ಅನುಪಮಾ ಶೆಣೈ ಅವರಿಂದ ಹೊಸ ಪ್ರಾದೇಶಿಕ ಪಕ್ಷ
ಉಡುಪಿ, ಅಕ್ಟೋಬರ್ 03: ಭ್ರಷ್ಟ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದು ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಅನುಪಮಾ ಶೆಣೈ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಕೂಡ್ಲಿಗಿ ಉಪ ವಿಭಾಗದ ಡಿವೈಎಸ್ಪಿ ಹುದ್ದೆ ತೊರೆದ ಬಳಿಕವೇ ರಾಜಕೀಯ ಪಕ್ಷ ಸೇರುತ್ತಾರೆ ಎಂಬ ಸುದ್ದಿ ಹಬ್ಬಿತ್ತು.
ಆದರೆ, ಈಗ ತಮ್ಮ ರಾಜಕೀಯ ರಂಗ ಪ್ರವೇಶದ ಬಗ್ಗೆ ಅನುಪಮಾ ಅವರು ಮಾತನಾಡಿದ್ದಾರೆ. ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ ಬಗ್ಗೆ ಸುಳಿವು ನೀಡಿದ್ದಾರೆ.

ಉಡುಪಿಯ ಉಚ್ಚಿಲದ ತಮ್ಮ ನಿವಾಸದಲ್ಲಿ ಸಮಾನ ಮನಸ್ಕರ ಜತೆ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಸಾರ್ವಜನಿಕರ ಸಲಹೆ ಪಡೆದುಕೊಂಡು, ಪಕ್ಷದ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು.
ಈ ಕುರಿತಂತೆ ಅಕ್ಟೋಬರ್ 15ರಂದು ಮತ್ತೊಂದು ಸಭೆ ನಡೆಸಲಾಗುವುದು. ನವೆಂಬರ್ ಮೊದಲ ವಾರಕ್ಕೆ ಅಂತಿಮ ರೂಪು ರೇಷೆ ಸಿದ್ಧಪಡಿಸಿ, ಅಧಿಕೃತವಾಗಿ ಘೋಷಣೆ ಮಾಡಲಾಗುವುದು. ಬಳ್ಳಾರಿಯಿಂದಲೇ ಪಕ್ಷದ ಅಭಿಯಾನ ಆರಂಭಗೊಳ್ಳಲಿದೆ ಎಂದು ಎಂದು ಶೆಣೈ ಹೇಳಿದರು.
ನೀವು ಸಲಹೆ ನೀಡಬಹುದು: ಸಾಮಾಜಿಕ ಜಾಲ ತಾಣಗಳ ಮೂಲಕ ಅನುಪಮಾ ಶೆಣೈ ಅವರಿಗೆ ಸಾರ್ವಜನಿಕರು ಸಲಹೆ, ಸೂಚನೆಗಳನ್ನು ನೀಡಬಹುದು. ಅನುಪಮಾ ಶೆಣೈ ಅವರು ಇದಕ್ಕಾಗಿ ಹೊಸ ಫೇಸ್ ಬುಕ್ ಖಾತೆ ಆರಂಭಿಸಿದ್ದಾರೆ. ಜತೆಗೆ ರಾಜ್ಯದೆಲ್ಲೆಡೆ ಸಲಹೆಗಳನ್ನು ಸ್ವೀಕರಿಸಲು ಪ್ರತ್ಯೇಕ ಫೋನ್ ನಂಬರ್ ನೀಡಲಾಗಿದೆ. ಗ್ರಾಮ ಸ್ವರಾಜ್, ಮಹಿಳಾ ಸಬಲೀಕರಣ, ಪರಿಸರ ಸ್ನೇಹಿ ವಾತಾವರಣ, ಭ್ರಷ್ಟಾಚಾರ ಮುಕ್ತ ಕರ್ನಾಟಕ ಇದು ಅನುಪಮಾ ಅವರ ಪಕ್ಷದ ಮುಖ್ಯ ಅಂಶಗಳಾಗಿವೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications