ಮಲ್ಪೆಯ ಮೀನುಗಾರಿಕಾ ಬೋಟ್ ಮುಳುಗಡೆ:7 ಮೀನುಗಾರರ ರಕ್ಷಣೆ
ಉಡುಪಿ, ಏಪ್ರಿಲ್ 10: ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ 7 ಮಂದಿ ಮೀನುಗಾರರ ನಾಪತ್ತೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ.
ಮಲ್ಪೆಯ ಬಂದರಿನ ಮೀನುಗಾರಿಕಾ ದೋಣಿಯೊಂದು ಮಹಾರಾಷ್ಟ್ರದ ದೇವಗಡ ಸಮೀಪದ ಆಳ ಸಮುದ್ರದಲ್ಲಿ ಅಪಘಾತಕ್ಕೀಡಾಗಿದೆ. ಈ ಅವಘಡದಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ.
ಪಡುತೋನ್ಸೆ ಬೆಂಗ್ರೆ ಹೂಡೆಯ ದಿನೇಶ್ ತಿಂಗಳಾಯ ಎಂಬುವವರಿಗೆ ಸೇರಿದ ಶಿವರಕ್ಷ ಹೆಸರಿನ ಆಳಸಮುದ್ರ ಬೋಟ್ ಅಪಘಾತಕ್ಕೀಡಾಗಿದ್ದು, ಬೋಟ್ ನಲ್ಲಿದ್ದ ಭಟ್ಕಳದ ಮೀನುಗಾರರಾದ ಸುನೀಲ್ ಮಂಜುನಾಥ್, ಸುರೇಶ್ ಮಂಜುನಾಥ್, ಜಗನ್ನಾಥ ರಾಮ, ಪ್ರಶಾಂತ್ ಮೂಡಗಿ, ಗಜೇಂದ್ರ ಪಾಂಡುರಂಗ, ಕೃಷ್ಣ ಮೊಗೇರ, ಲೋಹಿತ್ ಧರ್ಮ ಎಂಬುವವರನ್ನು ರಕ್ಷಿಸಲಾಗಿದೆ.

ಏಪ್ರಿಲ್ 06ರಂದು ರಾತ್ರಿ ಮಲ್ಪೆ ಬಂದರಿನಿಂದ ಹೊರಟ ಶಿವರಕ್ಷ ಮೀನುಗಾರಿಕಾ ಬೋಟ್ ಮಹಾರಾಷ್ಟ್ರದ ರತ್ನಗಿರಿ ಸಮೀಪ ಸುಮಾರು 42 ನಾಟಿಕಲ್ ಮೈಲ್ಸ್ ದೂರದಲ್ಲಿ ಮೀನುಗಾರಿಕೆ ನಡೆಸುತಿತ್ತು ಎನ್ನಲಾಗಿದೆ.
ಈ ಸಂದರ್ಭದಲ್ಲಿ ಬೋಟಿನ ಕೆಳಭಾಗಕ್ಕೆ ಯಾವುದೋ ವಸ್ತು ಡಿಕ್ಕಿ ಹೊಡೆದು ನೀರು ಬೋಟಿನೊಳಗೆ ಬರಲು ಆರಂಭಿಸಿತ್ತು. ಕೂಡಲೇ ಬೋಟಿನಲ್ಲಿದ್ದ ಮೀನುಗಾರರು ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇತರ ಬೋಟಿನವರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಮೀಪದಲ್ಲಿದ್ದ ಶಿವತೇಜಸ್ ಹೆಸರಿನ ಬೋಟ್ ನ ಮೀನುಗಾರರು ಮುಳುಗುತ್ತಿದ್ದ ಶಿವರಕ್ಷ ಬೋಟಿನಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಈ ಮಧ್ಯೆ ದೇವಗಡ ಸಮೀಪ ಬೋಟನ್ನು ಎಳೆದು ತರುತ್ತಿದ್ದಾಗ ಶಿವರಕ್ಷ ಬೋಟ್ ಸಂಪೂರ್ಣ ಮುಳುಗಡೆಗೊಂಡಿತು ಎಂದು ಹೇಳಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications