ಹಣ ಸಂಗ್ರಹವಾಗಿದೆ. ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಧರ್ಮದಾಯ (ಮುಜರಾಯಿ) ಇಲಾಖೆಯ ಮೊದಲ ಐದು ಶ್ರೀಮಂತ ದೇವಾಲಯಗಳ ಪೈಕಿ ಕೊಲ್ಲೂರು ದೇವಾಲಯ ಕೂಡಾ ಒಂದು.
ಕೊರೊನಾ ನಂತರದ ನಿರ್ಬಂಧ ಸಡಿಲಿಕೆ, ಶಾಲಾ ಕಾಲೇಜುಗಳಿಗೆ ರಜೆ, ಸಾಲುಸಾಲು ಸರಕಾರೀ ರಜೆಯ ಕಾರಣಗಳಿಂದಾಗಿ, ಕಳೆದ ಕೆಲವು ದಿನಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದಾರೆ.
ಕಾಣಿಕೆ ಹುಂಡಿ ಎಣಿಕೆ ಬುಧವಾರ (ಮೇ 11) ಬುಧವಾರ ಮುಗಿದಿದ್ದು, ದೇವಾಲಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಾಣಿಕೆ ರೂಪದ ಹಣ 1.53 ಕೋಟಿ ಸಂಗ್ರಹವಾಗಿದೆ. ಇದುವರೆಗೆ, ನಾಲ್ಕು ತಿಂಗಳ ಕೆಳಗೆ 1.39 ಕೋಟಿ ಸಂಗ್ರಹವಾಗಿದ್ದೇ ಅತಿಹೆಚ್ಚಾಗಿತ್ತು.

ಬುಧವಾರ ಕಾಣಿಕೆ ರೂಪದಲ್ಲಿ 2.5 ಕೆಜಿ ಬಂಗಾರ ಮತ್ತು 4.2 ಕೆಜಿ ಬೆಳ್ಳಿವಸ್ತುಗಳೂ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ರಾಜ್ಯದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ನಂತರ, ಮುಜರಾಯಿ ಇಲಾಖೆಗೆ ಅತಿಹೆಚ್ಚು ಆದಾಯ ತಂದು ಕೊಡುವ ದೇವಾಲಯಗಳ ಪೈಕಿ ಕೊಲ್ಲೂರು ಮೂಕಾಂಬಿಕೆ ದೇವಾಲಯ ಕೂಡಾ ಒಂದು.
ಕೊಲ್ಲೂರು ಕ್ಷೇತ್ರಕ್ಕೆ ಸರಾಸರಿ ಹತ್ತು ಸಾವಿರ ಭಕ್ತರು ಆಗಮಿಸುತ್ತಿದ್ದಾರೆ. ಪ್ರಮುಖವಾಗಿ, ಕೇರಳದಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಜಿಲ್ಲೆಯ ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಈ ದೇವಾಲಯವಿದೆ.

ಮಾರ್ಚ್ ತಿಂಗಳಲ್ಲಿ ನಡೆದ ದೇವಾಲಯದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ, ವ್ಯಾಪಾರ ನಡೆಸಲು ಹಿಂದೂಯೇತರರಿಗೆ ಅವಕಾಶ ನೀಡದೇ ಇದ್ದದ್ದು ಸುದ್ದಿಯಾಗಿತ್ತು. ಇದಾದ ನಂತರ, ಟಿಪ್ಪು ಸುಲ್ತಾನ್ ಹೆಸರಿನಲ್ಲಿ ನಡೆಸಲಾಗುವ ಸಲಾಂ ಮಂಗಳಾರತಿ ನಿಲ್ಲಿಸುವ ವಿಚಾರದಲ್ಲೂ ದೇವಾಲಯದ ಆಡಳಿತ ಮಂಡಳಿ ಸ್ಪಷ್ಟನೆ ನೀಡಬೇಕಾಗಿ ಬಂದಿತ್ತು.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications