ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಲ್ಲೆಗೆ ಪ್ರತೀಕಾರ:ಉಡುಪಿಯಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಕೊಲೆ

|
Google Oneindia Kannada News

ಉಡುಪಿ, ಏಪ್ರಿಲ್ 29:ಹಲ್ಲೆ ಪ್ರಕರಣವೊಂದರ ಪ್ರತೀಕಾರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಉಡುಪಿ ಹೊರವಲಯದ ಮಲ್ಪೆ ಬೀಚ್ ‌ಸಮೀಪ ಮಲಗಿದ್ದ ಯುವಕನಿಗೆ ದೊಣ್ಣೆಯಿಂದ ಹೊಡೆದು ಕೊಲೆಗೆ ಯತ್ನಿಸಿದ ಆರೋಪಿಯನ್ನು ದುಷ್ಕರ್ಮಿಗಳ ತಂಡ ಅದೇ ದೊಣ್ಣೆಯಿಂದ ಹೊಡೆದು ಕೊಲೆಗೈದ ಘಟನೆ ನಡೆದಿದೆ.

ಮಲ್ಪೆ ಕೊಳದ ವಿಠೋಭಾ ಭಜನಾ ಮಂದಿರದ ಬಳಿ ಈ ಘಟನೆ ನಡೆದಿದೆ.ಘಟನೆಯಲ್ಲಿ ಕೊಲೆಯಾದ ವ್ಯಕ್ತಿಯನ್ನು ಹೈದರಾಬಾದ್ ನಿವಾಸಿ ಗುರುವೇಲು(35) ಎಂದು ಗುರುತಿಸಲಾಗಿದೆ. ಗುರುವೇಲು ಇತ್ತೀಚೆಗೆ (ಏಪ್ರಿಲ್ 27) ಮಲ್ಪೆ ಕಡಲ ಕಿನಾರೆ ಬಳಿ ಮಲಗಿದ್ದ ಅಮಿತ್ (27) ಎಂಬುವವರ ಮೇಲೆ ದೊಣ್ಣೆಯಿಂದ ತೀವ್ರ ಹಲ್ಲೆ ನಡೆಸಿದ್ದರು.

ಕೋಟ ಡಬಲ್ ಮರ್ಡರ್:ಉಡುಪಿ ಜಿ.ಪಂ.ಸದಸ್ಯ ಸೂತ್ರಧಾರಿ, ಬಂಧಿತರ ಸಂಖ್ಯೆ 6ಕ್ಕೆ ಏರಿಕೆಕೋಟ ಡಬಲ್ ಮರ್ಡರ್:ಉಡುಪಿ ಜಿ.ಪಂ.ಸದಸ್ಯ ಸೂತ್ರಧಾರಿ, ಬಂಧಿತರ ಸಂಖ್ಯೆ 6ಕ್ಕೆ ಏರಿಕೆ

ಈ ಘಟನೆಯಲ್ಲಿ ಅಮಿತ್ ತೀವ್ರವಾಗಿ ಗಾಯಗೊಂಡಿದ್ದು, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳಿಕ ವಿಠೋಭಾ ಭಜನಾ ಮಂದಿರದ ಬಳಿ ಗುರುವೇಲು ಕೈಯ್ಯಲ್ಲಿ ದೊಣ್ಣೆ ಹಿಡಿದು ನಿಂತಿದ್ದನ್ನು ಗಮನಿಸಿದ್ದ ಯುವಕರ ತಂಡ ಗುರುವೇಲು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗುರುವೇಲು ಸ್ಥಳದಲ್ಲೇ ಮೃತಪಟ್ಟಿದ್ದಾರೆ

Andra Man hacked to death at Malpe

 ಭೂ ವಿವಾದ: ಕೋಟದಲ್ಲಿ ಯುವಕರಿಬ್ಬರ ಭೀಕರ ಕೊಲೆ ಭೂ ವಿವಾದ: ಕೋಟದಲ್ಲಿ ಯುವಕರಿಬ್ಬರ ಭೀಕರ ಕೊಲೆ

ಈ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿರುವ ಮಲ್ಪೆ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

English summary
A group of youth attacked Andra man repeatedly to death at Malpe near Udupi.The deceased man identified as Guruvelu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X