ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಔರಾದ್ಕರ್ ವರದಿ ಜಾರಿ ಗ್ಯಾರಂಟಿ ಎಂದು ಭರವಸೆಯಿತ್ತ ಬೊಮ್ಮಾಯಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಸೆಪ್ಟೆಂಬರ್ 27: ಉಡುಪಿ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿ ಉಡುಪಿಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ಸ್ವಾಗತ ನೀಡಲಾಯಿತು.

ಔರಾದ್ಕರ್ ವರದಿಗೆ ಸರ್ಕಾರ ತಡೆ: ಪೊಲೀಸರ ಆಸೆಗೆ ತಣ್ಣೀರುಔರಾದ್ಕರ್ ವರದಿಗೆ ಸರ್ಕಾರ ತಡೆ: ಪೊಲೀಸರ ಆಸೆಗೆ ತಣ್ಣೀರು

Recommended Video

ಗೃಹ ಸಚಿವ ಬಸವರಾಜ ಬೊಮ್ಮಾಯಿಯ ಜನ ಮೆಚ್ಚುಗೆಯ ನಡೆ | Basavaraj Bommai

ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು, ಪೊಲೀಸರ ವೇತನ ಪರಿಷ್ಕರಣೆ ವಿಚಾರವಾಗಿ ಕೆಲ ವಿಷಯಗಳನ್ನು ಹಂಚಿಕೊಂಡರು. "ಖಂಡಿತವಾಗಿಯೂ ಔರಾದ್ಕರ್ ವರದಿ ಜಾರಿಯಾಗುತ್ತದೆ. ಔರಾದ್ಕರ್ ವರದಿಗೆ ಎರಡು ಹಂತದಲ್ಲಿ ಸಚಿವ ಸಂಪುಟ ಒಪ್ಪಿಗೆಯನ್ನೂ ಕೊಟ್ಟಿದೆ. ಆದರೆ ಜೈಲು ಸಿಬ್ಬಂದಿ ಮತ್ತು ಫೈಯರ್ ಫೋರ್ಸ್ ಬಿಟ್ಟು ಹೋಗಿತ್ತು. ನಮ್ಮ ಕ್ಯಾಬಿನೆಟ್ ನಲ್ಲಿ ಅವಕ್ಕೂ ಒಪ್ಪಿಗೆ ಕೊಟ್ಟಿದ್ದೇವೆ. ಆರ್ಥಿಕ‌ ಇಲಾಖೆಯಿಂದ ಕೆಲವು ಸ್ಪಷ್ಟನೆ ಕೇಳಿದ್ದೇವೆ. ಇನ್ನೊಂದು ವಾರದೊಳಗೆ ಸ್ಪಷ್ಟವಾದ ಸುತ್ತೋಲೆ ಹೊರಡಿಸುತ್ತೇವೆ" ಎಂದು ಹೇಳಿದರು.

Basavaraj Bommai Spoke About Auradkar Report

ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, "ಎಲ್ಲಾ ಮಾಹಿತಿಗಳು ಸಿಬಿಐ ಬಳಿ ಇರುತ್ತವೆ. ಅಧಿಕೃತವಾಗಿ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಗೃಹ ಸಚಿವನಾಗಿ ಊಹಾಪೋಹಗಳಿಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಎಸ್ ಐಟಿ ಮಾಡಿರುವ ತನಿಖೆಯ ಸಂಪೂರ್ಣ ವಿವರ ಸಿಬಿಐಗೆ ನೀಡಿದ್ದೇವೆ. ಆದರೆ ಅನುಮತಿ‌ ಇಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಮಾತುಕತೆಯ ಕದ್ದಾಲಿಕೆ ಮಾಡುವುದು ತಪ್ಪು" ಎಂದು ಹೇಳಿದರು.

ಝಿರೋ ಟ್ರಾಫಿಕ್ ಬೇಡ : ಗೃಹ ಸಚಿವರ ಜನ ಮೆಚ್ಚುಗೆಯ ನಡೆಝಿರೋ ಟ್ರಾಫಿಕ್ ಬೇಡ : ಗೃಹ ಸಚಿವರ ಜನ ಮೆಚ್ಚುಗೆಯ ನಡೆ

ಪ್ರಭಾವ ಬಳಸಿ ಉಪ ಚುನಾವಣೆ ಮುಂದೂಡಲಾಗಿದೆ ಎಂಬ ಕುಮಾರಸ್ವಾಮಿ ಆರೋಪದ ಕುರಿತು ಕೇಳಿದ್ದಕ್ಕೆ, "ಕುಮಾರಸ್ವಾಮಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ" ಎಂದಷ್ಟೇ ಚುಟುಕಾಗಿ ಪ್ರತಿಕ್ರಿಯೆ ನೀಡಿದರು.

English summary
Home Minister Basavaraja Bommai, who visited Udupi for the first time after being district incharge minister, was greeted by the district administration. He also spoke about Auradkar report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X