ಹೊಸತಲೆಮಾರಿನ ಸಣ್ಣ ಕಥೆಗಾರ ಪುರಸ್ಕಾರ -2017
ಉಡುಪಿ, ನವೆಂಬರ್ 11 : ಕನ್ನಡದ ಯುವ ಬರಹಗಾರರನ್ನು ಉತ್ತೇಜಿಸುವ ಉದ್ದೇಶದಿಂದ 'ಹೊಸ ತಲೆಮಾರಿನ ಪ್ರತಿಭಾವಂತ ಸಣ್ಣಕಥೆಗಾರ' ಪುರಸ್ಕಾರಕ್ಕೆ ಸ್ವತಂತ್ರವಾಗಿ ಬರೆದಿರುವ ಕಥೆಗಳ ಸಂಕಲನವನ್ನು ಆಹ್ವಾನಿಸಲಾಗಿದೆ.
ಪ್ರೊ. ಉಪೇಂದ್ರ ಸೋಮಯಾಜಿಯವರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿರುವ "ಲೇಖಕರ ಹಿತರಕ್ಷಣಾ ವೇದಿಕೆ (ರಿ), ಚಿತ್ರಪಾಡಿ, ಸಾಲಿಗ್ರಾಮ (ಉಡುಪಿ ಜಿಲ್ಲೆ)" ಪ್ರತಿವರ್ಷವೂ ಆಯ್ದ ತರುಣ ಕಥೆಗಾರರಿಗೆ ಈ ಪುರಸ್ಕಾರವನ್ನು ನೀಡಿ ಗೌರವಿಸುತ್ತಿದೆ.
ಡಿಸೆಂಬರ್ ಕೊನೆಯ ವಾರದಲ್ಲಿ ನೀಡಲಾಗುವ ಈ ಪುರಸ್ಕಾರವು ಸಾರ್ವಜನಿಕ ಸನ್ಮಾನ, ಆಕರ್ಷಕ ಪ್ರಶಸ್ತಿ ಪತ್ರ/ಸ್ಮರಣಿಕೆ ಮತ್ತು ಆರು ಸಾವಿರ ರೂ. ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ಈ ಸಾಲಿನ (2017) "ಹೊಸ ತಲೆಮಾರಿನ ಪ್ರತಿಭಾವಂತ ಸಣ್ಣಕಥೆಗಾರ" ಪುರಸ್ಕಾರಕ್ಕಾಗಿ ಆಯ್ಕೆ ಪ್ರಕ್ರಿಯೆ ಈಗ ಆರಂಭವಾಗಿದೆ.

ಈ ಕಥಾಸ್ಪರ್ಧೆಗೆ ನಿಯಮ, ನಿಬಂಧನೆಗಳು ಕೆಳಗಿನಂತಿವೆ
1. 2016 ಜನವರಿ ಒಂದರಿಂದ 2017 ಡಿಸೆಂಬರ್ ತನಕದ (ಎರಡು ವರ್ಷಗಳ) ಅವಧಿಯಲ್ಲಿ ಮೊದಲ ಮುದ್ರಣ ಕಂಡ (ಸ್ವತಂತ್ರ/ಅನುವಾದಿತವಲ್ಲ) ಕಥಾ ಸಂಕಲನಗಳನ್ನು ಪುರಸ್ಕಾರಕ್ಕೆ ಪರಿಗಣಿಸಲಾಗುತ್ತದೆ.
2. ಕಥೆಗಾರರ ವಯಸ್ಸು 35 ವರ್ಷ ಮೀರಿರಬಾರದು. (01.01.1982ರ ನಂತರ ಜನಿಸಿದವರಷ್ಟೇ ಈ ವರ್ಷದ ಸ್ಪರ್ಧೆಯಲ್ಲಿ ಭಾಗವಹಿಸಬಹುದು.)
3. ಈಗಾಗಲೇ ತಮ್ಮ ಸಾಹಿತ್ಯ ಕೃತಿಗಳಿಗೆ ರಾಜ್ಯಮಟ್ಟದ ಪುರಸ್ಕಾರ ಗಳಿಸಿದವರನ್ನು ಈ ಪುರಸ್ಕಾರಕ್ಕೆ ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.
4. ಸ್ಪರ್ಧೆಯಲ್ಲಿ ಭಾಗವಹಿಸುವ ಲೇಖಕರು ನಾಲ್ಕಕ್ಕಿಂತ ಹೆಚ್ಚು (ಮುದ್ರಿತ) ಸಾಹಿತ್ಯಕೃತಿಗಳನ್ನು ಪ್ರಕಟಿಸಿರಬಾರದು.
ಈ ಪುರಸ್ಕಾರವು ಹೊಸತಲೆಮಾರಿನ, ತರುಣ ಲೇಖಕರಿಗೇ ಮೀಸಲಿಡಬೇಕೆಂಬ ಉದ್ದೇಶದಿಂದ ಈ ನಿಯಮಗಳನ್ನು ರೂಪಿಸಲಾಗಿದೆ. ಅರ್ಹ ಸಣ್ಣ ಕಥೆಗಾರರು ತಮ್ಮ ಕಥಾಸಂಕಲನದ ಎರಡು ಪ್ರತಿಗಳನ್ನು ಡಿಸೆಂಬರ್ ಮೊದಲ ವಾರಕ್ಕೆ (07.12.2017 ಕ್ಕೆ) ಮುನ್ನ, ಕೆಳಕಾಣಿಸಿದ ವಿಳಾಸಕ್ಕೆ ಕಳುಹಿಸಬಹುದು.
ಬೆಳಗೋಡು ರಮೇಶ ಭಟ್
5-109 A/1; "ಭಾಗೀರಥಿ"
ಇಂದ್ರಾಳಿ ದೇವಸ್ಥಾನದ ರಸ್ತೆ
ಅಂಚೆ: ಕುಂಜಿಬೆಟ್ಟು
ಉಡುಪಿ - 576 102
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications