ಅಯೋಧ್ಯೆಯಲ್ಲಿ ಮಸೀದಿಯೂ ನಿರ್ಮಾಣವಾಗಲಿ; ಬಾಬಾ ರಾಮ್ ದೇವ್
Recommended Video
ಉಡುಪಿ, ನವೆಂಬರ್ 16: "ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎನ್ನುವುದು ಪೇಜಾವರ ಶ್ರೀಗಳಂತಹ ಮಹನೀಯರ ಕನಸು. ಮಾತ್ರವಲ್ಲ, ದೇಶದ ಅನೇಕ ಮಹಾಪುರುಷರ ಆಂದೋಲನದ ಫಲ. ಈ ಎಲ್ಲಾ ಮಹಾನುಭಾವರ ಒಳಗೊಳ್ಳುವಿಕೆಯಿಂದ ಟ್ರಸ್ಟ್ ನಿರ್ಮಾಣವಾಗಲಿ" ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ಉಡುಪಿಯಲ್ಲಿ ಐದು ದಿನಗಳ ಯೋಗ ಶಿಬಿರದಲ್ಲಿ ಪಾಲ್ಗೊಳ್ಳಲು ರಾಮ್ ದೇವ್ ಆಗಮಿಸಿದ್ದಾರೆ. ಮಾಧ್ಯಮದವರ ಜೊತೆ ಸಂವಾದ ನಡೆಸಿದ ಅವರು, "ಅಯೋಧ್ಯೆ ರಾಮಮಂದಿರ ಮಾತ್ರವಲ್ಲ, ವೈದಿಕ ಜ್ಞಾನ ಪರಂಪರೆಯ ಪ್ರತೀಕವಾಗಲಿ. ಕ್ರೈಸ್ತರಿಗೆ ವ್ಯಾಟಿಕನ್, ಮುಸಲ್ಮಾನರಿಗೆ ಮೆಕ್ಕಾ ಇರುವಂತೆ ಹಿಂದೂಗಳಿಗೆ ರಾಮಮಂದಿರ ರೂಪುಗೊಳ್ಳಬೇಕು ಅನ್ನುವುದು ನನ್ನ ಬಯಕೆ" ಎಂದರು.
"ರಾಮನವಮಿ ದಿನವೇ ರಾಮಮಂದಿರಕ್ಕೆ ಶಿಲಾನ್ಯಾಸವಾಗಲಿ. ಪ್ರಧಾನಿಯವರೇ ಶಿಲಾನ್ಯಾಸ ಮಾಡಲಿ. ಪ್ರಧಾನಿ ಮೋದಿ ಹಿಂದೂ ಪರಂಪರೆಯ ಪ್ರತಿನಿಧಿಯಾಗಿ ಈ ಕೆಲಸ ಮಾಡಲಿ. ಅಯೋಧ್ಯೆಯಲ್ಲಿ ಮಸೀದಿಯೂ ದಿವ್ಯವಾಗಿ ನಿರ್ಮಾಣ ಆಗಬೇಕು. ಮುಸ್ಲಿಮರಿಗೆ ಐದು ಎಕರೆ ಭಿಕ್ಷೆ ಬೇಡ ಎಂದು ಅಸಾವುದ್ದೀನ್ ಒವೈಸಿ ಹೇಳಿದ್ದಾರೆ. ಒವೈಸಿ ಒಬ್ಬ ತಲೆಕೆಟ್ಟ ಮನಸ್ಥಿತಿಯವ, ಆತನ ಮನಸ್ಸಿನಲ್ಲಿ ವಿಷವೇ ತುಂಬಿದೆ, ಒವೈಸಿ ಎರಡನೇ ಜಿನ್ನಾ ಆಗಲು ಪ್ರಯತ್ನಿಸುತ್ತಿದ್ದಾರೆ" ಎಂದು ಕಿಡಿಕಾರಿದರು.

ಇಂದು ಬೆಳಿಗ್ಗೆ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮೊದಲ ದಿನದ ಯೋಗಶಿಬಿರದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಇನ್ನೂ ನಾಲ್ಕು ದಿನ ಉಡುಪಿಯಲ್ಲೇ ತಂಗಲಿರುವ ಬಾಬಾ ರಾಮ್ ದೇವ್ ಯೋಗ ಶಿಬಿರದ ಜೊತೆಗೆ ಯೋಗ ಚಿಕಿತ್ಸೆ ಕುರಿತು ಮಾಹಿತಿ ನೀಡಲಿದ್ದಾರೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications