ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜು.23 ಸೋಮೇಶ್ವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

|
Google Oneindia Kannada News

ಕುಂದಾಪುರ, ಜುಲೈ 23: ಹೊಸ ತಲೆಮಾರು ಇತ್ತೀಚೆಗೆ ಆಯುರ್ವೇದ ವೈದ್ಯಕೀಯ ಪದ್ಧತಿಯತ್ತ ಹೊರಳುತ್ತಿದೆ. ಹೆಚ್ಚು ಅಡ್ಡ ಪರಿಣಾಮಗಳಿಲ್ಲದಿರುವುದು ಇದಕ್ಕೆ ಮುಖ್ಯಕಾರಣವಿರಬಹುದು.

ಅಡ್ಡ ಪರಿಣಾಮ ಬೀರದ ಆಯುರ್ವೇದ ಉತ್ಪನ್ನಗಳುಅಡ್ಡ ಪರಿಣಾಮ ಬೀರದ ಆಯುರ್ವೇದ ಉತ್ಪನ್ನಗಳು

ಅದಕ್ಕೆಂದೇ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರದ ಮೂಲಕ ಆಯುರ್ವೇದದ ಮಹತ್ವವನ್ನು ಮನವರಿಕೆ ಮಾಡಿಕೊಡಲು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸೋಮೇಶ್ವರ ಸಿದ್ಧವಾಗಿದೆ. ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯಶಾಲಾ, ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್, ಬಸವನಗುಡಿ ಕೋಟೇಶ್ವರ ಹಾಗೂ ಶ್ರೀ ವೆಂಕಟರಮಣ ದೇವಸ್ಥಾನ ಸೋಮೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 23 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದೆ.

Ayurved free medical camp in Udupi's Kundapur on July 23rd

ಹೆಸರಾಂತ ಆಯುರ್ವೇದ ವೈದ್ಯರುಗಳಾದ ಕೆಎಮ್ ಸಿ(ಕಸ್ತೂರ್ ಬಾ ಮೆಡಿಕಲ್ ಕಾಲೇಜ್) ಮಣಿಪಾಲದ ಆಯುರ್ವೇದ ವಿಭಾಗದ ಮುಖ್ಯಸ್ಥರಾದ ಎಮ್. ಎಸ್. ಕಾಮತ್, ಕೇರಳದ ಪ್ರಖ್ಯಾತ ಆಯುರ್ವೇದ ತಜ್ಞ ಡಾ.ರಾಜೀವ ಶೆಣೈ, ಕೋಟೇಶ್ವರ ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯಶಾಲೆಯ ಡಾ.ಕಾತ್ಯಾಯಿನಿ ಇವರುಗಳಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಶಿಬಿರದಲ್ಲಿ ಉಚಿತ ತಪಾಸಣೆ ನಡೆಸಿ, ಉಚಿತವಾಗಿ ಔಷದಿ ವಿತರಣೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ಶಿಬಿರದ ಆಯೋಜಕರು ತಿಳಿಸಿದ್ದಾರೆ.

English summary
To create awareness about ayurved method of medicine, a free ayurved medical camp has organised in Kundapur in Someshwar, Kundapur. Various ayurveda trusts and colleges have conducted this on July 23rd.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X