ಹೊಸತಲೆಮಾರಿನ ಸಣ್ಣ ಕಥೆಗಾರ ಪುರಸ್ಕಾರ -2017
ಉಡುಪಿ, ನವೆಂಬರ್ 11 : ಕನ್ನಡದ ಯುವ ಬರಹಗಾರರನ್ನು ಉತ್ತೇಜಿಸುವ ಉದ್ದೇಶದಿಂದ 'ಹೊಸ ತಲೆಮಾರಿನ ಪ್ರತಿಭಾವಂತ ಸಣ್ಣಕಥೆಗಾರ' ಪುರಸ್ಕಾರಕ್ಕೆ ಸ್ವತಂತ್ರವಾಗಿ ಬರೆದಿರುವ ಕಥೆಗಳ ಸಂಕಲನವನ್ನು ಆಹ್ವಾನಿಸಲಾಗಿದೆ.
ಪ್ರೊ. ಉಪೇಂದ್ರ ಸೋಮಯಾಜಿಯವರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿರುವ "ಲೇಖಕರ ಹಿತರಕ್ಷಣಾ ವೇದಿಕೆ (ರಿ), ಚಿತ್ರಪಾಡಿ, ಸಾಲಿಗ್ರಾಮ (ಉಡುಪಿ ಜಿಲ್ಲೆ)" ಪ್ರತಿವರ್ಷವೂ ಆಯ್ದ ತರುಣ ಕಥೆಗಾರರಿಗೆ ಈ ಪುರಸ್ಕಾರವನ್ನು ನೀಡಿ ಗೌರವಿಸುತ್ತಿದೆ.
ಡಿಸೆಂಬರ್ ಕೊನೆಯ ವಾರದಲ್ಲಿ ನೀಡಲಾಗುವ ಈ ಪುರಸ್ಕಾರವು ಸಾರ್ವಜನಿಕ ಸನ್ಮಾನ, ಆಕರ್ಷಕ ಪ್ರಶಸ್ತಿ ಪತ್ರ/ಸ್ಮರಣಿಕೆ ಮತ್ತು ಆರು ಸಾವಿರ ರೂ. ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ಈ ಸಾಲಿನ (2017) "ಹೊಸ ತಲೆಮಾರಿನ ಪ್ರತಿಭಾವಂತ ಸಣ್ಣಕಥೆಗಾರ" ಪುರಸ್ಕಾರಕ್ಕಾಗಿ ಆಯ್ಕೆ ಪ್ರಕ್ರಿಯೆ ಈಗ ಆರಂಭವಾಗಿದೆ.

ಈ ಕಥಾಸ್ಪರ್ಧೆಗೆ ನಿಯಮ, ನಿಬಂಧನೆಗಳು ಕೆಳಗಿನಂತಿವೆ
1. 2016 ಜನವರಿ ಒಂದರಿಂದ 2017 ಡಿಸೆಂಬರ್ ತನಕದ (ಎರಡು ವರ್ಷಗಳ) ಅವಧಿಯಲ್ಲಿ ಮೊದಲ ಮುದ್ರಣ ಕಂಡ (ಸ್ವತಂತ್ರ/ಅನುವಾದಿತವಲ್ಲ) ಕಥಾ ಸಂಕಲನಗಳನ್ನು ಪುರಸ್ಕಾರಕ್ಕೆ ಪರಿಗಣಿಸಲಾಗುತ್ತದೆ.
2. ಕಥೆಗಾರರ ವಯಸ್ಸು 35 ವರ್ಷ ಮೀರಿರಬಾರದು. (01.01.1982ರ ನಂತರ ಜನಿಸಿದವರಷ್ಟೇ ಈ ವರ್ಷದ ಸ್ಪರ್ಧೆಯಲ್ಲಿ ಭಾಗವಹಿಸಬಹುದು.)
3. ಈಗಾಗಲೇ ತಮ್ಮ ಸಾಹಿತ್ಯ ಕೃತಿಗಳಿಗೆ ರಾಜ್ಯಮಟ್ಟದ ಪುರಸ್ಕಾರ ಗಳಿಸಿದವರನ್ನು ಈ ಪುರಸ್ಕಾರಕ್ಕೆ ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.
4. ಸ್ಪರ್ಧೆಯಲ್ಲಿ ಭಾಗವಹಿಸುವ ಲೇಖಕರು ನಾಲ್ಕಕ್ಕಿಂತ ಹೆಚ್ಚು (ಮುದ್ರಿತ) ಸಾಹಿತ್ಯಕೃತಿಗಳನ್ನು ಪ್ರಕಟಿಸಿರಬಾರದು.
ಈ ಪುರಸ್ಕಾರವು ಹೊಸತಲೆಮಾರಿನ, ತರುಣ ಲೇಖಕರಿಗೇ ಮೀಸಲಿಡಬೇಕೆಂಬ ಉದ್ದೇಶದಿಂದ ಈ ನಿಯಮಗಳನ್ನು ರೂಪಿಸಲಾಗಿದೆ. ಅರ್ಹ ಸಣ್ಣ ಕಥೆಗಾರರು ತಮ್ಮ ಕಥಾಸಂಕಲನದ ಎರಡು ಪ್ರತಿಗಳನ್ನು ಡಿಸೆಂಬರ್ ಮೊದಲ ವಾರಕ್ಕೆ (07.12.2017 ಕ್ಕೆ) ಮುನ್ನ, ಕೆಳಕಾಣಿಸಿದ ವಿಳಾಸಕ್ಕೆ ಕಳುಹಿಸಬಹುದು.
ಬೆಳಗೋಡು ರಮೇಶ ಭಟ್
5-109 A/1; "ಭಾಗೀರಥಿ"
ಇಂದ್ರಾಳಿ ದೇವಸ್ಥಾನದ ರಸ್ತೆ
ಅಂಚೆ: ಕುಂಜಿಬೆಟ್ಟು
ಉಡುಪಿ - 576 102
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications