ಉಡುಪಿಯಲ್ಲಿ ಮತ್ತೊಂದು ವಂಚಕರ ಜಾಲ: ಎಟಿಎಂಗೆ ಬರುವ ಗ್ರಾಹಕರೇ ಇವರ ಟಾರ್ಗೆಟ್
ಉಡುಪಿ, ಜನವರಿ 11: ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಖದೀಮರು ಲಕ್ಷಾಂತರ ರೂಪಾಯಿ ದೋಚಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಆರೋಪಿಗಳಿಂದ ವಂಚನೆಗೊಳಗಾದವರು ಒಂದಲ್ಲ ಎರಡಲ್ಲ ಬರೋಬ್ಬರಿ ಎರಡು ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.
ಜನವರಿ 09 ಮಂಗಳವಾರ ಬೆಳಗ್ಗೆ 10 ಘಂಟೆ ಸುಮಾರಿಗೆ ಶಿರೂರು ಮಾರ್ಕೆಟ್ ಬಳಿ ಇರುವ ಕೆನೆರಾ ಬ್ಯಾಂಕ್ ಎಟಿಎಂನಲ್ಲಿ ಚೈತ್ರಾ ಎನ್ನುವವರಿಗೆ, 10:15ರ ಸುಮಾರಿಗೆ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂನಲ್ಲಿ ಬಲ್ಕೀಸ್ ಬಾನು ಹಾಗೂ ಸ್ಟೇಟ್ ಬ್ಯಾಂಕ್ ಆಫ ಇಂಡಿಯಾ ಎಟಿಎಂನಲ್ಲಿ ಸಳ್ವಾಡಿ ಗ್ರಾಮದ ಚಂದ್ರಶೇಖರ್ ಎನ್ನುವವರಿಗೆ ಖದೀಮರು ವಂಚಿಸಿದ್ದಾರೆ. ಒಂದೇ ದಿನ ಜಿಲ್ಲೆಯ ಮೂರು ಭಾಗದಲ್ಲಿ ಒಂದೇ ರೀತಿಯ ಘಟನೆ ನಡೆದಿದೆ.

ತಾವೂ ಗ್ರಾಹಕರಂತೆ ನಟಿಸಿ ಎಟಿಎಂ ಕೇಂದ್ರದೊಳಗೆ ಬರುವ ಅಪರಿಚಿತರು ಎಟಿಎಂನಲ್ಲಿ ಹಣ ಪಡೆಯಲು ಸಾಧ್ಯವಾಗದ ಚೈತ್ರಾ, ಬಲ್ಕೀಸ್ ಬಾನು ಹಾಗೂ ಚಂದ್ರಶೇಖರ್ ಅವರಿಗೆ ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಪಡೆದುಕೊಂಡಿದ್ದಾರೆ.
ಬಳಿಕ ಅದೇ ಸ್ಥಳದಲ್ಲಿ ಅವರಿಗೆ ತಿಳಿಯದಂತೆ ಕಾರ್ಡ್ ಬದಲಿಸಿಕೊಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ವಲ್ಪ ಸಮಯದ ನಂತರ ಪರಿಶೀಲಿಸಿದಾಗ ಮೂರು ಜನರ ಎಟಿಎಂ ಕಾರ್ಡ್ ಬದಲಾಗಿರುವುದು ಕಂಡು ಬಂದಿದೆ.
ಕೂಡಲೇ ಸಂತ್ರಸ್ತರು ಸ್ಥಳೀಯ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ಚಂದ್ರಶೇಖರ್ ಖಾತೆಯಿಂದ 2 ಲಕ್ಷ ರೂ, ಚೈತ್ರಾರ ಖಾತೆಯಿಂದ 21 ಸಾವಿರ ರೂ ಹಾಗೂ ಬಲ್ಕೀಸ್ ಬಾನು ಖಾತೆಯಿಂದ 5 ಸಾವಿರ ರೂಪಾಯಿಯನ್ನು ವಂಚಕರು ಡ್ರಾ ಮಾಡಿ ಕೊಂಡಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಬೈಂದೂರು ತಾಲೂಕಿನ ವಿವಿಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು ಆರೋಪಿಗಳು ಉರ್ದು ಮಾತನಾಡುತ್ತಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications