Karkala: ಕಾರ್ಕಳದಲ್ಲಿ ಸಿಡಿದ ಸುಡುಮದ್ದು ಘಟಕ: ಮಹಿಳೆಯರ ಸ್ಥಿತಿ ಗಂಭೀರ
ಉಡುಪಿ, ಮೇ 08: ಸುಡುಮದ್ದು ತಯಾರಿಕಾ ಘಟಕ ಏಕಾಏಕಿ ಸಿಡಿದು ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ನಡೆದಿದೆ.
ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಹಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಎಂದಿನಂತೆ ಇಂದು ( ಮೇ 08) ಬೆಳಗ್ಗೆ ಸುಡುಮದ್ದು ತಯಾರಿಕೆ ಆರಂಭಿಸಲಾಗಿತ್ತು ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಸ್ಫೋಟಗೊಂಡಿದೆ. ಘಟನೆಯಲ್ಲಿ ಅಲ್ಲೇ ಕೆಲಸ ಮಾಡುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡದಲ್ಲಿ ಸ್ಫೋಟ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು, ಕಟ್ಟಡಕ್ಕೆ ಸಂಪೂರ್ಣ ಹಾನಿಯಾಗಿದೆ. ಇನ್ನು ಅನಿರೀಕ್ಷಿತವಾಗಿ ಸ್ಫೋಟ ಸಂಭವಿಸಲು ಕಾರಣ ಏನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಬೆಳ್ಳಂಬೆಳಿಗ್ಗೆ ಸಮುದ್ರ ಪಾಲಾಗುತ್ತಿದ್ದ ಯುವಕರ ರಕ್ಷಣೆ
ಉಡುಪಿ: ಮೇ 08 ಬುಧವಾರ ಬೆಳ್ಳಂಬೆಳಗ್ಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಣೆ ಮಾಡಿರುವ ಘಟನೆ ಉಡುಪಿ ತಾಲೂಕಿನ ಮಲ್ಪೆ ಸಮೀಪದ ತೊಟ್ಟಂ ಬೀಚ್ನಲ್ಲಿ ನಡೆದಿದೆ. ಬಳ್ಳಾರಿಯ ಕೊಟ್ಟೂರು ತಾಲೂಕಿನಿಂದ ಬಂದಿದ್ದ ಯುವಕರ ತಂಡ, ಇಂದು ಬೆಳ್ಳಂಬೆಳಗ್ಗೆ ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದಾರೆ.
ಈ ವೇಳೆ ಬೃಹತ್ ದೊಡ್ಡ ಗಾತ್ರದ ಅಲೆಗಳು ಅಪ್ಪಳಿಸಿದ್ದು, ಇಬ್ಬರು ಯುವಕರು ಅಲೆಗೆ ಸಿಲುಕಿ ಒದ್ದಾಡುತ್ತಿದ್ದರು. ಈ ಬಗ್ಗೆ ಕೂಡಲೇ ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ಸಮುದ್ರಕ್ಕಿಳಿದು ಯುವರನ್ನು ರಕ್ಷಿಸಿದ್ದಾರೆ. ಸದ್ಯ ಗೋಪಿನಾಥ್ (25) ಹಾಗೂ ರಂಗನಾಥ್ (26) ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications