Get Updates
Get notified of breaking news, exclusive insights, and must-see stories!

ರಾಜ್ಯದ 3ನೇ ಶ್ರೀಮಂತ ದೇವಸ್ಥಾನ ಕೊಲ್ಲೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ!

ಉಡುಪಿ, ಮಾರ್ಚ್ 25: ಉಡುಪಿ ಜಿಲ್ಲೆಯ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ‌ ಬಹಿಷ್ಕಾರ ಮುಂದುವರಿದಿದೆ. ರಾಜ್ಯದ ಮೂರನೇ ಅತೀ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಾರ್ಷಿಕ ಉತ್ಸವದಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಲಾಗಿದೆ.

ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಶುಕ್ರವಾರ ಮತ್ತು ಶನಿವಾರ ಜಾತ್ರಾ ಮಹೋತ್ಸವ ನಡೆಯಲಿದೆ. ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎ ಗ್ರೇಡ್ ದೇವಾಲಯ ಕೊಲ್ಲೂರು ಮೂಕಾಂಬಿಕಾ ‌ದೇವಾಲಯ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ‌ ಕೊಲ್ಲೂರಿನಲ್ಲಿದ್ದು, ರಾಜ್ಯ- ‌ಹೊರ ರಾಜ್ಯಗಳಿಂದ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಾರೆ.

ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಕೊಲ್ಲೂರು ಗ್ರಾಮ ಪಂಚಾಯತ್‌ಗೆ ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಮನವಿ ನೀಡಿರುವ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಮುಸ್ಲಿಂ ವ್ಯಾಪಾರಿಗಳ ಮನವೊಲಿಸಿದೆ.

Ban On Stalls of Muslim Traders In Kollur Mookambika Temple Jatre

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಹಿನ್ನಲೆಯಲ್ಲಿ ಸಾವಿರಾರು ಭಕ್ತರು ದೇವಿ ಮೂಕಾಂಬಿಕೆಯ ದರ್ಶನ ಮಾಡಿದ್ದಾರೆ. ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ನಿಷೇಧ ಹೇರಲಾಗಿದ್ದು, ಕೊಲ್ಲೂರು ಪಂಚಾಯತ್‌ನಿಂದ ವ್ಯಾಪಾರ ಪರವಾನಗಿ ನೀಡಲಾಗಿಲ್ಲ.

ಕೊಲ್ಲೂರು ದೇವಸ್ಥಾನ ವಠಾರದಲ್ಲಿ ಸದ್ಯ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ದೇವಸ್ಥಾನದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಿದ್ದು, ಹಿಂದೂ ವ್ಯಾಪಾರಿಗಳು ತಮ್ಮ ಅಂಗಡಿಗಳಿಗೆ ಕೇಸರಿ ಬಾವುಟ ಹಾಕಲಾಗಿದೆ.

Ban On Stalls of Muslim Traders In Kollur Mookambika Temple Jatre

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ‌ ನೀಡಿರುವ ಕೊಲ್ಲೂರು ಮೂಕಾಂಬಿಕಾ ದೇವಾಲಯದ ವ್ಯವಸ್ಥಾಪನಾ ‌ಸಮಿತಿ ಅಧ್ಯಕ್ಷ ಚಂದ್ರಶೇಖರ್, ಜಾತ್ರೆಯನ್ನು ನಿರ್ವಿಘ್ನವಾಗಿ ಮಾಡುವುದು ನಮ್ಮ ಉದ್ದೇಶವಾಗಿದೆ. ಉತ್ಸವ ಸುಸೂತ್ರವಾಗಿ ಮಾಡುವುದು ನಮ್ಮ ಕರ್ತವ್ಯವಾಗಿದೆ. ಅನ್ಯಕೋಮಿನವರಿಗೆ ಅವಕಾಶ ಕೊಡಬಾರದೆಂದು ಹಿಂದೂ ಸಂಘಟನೆ ಮನವಿ ಮಾಡಿದೆ.

ಹಿಂದೂ ಸಂಘಟನೆಯ ಮನವಿಯನ್ನು ನಾವು ಬೆಂಬಲಿಸಿದ್ದೇವೆ. ಬಂದ ಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಯಾವುದೇ ಸಂಘರ್ಷದ ವಾತಾವರಣ ಬೇಡ ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಕೊಲ್ಲೂರು ದೇವಸ್ಥಾನದ ವಠಾರದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ವ್ಯವಸ್ಥೆ ಮಾಡಿದ್ದೇವೆ. ಸಾರ್ವಜನಿಕ ರಸ್ತೆಯಲ್ಲಿ ಪರವಾನಗಿ ಕೊಡುವ ಅಧಿಕಾರ ಪಂಚಾಯತಿಗಿದೆ ಎಂದು ಹೇಳಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಜಾತ್ರಾ ಮಹೋತ್ಸವದ ‌ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅನುಮತಿ ನೀಡದಂತೆ ದೇವಾಲಯದ ವ್ಯವಸ್ಥಾಪನಾ ‌ಸಮಿತಿ‌ ಸದಸ್ಯೆ ಸಂಧ್ಯಾ ರಮೇಶ್ ಗ್ರಾಮ ಪಂಚಾಯತ್‌ಗೆ ಮನವಿ ಮಾಡಿದ್ದರು.

Ban On Stalls of Muslim Traders In Kollur Mookambika Temple Jatre

ಈ ಬಗ್ಗೆ ಮಾತನಾಡಿದ ಅವರು, "ಕೊಲ್ಲೂರು ಮೂಕಾಂಬಿಕಾ ‌ಜಾತ್ರೆಯಲ್ಲಿ ವ್ಯಾಪಾರ ನಡೆಸಲು ಪಂಚಾಯತ್ ಅನುಮತಿ ‌ನೀಡಬೇಕು. ಪಂಚಾಯತ್ ಹಿಂದುಯೇತರರಿಗೆ ವ್ಯಾಪಾರಕ್ಕೆ ‌ಅನುಮತಿ‌ ನೀಡಿದರೆ ಸಂಘರ್ಷ ‌ನಡೆಯಬಹುದು. ಈ ಹಿನ್ನಲೆಯಲ್ಲಿ ಕೊಲ್ಲೂರು ಮೂಕಾಂಬಿಕೆಯ ವ್ಯವಸ್ಥಾಪನಾ ಸಮಿತಿಯಿಂದ ಪಂಚಾಯತ್‌ಗೆ ಮನವಿ ನೀಡಲಾಗಿತ್ತು. ವ್ಯವಸ್ಥಾಪನಾ ಸಮಿತಿಯ ಸದಸ್ಯೆಯಾಗಿ ವೈಯುಕ್ತಿಕ ನೆಲೆಯಲ್ಲಿ ಮನವಿ ನೀಡಿದ್ದೆ. ಮುಸ್ಲಿಮರಿಗೂ ಅವಕಾಶ ನೀಡಿದರೆ ಸಂಘರ್ಷವಾಗುವ ಮುನ್ನಚ್ಚೆರಿಕೆಯಿಂದ ಮನವಿ ನೀಡಲಾಗಿದೆ," ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರತಿಕ್ರಿಯೆ
ಇನ್ನು ಈ ಎಲ್ಲಾ ಬೆಳವಣಿಗೆ ಬಗ್ಗೆ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಮ್ ಪ್ರತಿಕ್ರಿಯೆ ನೀಡಿದ್ದು, "ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆ ಮನವಿ ಮಾಡಿತ್ತು. ಪಂಚಾಯತ್ ಎಲ್ಲರ ‌ಮನವಿ ಸ್ವೀಕರಿಸಿದಂತೆ ಈ‌ ಮನವಿಯನ್ನೂ ಸ್ವೀಕರಿಸಿದ್ದೇವೆ. ನಮಗೆ ಹಿಂದುಯೇತರರಿಗೆ ಅವಕಾಶ ನೀಡಬೇಡಿ ಅನ್ನುವ ಸರ್ಕಾರದ ಯಾವುದೇ ಆದೇಶ ಇಲ್ಲ. ಆದರೆ ಧಾರ್ಮಿಕ ದತ್ತಿ ಇಲಾಖೆಯ ನಿಯಮದಲ್ಲಿ ‌ಅವಕಾಶ ಇಲ್ಲ," ಎಂದರು.

"ಕೆಲವು ಮುಸ್ಲಿಂ ವ್ಯಾಪಾರಿಗಳು ವ್ಯಾಪಾರಕ್ಕೆ ‌ಅನುಮತಿ‌ ಕೇಳಿ ಬಂದಿದ್ದರು. ಶಾಂತಿ ವಾತಾವರಣಕ್ಕೆ ವ್ಯಾಪಾರ ಮಾಡಬೇಡಿ. ಅಶಾಂತಿ ವಾತಾವರಣ ಸೃಷ್ಟಿಸಬೇಡಿ ಅನ್ನುವ ‌ಮನವಿ ಮಾಡಿದ್ದೆವು. ಇದಕ್ಕೆ ವ್ಯಾಪಾರಿಗಳು ಸ್ಪಂದಿಸಿ ವ್ಯಾಪಾರ ನಡೆಸದ ಬಗ್ಗೆ ನಿರ್ಧಾರ ತಿಳಿಸಿ ಹೋಗಿದ್ದಾರೆ. ಸದ್ಯ ಕೊಲ್ಲೂರು ಜಾತ್ರೆಯಲ್ಲಿ ‌ಯಾರೂ ವ್ಯಾಪಾರ ಮಾಡುತ್ತಿಲ್ಲ," ಅಂತಾ ಸ್ಪಷ್ಟನೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+