ಶ್ರೀ ಕೃಷ್ಣನ ನಾಡು ಉಡುಪಿಯ ಏಕೈಕ ಮಹಿಳಾ ಅಭ್ಯರ್ಥಿ ಈಕೆ
Recommended Video

ಉಡುಪಿ, ಮೇ 4: ವಿಧಾನಸಭೆ ಚುನಾವಣೆ ಹವಾ ಕೃಷ್ಣನಗರಿ ಉಡುಪಿಯಲ್ಲೂ ಜೋರಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಅಧಿಕ ಸಂಖ್ಯೆಯಲ್ಲಿ ಇದ್ದಾರೆ ಅನ್ನೋದು ಗಮನಾರ್ಹ ಸಂಗತಿ. ವಿಧಾನಸಭೆ ಚುನಾವಣೆ ವಿಷಯಕ್ಕೆ ಬಂದ್ರೆ ಇಲ್ಲಿ ಮಹಿಳೆಯರ ಪ್ರಾತಿನಿಧ್ಯ ಕಡಿಮೆ.
ದಶಕಗಳ ಹಿಂದೆ ಇಲ್ಲಿ ಮಹಿಳೆಯೊಬ್ಬರು ವಿಧಾನಸಭೆ ಪ್ರವೇಶಿಸಿದ್ದು ಬಿಟ್ಟರೆ ಇತ್ತೀಚಿನ ವರ್ಷಗಳಲ್ಲಿ ಯಾರೂ ಟಿಕೆಟ್ ಕೇಳುವ ಧೈರ್ಯ ತೋರಿಲ್ಲ. ಉಡುಪಿ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ತವರು. ಜೊತೆಗೆ ಪ್ರೇಕ್ಷಣೀಯ ಸ್ಥಳಗಳ ಬೀಡು. ಇವಿಷ್ಟೇ ಅಲ್ಲ ಕರಾವಳಿ ರಾಜಕೀಯವನ್ನು ಬಹುಮಟ್ಟಿಗೆ ಪ್ರಭಾವಿಸುವ ಶಕ್ತಿ ಉಡುಪಿ ಜಿಲ್ಲೆಗಿದೆ.

ಎಪ್ಪತ್ತರ ದಶಕದಲ್ಲಿ ಮನೋರಮಾ ಮಧ್ವರಾಜ್
ಕೃಷ್ಣನಗರಿಯಲ್ಲಿ ಮಹಿಳೆಯರ ಸಂಖ್ಯೆ ಮತ್ತು ಮಹಿಳಾ ಮತದಾರರ ಸಂಖ್ಯೆಯೂ ಪುರುಷರಿಗಿಂತ ಹೆಚ್ಚು. ಆದ್ರೆ ಮಹಿಳಾ ಪ್ರಾತಿನಿಧ್ಯದ ವಿಚಾರಕ್ಕೆ ಬಂದ್ರೆ ಇಲ್ಲೂ ಮಹಿಳೆಯರು ವಿಧಾನಸಭೆಗೆ ಸ್ಪರ್ಧಿಸಿದ್ದು ಕಡಿಮೆ.
ಎಪ್ಪತ್ತರ ದಶಕದಲ್ಲಿ ಮನೋರಮಾ ಮಧ್ವರಾಜ್ ಎಂಬ ಮೀನುಗಾರ ಸಮುದಾಯದ ಮಹಿಳೆ ಕಾಂಗ್ರೆಸ್ ಪಕ್ಷದ ನಾಯಕಿಯಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದೇ ಕೊನೆ. ಮುಂದೆ ಇಲ್ಲಿ ಮಹಿಳೆಯರು ಪುರುಷರ ನೆರಳಲ್ಲೇ ರಾಜಕೀಯ ಮಾಡಿದ್ರೇ ಹೊರತು, ವಿಧಾನಸಭೆಗೆ ಸ್ಪರ್ಧಿಸುವ ಅವಕಾಶವೇ ದೊರೆತಿಲ್ಲ.

ಟಿಕೆಟ್ ನೀಡಿದ ಉದಾಹರಣೆ ಇಲ್ಲ
ಉಡುಪಿ ಜಿಲ್ಲೆಯಲ್ಲಿರುವ ಮತದಾರರ ಸಂಖ್ಯೆ 9,78,503. ಈ ಪೈಕಿ ಮಹಿಳಾ ಮತದಾರರು 5,07,773 ರಷ್ಟಿದ್ರೆ ,ಪುರುಷ ಮತದಾರರ ಸಂಖ್ಯೆ 4,70,730. ಗಮನಾರ್ಹ ಸಂಗತಿ ಅಂದ್ರೆ ಉಡುಪಿ, ಚಿಕ್ಕಗಳೂರು ಲೋಕಸಭಾ ಸದಸ್ಯೆಯಾಗಿರುವವರು ಶೋಭಾ ಕರಂದ್ಲಾಜೆ. ಜಿಲ್ಲಾಧಿಕಾರಿಯಾಗಿ ಪ್ರಿಯಾಂಕಾ ಮೇರಿ ಆಡಳಿದ ಚುಕ್ಕಾಣಿ ಹಿಡಿದಿದ್ದಾರೆ.
ಇನ್ನು ಸ್ಥಳೀಯ ಸಂಸ್ಥೆಗಳಲ್ಲೂ ಮಹಿಳಾ ಪ್ರತಿನಿಧಿಗಳಿದ್ದಾರೆ. ಆದ್ರೆ ಜನಸಂಖ್ಯೆಯ ಆಧಾರದಲ್ಲಿ ನೋಡೋದಾದ್ರೆ ರಾಜಕೀಯವಾಗಿ ಇಲ್ಲೂ ಲಿಂಗ ಅಸಮಾನತೆ ಢಾಳಾಗಿ ಕಾಣಿಸುತ್ತದೆ.
ಕಾಂಗ್ರೆಸ್ ಹಿಂದೊಮ್ಮೆ ಸರಳಾ ಕಾಂಚನ್ ಎಂಬುವರಿಗೆ ಟಿಕೆಟ್ ನೀಡುವ ಧೈರ್ಯ ಮಾಡಿತ್ತು. ಆದ್ರೆ ಆಕೆ ಆ ಚುನಾವಣೆಯಲ್ಲಿ ಗೆದ್ದಿರಲಿಲ್ಲ. ಉಳಿದಂತೆ ಬಿಜೆಪಿ ಅಥವಾ ಜೆಡಿಎಸ್ ನಿಂದ ವಿಧಾನಸಭೆಗೆ ಮಹಿಳೆಯರಿಗೆ ಟಿಕೆಟ್ ನೀಡಿದ ಉದಾಹರಣೆ ಇಲ್ಲ.
ಏಕೈಕ ಮಹಿಳಾ ಅಭ್ಯರ್ಥಿ ಅನುಪಮಾ
ನೀವು ನಂಬಲೇಬೇಕು. ಖಾಕಿ ಧರಿಸಿ ವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಅನುಪಮಾ ಶೆಣೈ ಜಿಲ್ಲೆಯ ಏಕೈಕ ಮಹಿಳಾ ಅಭ್ಯರ್ಥಿ. ಕಾಪು ಕ್ಷೇತ್ರದಿಂದ ಅನುಪಮಾ ಸ್ಪರ್ಧೆ ಮಾಡುತ್ತಿದ್ದಾರೆ. ಅನುಪಮಾ ಶೆಣೈ, ಬಳ್ಳಾರಿಯ ಕೂಡ್ಲಿಗಿಯಲ್ಲಿ ಪರಮೇಶ್ವರ್ ನಾಯ್ಕ್ ವಿರುದ್ಧ ಸಿಡಿದೆದ್ದ ಮಹಿಳೆ. ಡಿವೈಎಸ್ಪಿ ಆಗಿದ್ದವರು ಈಗ ಮಾಜಿಯಾಗಿದ್ದಾರೆ. ಹಾಲಿ ರಾಜಕಾರಣದಲ್ಲಿ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ.
ಜನ್ಮಸ್ಥಳ ಉಡುಪಿ ಜಿಲ್ಲೆಯಾದರೂ ಕಾರ್ಯಕ್ಷೇತ್ರ ಬಳ್ಳಾರಿಯಲ್ಲೇ ಅನುಪಮಾ ಫೇಮಸ್ಸು. ಹಾಗಾಗಿ ಉತ್ತರ ಕರ್ನಾಟಕದ ಯಾವುದೇ ಕ್ಷೇತ್ರದಿಂದ ಅವರು ಸ್ಪರ್ಧಿಸಬಹುದು ಎಂಬ ಊಹಾಪೋಹ ಇತ್ತು. ಆದರೆ ಸದ್ಯ ಅವರು ತನ್ನ ತವರೂರು ಕಾಪು ಕ್ಷೇತ್ರದಿಂದಲೇ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ.

ಬಿಜೆಪಿ ವಿರುದ್ಧ ಸಮರ
ಆರಂಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಾಗ, ಅನುಪಮಾ ಬಿಜೆಪಿ ಬಗ್ಗೆ ಒಲವು ಹೊಂದಿದ್ದಾರೆ ಎಂದೇ ಭಾವಿಸಲಾಗಿತ್ತು. ಆದರೆ ತಾನು ಬಿಜೆಪಿ ಅಲ್ಲ ಅಂತ ತೋರಿಸಿಕೊಳ್ಳೋಕೆ, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸಮರ ಸಾರಿದ್ದರು.
ಇದೇ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರ ಕೆಂಗಣ್ಣಿಗೂ ಗುರಿಯಾಗಿದ್ದರು. ಇದೀಗ ಎರಡೂ ರಾಷ್ಟ್ರೀಯ ಪಕ್ಷಗಳಿಗೆ, ಸೆರಗಿನಲ್ಲಿಟ್ಟ ಕೆಂಡದ ಥರ ಕಾಟ ಕೊಡ್ತೇನೆ ನೋಡ್ತಾ ಇರಿ ಅಂತಾರೆ ಅನುಪಮಾ. ರಾಜ್ಯದಲ್ಲಿ ಅನುಪಮಾ ಹವಾ ಈಗ ಕಡಿಮೆಯಾಗಿದೆ. ರಾಜಕಾರಣದ ಪಟ್ಟುಗಳು ಇವರಿಗಿನ್ನೂ ಹೊಸತು, ಸ್ವಕ್ಷೇತ್ರದಲ್ಲಾದರೂ ಒಂದಿಷ್ಟು ಮತ ಗಳಿಸಿ ತೋರಿಸಿದರೆ, ಅಂದು ಸರ್ಕಾರದ ವಿರುದ್ದ ಬಂಡೆದ್ದದ್ದು ಸಾರ್ಥಕ ಎನ್ನಬಹುದು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications