ಸಾಗರ್ ಬೆನ್ನಲ್ಲೇ ಕರಾವಳಿಗೆ ಅಪ್ಪಳಿಸಲಿದೆ ಮತ್ತೊಂದು ಚಂಡಮಾರುತ
ಉಡುಪಿ, ಮೇ 23: ಕರ್ನಾಟಕ ಕರಾವಳಿ ಮೇಲೆ ಒಂದರ ಹಿಂದೆ ಒಂದರಂತೆ ಚಂಡ ಮಾರುತಗಳು ಅಪ್ಪಳಿಸುತ್ತಿದ್ದು, ಸಾಗರ್ ಚಂಡಮಾರುತದ ಪರಿಣಾಮಗಳು ತಣ್ಣಗಾಗುವ ಮೊದಲೇ ಇನ್ನೊಂದು ಚಂಡ ಮಾರುತ ಕರಾವಳಿಯನ್ನು ಭಾದಿಸುತ್ತಿದೆ.
ಕರಾವಳಿಯ ಅರಬ್ಬೀ ಸಮುದ್ರದ ನೈಋುತ್ಯ ಭಾಗದಲ್ಲಿ ಮೇ 22 ರ ಸಂಜೆ 2ನೇ ಮೇಕುನ ಚಂಡ ಮಾರುತ ಸೃಷ್ಠಿಯಾಗಿದೆ. ಈ ಮೇಕುನ ಚಂಡ ಮಾರುತ ಕರಾವಳಿಯಲ್ಲಿ ಭಾರಿ ಗಾಳಿಯ ಜೊತೆಗೆ ಮಳೆಯನ್ನು ಕೂಡ ತರಲಿದೆ ಎಂದು ಹವಮಾನ ಇಲಾಖೆ ಈಗಾಗಲೇ ಎಚ್ಚರಿಕೆಯನ್ನು ನೀಡಿದೆ.
ಈ ಮೇಕುನ ಚಂಡ ಮಾರುತ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳ ಮೇಲೆ ಪ್ರಭಾವ ಬೀರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮೇಕುನ ಚಂಡ ಮಾರುತ ಮೇ 23 ರಿಂದ ಮೇ 25 ರ ವರೆಗೆ ಕರಾವಳಿ , ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿಯ ಜೊತೆ ಮಳೆಯನ್ನು ಹೊತ್ತು ತರಲಿದೆ ಎಂಬ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ. ಈ ಚಂಡ ಮಾರುತ ಮೇ 26ರ ಬೆಳಿಗ್ಗೆ ಓಮನ್ ಮತ್ತು ಯೆಮನ್ ಕರಾವಳಿಗೆ ಅಪ್ಪಳಿಸಿದೆ.

ಸೋಮವಾರದಿಂದಲೇ ರಾಜ್ಯದೆಲ್ಲಡೆ ಮುಂಗಾರು ಪೂರ್ವ ಮಳೆ ಚುರುಕಾಗಿದೆ. ಕರಾವಳಿ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮೇ 25 ರವರೆಗೂ ಭಾರಿ ಮಳೆ ನಿರೀಕ್ಷಿಸಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ
ಮೇಕುನ ಚಂಡಮಾರುತ ಮೇ 23 ಮತ್ತು 24 ರಂದು ತೀವ್ರತೆ ಪಡೆಯಲಿದೆ. ಗಂಟೆಗೆ 150-170 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಓಮನ್ ಕರಾವಳಿಗೆ ಅಪ್ಪಳಿಸಲಿದೆ. ಈ ಹಿನ್ನಲೆಯಲ್ಲಿ ಮೇ 23 ರಿಂದ 26 ರವರೆಗೆ ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕೆಲ ದಿನಗಳ ಹಿಂದೆ ಅಪ್ಪಳಿಸಿದ ಸಾಗರ್ ಚಂಡ ಮಾರುತ ಮಾಡಿರುವ ಸಮಸ್ಯೆಗಳ ನಡುವೆಯೇ ಇನ್ನೊಂದು ಚಂಡ ಮಾರುತ ಕರಾವಳಿಯ ಜಿಲ್ಲೆಗಳನ್ನು ಬಾಧಿಸುತ್ತಿದೆ. ಸಾಗರ್ ಚಂಡ ಮಾರುತದ ಹಾವಳಿಯಿಂದಾಗಿ ಜಿಲ್ಲೆಯಲ್ಲಿ ದೈವಸ್ಥಾನಗಳ ಧ್ವಜ ಸ್ತಂಭ ಸೇರಿದಂತೆ ಹಲವಾರು ಕಡೆ ವಿದ್ಯುತ್ ಕಂಬಗಳು ಧರೆಗುರುಳಿದ್ದವು. ಈ ನಡುವೆ ಈಗ ಎದ್ದಿರುವ ಮೇಕುನ ಚಂಡ ಮಾರುತ ಯಾವ ರೀತಿ ಸಮಸ್ಯೆ ತಂದೊಡ್ಡಲಿದೆ ಎಂದು ಕಾದು ನೋಡಬೇಕಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications