ರಾಮಮಂದಿರಕ್ಕೆ ಅಂಜನಾದ್ರಿ ಕಲ್ಲು: ಪೇಜಾವರ ಶ್ರೀಗಳ ಮೂಲಕ ಅಯೋಧ್ಯೆಗೆ
ಉಡುಪಿ, ಜುಲೈ 31: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಕಟ್ಟಲಾಗುತ್ತಿದ್ದು, ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಶಿಲಾನ್ಯಾಸ ನಡೆಯಲಿದೆ. ರಾಮಮಂದಿರ ಶಿಲಾನ್ಯಾಸದ ಹಿನ್ನೆಲೆಯಲ್ಲಿ ದೇಶವ್ಯಾಪಿ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿದೆ.
ಇಡೀ ದೇಶದ ಪವಿತ್ರ ಕ್ಷೇತ್ರಗಳ ಮಣ್ಣು ಮತ್ತು ನೀರಿನ ಸಂಗ್ರಹ ಒಂದೆಡೆ ನಡೆಯುತ್ತಿದ್ದರೆ, ನಮ್ಮ ಕರ್ನಾಟಕ ರಾಜ್ಯದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಶಿಲೆಯನ್ನು ಮೆರವಣಿಗೆ ಮೂಲಕ ತಂದು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಒಪ್ಪಿಸಲಾಗಿದೆ.
ಶ್ರೀರಾಮ ಸೇನೆಯ ರಾಜ್ಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮೆರವಣಿಗೆಯ ಮೂಲಕ ಶಿಲೆಯನ್ನು ಹೊತ್ತು ತಂದರು. ಬ್ರಹ್ಮಾವರ ತಾಲೂಕು ನೀಲಾವರ ಮಠದ ಆವರಣದಲ್ಲಿ ನಡೆದ ಧಾರ್ಮಿಕ ಆಚರಣೆಯ ನಂತರ ಶಿಲೆಯನ್ನು ಪೇಜಾವರ ಸ್ವಾಮೀಜಿ ಅವರಿಗೆ ಹಸ್ತಾಂತರ ಮಾಡಲಾಯಿತು. ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಶಿಲೆಗೆ ಅಭಿಷೇಕ ನಡೆಸಿ, ಆರತಿ ಮಾಡಿ ಸ್ವೀಕಾರ ಮಾಡಿದರು. ಅಯೋಧ್ಯೆಯ ರಾಮಮಂದಿರದ ಶಿಲಾನ್ಯಾಸಕ್ಕೂ ಮುನ್ನ ಈ ಶಿಲೆಯನ್ನು ಅಯೋಧ್ಯೆಗೆ ತಲುಪಿಸುವುದಾಗಿ ಭರವಸೆ ನೀಡಿದರು.

ಹನುಮಂತ ಶ್ರೀರಾಮನ ಪರಮಭಕ್ತ. ಆತ ಅವತರಿಸಿದ ಅಂಜನಾದ್ರಿ ಬೆಟ್ಟದ ಶಿಲೆಯನ್ನು ರಾಮ ಮಂದಿರದ ಶಿಲಾನ್ಯಾಸಕ್ಕೆ ಬಳಸಲಾಗುತ್ತದೆ. ಶಿಲೆಯನ್ನು ಶಿಲಾನ್ಯಾಸಕ್ಕೆ ಅರ್ಪಿಸುವ ಮೂಲಕ ಕರ್ನಾಟಕಕ್ಕೂ ರಾಮಮಂದಿರಕ್ಕೂ ಭಾವನಾತ್ಮಕ ಸಂಬಂಧ ಬೆಸೆದಂತಾಗುತ್ತದೆ. ವಿಶ್ವೇಶ ತೀರ್ಥ ಶ್ರೀಗಳಿಗೆ ಅಂಜನಾದ್ರಿ ಬೆಟ್ಟದಲ್ಲಿ ಸನ್ಯಾಸತ್ವ ದೀಕ್ಷೆ ಕೊಡಲಾಗಿತ್ತು ಎಂಬುದು ವಿಶೇಷ.

ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಮಾತನಾಡಿ, ಪೇಜಾವರ ಶ್ರೀಗಳು ರಾಮ ಮಂದಿರದ ದೊಡ್ಡ ಹೋರಾಟಗಾರರು. ಅವರ ಶಿಷ್ಯ ಈಗ ರಾಮ ಮಂದಿರದ ಟ್ರಸ್ಟಿಯಾಗಿದ್ದಾರೆ, ಅವರ ಮೂಲಕ ಶಿಲೆಯನ್ನು ರಾಮಮಂದಿರಕ್ಕೆ ಅರ್ಪಿಸುತ್ತಿದ್ದೇವೆ. ಕೋಟಿ ಕೋಟಿ ಭಕ್ತರ ಕನಸು ನನಸಾಗುತ್ತಿದೆ ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications