ಆರ್.ಎಸ್.ಎಸ್ ಮತ್ತು ಸಾಧುಗಳು ಮನುಸ್ಮೃತಿಯನ್ನು ಒಪ್ಪುವುದಿಲ್ಲ:ಪೇಜಾವರ ಶ್ರೀ
ಉಡುಪಿ, ನವೆಂಬರ್ 25 : ಉಡುಪಿಯಲ್ಲಿ ನಡೆಯುತ್ತಿರುವ 'ಧರ್ಮ ಸಂಸದ್' ನಲ್ಲಿ ಅಸ್ಪೃಶ್ಯತೆಯ ವಿರುದ್ದ ನಿರ್ಣಯಗಳನ್ನು ಅಂಗೀಕಾರ ಮಾಡಿದ ನಂತರ ಮಾತನಾಡಿದ ವಿ.ಎಚ್.ಪಿ ಅಂತತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ಭಾಯ್ ತೊಗಾಡಿಯಾ 'ಅಸ್ಪೃಶ್ಯತೆ ವಿರುದ್ಧ ಬಗ್ಗೆ ಎಲ್ಲಾ ಸಂತರು ಅಭಿಪ್ರಾಯ ಮಂಡಿಸಿದ್ದಾರೆ. ಅಂಬೇಡ್ಕರ್ ಕನಸು ಶೀಘ್ರ ನನಸಾಗಲಿದೆ' ಎಂದರು,
ಮೊದಲ ದಿನಕ್ಕಿಂತಲೂ ಎರಡನೇಯ ದಿನ ಉತ್ಸಾಹದ ಗೋಷ್ಠಿಗಳು, ಕ್ರಾಂತಿಕಾರಿ ಹೇಳಿಕೆಗಳು, ಕೆಲವು ವಿವಾದಾತ್ಮಕ ಹೇಳಿಕೆಗಳು ಧರ್ಮ ಸಂಸದ್ ವೇದಿಕೆಯಿಂದ ಹೊರಬಿದ್ದವು. ಬ್ರಾಹ್ಮಣಪರ ಎಂಬ ಹಣೆಪಟ್ಟಿಯನ್ನು ಕಳೆದುಕೊಳ್ಳಲು ಕೊಂಟಕಟ್ಟಿ ನಿಂತವರಂತೆ ಮಾತನಾಡಿದ ಪ್ರವೀಣ್ ಭಾಯ್ ತೊಗಾಡಿಯಾ 'ಸಂವಿಧಾನದಲ್ಲಿ ಉಲ್ಲೇಖವಾಗಿರುವುದು ಕಾರ್ಯರೂಪಕ್ಕೆ ಬರಲಿದೆ' ಎಂದು ಆಶಾವಾದ ವ್ಯಕ್ತಪಡಿಸಿದರು.

ಅಸ್ಪೃಶ್ಯತೆ ಹಿಂದೂ ಧರ್ಮದಲ್ಲಿ ಇಲ್ಲವೆಂದು ಪ್ರತಿಪಾದಿಸಿದ ಪ್ರವೀಣ್ ಭಾಯ್ ತೊಗಾಡಿಯಾ 'ಪ್ರಧಾನಿ ಮತ್ತು ರಾಷ್ಟ್ರಪತಿಗಳೇ ಇದಕ್ಕೆ ಉದಾಹರಣೆ ಇಲ್ಲಿ ಯರೂ ಮೇಲಲ್ಲ ಕೀಳಲ್ಲ ಎಂಬುದು ಕಣ್ಣ ಮುಂದಿರುವ ಸತ್ಯ' ಎಂದರು.
ಇದೇ ವೇದಿಕೆಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, ದಲಿತವಿರೋಧಿ, ಬ್ರಾಹ್ಮಣಪರ ಗ್ರಂಥ ಎಂದೇ ಪರಿಗಣಿತವಾದ 'ಮನುಸ್ಮೃತಿ'ಯ ವಿರುದ್ಧವಾಗಿ ಕಿಡಿಕಾರಿ ಆಶ್ಚರ್ಯ ಹುಟ್ಟಿಸಿದರು. 'ಆರ್.ಎಸ್.ಎಸ್ ಮತ್ತು ಸಾಧು ಸಂತರು ಮನುಸ್ಮೃತಿಯನ್ನು ಒಪ್ಪುವುದಿಲ್ಲ' ಎಂದು ಕಂಡಾತುಂಡವಾಗಿ ಹೇಳಿದರು.
"ಕೆಲ ಜಾತ್ಯತೀತವಾದಿಗಳು ಆರ್ಎಸ್ಎಸ್, ವಿಎಚ್ಪಿ ಮತ್ತು ಹಿಂದೂ ಧರ್ಮದ ಸ್ವಾಮೀಜಿಗಳು ಮನುಸ್ಮೃತಿಯನ್ನು ಬೆಂಬಲಿಸುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಹಿಂದೂ ಧರ್ಮದ ಬಹುತೇಕ ಸಾಧು ಸಂತರು ಮನುಸ್ಮೃತಿಯನ್ನು ಬೆಂಬಲಿಸುವುದಿಲ್ಲ' ಎಂದರು.

ವಿಶ್ವಹಿಂದೂ ಪರಿಷತ್ ನ ಅಂತರರಾಷ್ಟ್ರೀಯ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಮಾತನಾಡಿ " ಕೇರಳದ ಪಾರ್ಥಸಾರಥಿ ದೇವಸ್ಥಾನವನ್ನು ಸರ್ಕಾರ ವಶಮಾಡಿಕೊಂಡಿದೆ, ಹಿಂದೂಗಳ ಎಲ್ಲಾ ದೇವಸ್ಥಾನ ಸರ್ಕಾರ ಕಬ್ಜಾ ಮಾಡಲಿದೆ, ಕರ್ನಾಟಕದಲ್ಲಿ ಚುನಾವಣೆ ನಂತರ ಒಂದೂ ದೇವಸ್ಥಾನ ಹಿಂದೂಗಳ ಬಳಿ ಉಳಿಯುವುದಿಲ್ಲ, ಚುನಾವಣೆ ಇರೋದರಿಂದ ಸರ್ಕಾರ ಈಗ ಸುಮ್ಮನಿದೆ' ಎಂದು ಎಚ್ಚರಿಸಿದರು.
'ಹಿಂದೂ ದೇವಸ್ಥಾನ ಮಾತ್ರ ನಿಮಗೆ ಯಾಕೆ ಬೇಕು, ಮಸೀದಿ- ಚರ್ಚ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ, ಮಸೀದಿ- ಚರ್ಚ್ ನ್ನು ಮುಟ್ಟುವ ಧೈರ್ಯ ಸರ್ಕಾರಕ್ಕಿಲ್ಲ,' ಎಂದು ಸರ್ಕಾರಗಳಿಗೆ ಸವಾಲ್ ಎಸೆದರು.
ದೇವಸ್ಥಾನ ಸಾಮಾಜೀಕರಣವಾಗಬೇಕು, ಸರ್ಕಾರೀಕರಣ ಆಗುವುದಕ್ಕೆ ಧರ್ಮ ಸಂಸದ್ ವಿರೋಧವಿದೆ, ದೇವಸ್ಥಾನದ ಹಣವೆಲ್ಲ ಸರ್ಕಾರದ ಖಜಾನೆ ಸೇರುತ್ತಿದೆ, ದೇಗುಲ ಅದೇ ಧರ್ಮದ ವಶದಲ್ಲಿ ಇರಬೇಕು, ಈ ಬಗ್ಗೆ ಕಾನೂನಿನಲ್ಲೂ ಉಲ್ಲೇಖವಿದೆ, ದೇವಸ್ಥಾನ ಯಾರ ಸುಪರ್ದಿಗೆ ಬರಬೇಕೆಂದು ಮುಂದೆ ನಿರ್ಣಯಿಸುತ್ತೇವೆ ಎಂದು ಅವರು ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications