ಉಡುಪಿ ಕೃಷ್ಣಮಠದಲ್ಲಿ ದೀಪಾವಳಿ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆ, ಬಲೀಂದ್ರ ಪೂಜೆ ಸಂಪನ್ನ
ಉಡುಪಿ, ನವೆಂಬರ್ 15: ಉಡುಪಿ ಶ್ರೀಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆ ನಡೆಯಿತು. ಪೂಜೆಯನ್ನು ಪರ್ಯಾಯ ಅದಮಾರು ಈಶಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಲಕ್ಷ್ಮೀಶ ಆಚಾರ್ಯರು ನೆರವೇರಿಸಿದರು.
ಶನಿವಾರ ಶ್ರೀಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ತೈಲಾಭ್ಯಂಗ ಹಾಗೂ ಎಣ್ಣೆಶಾಸ್ತ್ರ ನಡೆಯಿತು. ಚಂದ್ರಶಾಲೆಯಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರಿಗೆ ಮಠದ ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿಂತಾಯರು ಎಣ್ಣೆಶಾಸ್ತ್ರ ಮಾಡಿದರು.

ನಂತರ ಕೃಷ್ಣಾಪುರ ಮಠಾಧೀಶರು ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರಿಗೆ, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರಿಗೆ, ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ ಎಣ್ಣೆಶಾಸ್ತ್ರ ಮಾಡಿದರು. ಪರ್ಯಾಯ ಮಠದ ದಿವಾನರು ಶ್ರೀಪಾದರುಗಳಿಗೆ ಮಾಲಿಕೆ ಮಂಗಳಾರತಿ ಮಾಡುವುದರೊಂದಿಗೆ ಹೊಸವಸ್ತ್ರ ಸಮರ್ಪಿಸಿದರು.

ಸಂಜೆ ಹೊತ್ತು ಮಠದ ಗೋಪುರದ ಎದುರಿಗೆ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು "ಬಲೀಂದ್ರ ಪೂಜೆ'ಯನ್ನು ನಡೆಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications