ಉಡುಪಿ: ಪೂಜೆ ಮಾಡಿ ಹೆಸರು ಬದಲಾಯಿಸಿದರೂ ಬಿಡದ ಲಾಡ್ಜ್ ಗ್ರಹಚಾರ; ಮತ್ತೊಂದು ಆತ್ಮಹತ್ಯೆ
ಉಡುಪಿ, ಏಪ್ರಿಲ್ 20: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಖಾಸಗಿ ಲಾಡ್ಜ್ ಆತ್ಮಹತ್ಯೆ ಸ್ಪಾಟ್ ಆಗುತ್ತಿದೆಯಾ ಎನ್ನುವ ಅನುಮಾನ ಮೂಡುತ್ತಿದೆ. ಯಾಕೆಂದರೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಕೆಲವೇ ದಿನಗಳಲ್ಲಿ ಮತ್ತೋರ್ವ ಯುವಕ ಅದೇ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉಡುಪಿಯ ಲಾಡ್ಜ್ ಹೆಸರು ಬದಲಾಯಿಸಿ, ನವಗ್ರಹ ಪೂಜೆ ಮಾಡಿಸಿದರೂ, ಈಗ ಮತ್ತೊಂದು ಆತ್ಮಹತ್ಯೆ ಅದೇ ಲಾಡ್ಜ್ನಲ್ಲಿ ಆಗಿದ್ದು, ಲಾಡ್ಜ್ ಮಾಲೀಕರನ್ನು ಕಂಗೆಡಿಸಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ತನಿಖೆ ಹಂತದಲ್ಲಿ ಇದೆ. ಆದರೆ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ಇರುವ ಶಾಂಭವಿ ಲಾಡ್ಜ್ ಆತ್ಮಹತ್ಯೆ ಸ್ಪಾಟ್ ಆಗುತ್ತಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಎಂಟು ದಿನ ನಂತರ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಂಗಳೂರಿನ ಅಂಬ್ಲಮೊಗರು ನಿವಾಸಿ, ವೃತ್ತಿಯಲ್ಲಿ ಮೆಡಿಕಲ್ ರೆಪ್ ಆಗಿರುವ ಶರಣ್ ರಾಜ್ (33)ಎಂಬಾತ ಲಾಡ್ಜ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದು ಲಾಡ್ಜ್ ಮಾಲಿಕರು ಮತ್ತೆ ತಲೆನೋವು ತರಿಸಿದೆ.
ಸಂತೋಷ್ ಪಾಟೀಲ್ ಸಾವಿನ ಬಳಿಕ ಶಾಂಭವಿ ಲಾಡ್ಜ್ಗೆ ಜನ ಬರುವುದು ಕೂಡ ಕಡಿಮೆ ಆಗಿತ್ತು. ಹೀಗಾಗಿ ಮತ್ತೆ ಹಿಂದಿನಂತೆ ಮತ್ತೆ ಜನ ಬರುವಂತೆ ಆಗಲಿ, ಇನ್ನು ಮುಂದೆ ಯಾವುದೇ ತೊಂದರೆ ಆಗದಿರಲಿ ಅಂತ ಹೋಟೆಲ್ನಲ್ಲಿ ಹಾಗೂ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ 207 ರೂಮ್ನಲ್ಲಿ ವಿಶೇಷ ಹೋಮ ಹಾಗೂ ಪೂಜೆಯನ್ನು ಲಾಡ್ಜ್ ಮಾಲೀಕರು ಮಾಡಿಸಿದ್ದರು.
ಅಲ್ಲದೇ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅದೇ ಹೆಸರು ಇದ್ದರೆ ಜನರು ಬರುವುದಿಲ್ಲ ಅಂತ ಇತ್ತೀಚೆಗೆ ಶಾಂಭವಿ ಬದಲಾಗಿ 'ಸಂಭ್ರಮ' ಅಂತ ಹೆಸರು ಬದಲಾವಣೆ ಮಾಡಿದ್ದರು. ಲಾಡ್ಜ್ ದ್ವಾರದ ದಿಕ್ಕು ಸರಿ ಇಲ್ಲ. ಹೀಗಾಗಿ ಪ್ರವೇಶ ದ್ವಾರದ ದಿಕ್ಕನ್ನೇ ಬದಲಾಯಿಸಲು ಪ್ಲಾನ್ ಮಾಡಿಕೊಂಡಿದ್ದರು. ಈ ನಡುವೆ ಈಗ ಮತ್ತೊಂದು ಆತ್ಮಹತ್ಯೆ ಲಾಡ್ಜ್ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಶರಣ್ ರಾಜ್ ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಹೇಳಲಾಗಿದೆ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಒಟ್ಟಿನಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಲಾಡ್ಜ್ ಪರಿಸ್ಥಿತಿಯೇ ಸರಿ ಇಲ್ಲ ಎನ್ನುವಂತಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಬಳಿಕ ಜನ ಬರುವುದಿಲ್ಲ ಅಂತ ನೊಂದು ದೇವರ ಮೊರೆ ಹೋದ ಮಾಲಿಕರಿಗೆ ಈಗ ಯುವಕನ ಆತ್ಮಹತ್ಯೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
Recommended Video
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications