ಕಾಫಿ ತೋಟದಲ್ಲಿ ಅನುಮಾನಾಸ್ಪದವಾಗಿ ದನದ ವ್ಯಾಪಾರಿ ಸಾವು
ಉಡುಪಿ, ಮೇ. 30 : ದನದ ವ್ಯಾಪಾರಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ಇಂದು ಬುಧವಾರ ನಡೆದಿದೆ. ದಕ್ಷಿಣ ಕನ್ನಡ ಮೂಲದ ಜೋಕಟ್ಟೆ ನಿವಾಸಿ ಹುಸೇನಬ್ಬ ಮೃತ ದುರ್ದೈವಿ.
ಹುಸೇನಬ್ಬ ಕಳೆದ 35 ವರ್ಷಗಳಿಂದ ಹಸುವಿನ ವ್ಯಾಪಾರ ಮಾಡುತ್ತಿದ್ದ. ಕಳೆದ ರಾತ್ರಿ ಉಡುಪಿಯ ಪೆರ್ಡೂರು ಸಮೀಪ ಬರುತ್ತಿರುವಾಗ ಪೊಲೀಸರು ಹುಸೇನಬ್ಬ ವಾಹನವನ್ನು ಅಡ್ಡಗಟ್ಟಿದ್ದಾರೆ. ಹುಸೇನಬ್ಬ ಸೇರಿದಂತೆ ಹಸು ಸಾಗಾಟದ ವಾಹನದಲ್ಲಿದ್ದ ನಾಲ್ಕೈದು ಮಂದಿ ದಿಕ್ಕಾಪಾಲಾಗಿ ಓಡಿದ್ದಾರೆ.
ಪೊಲೀಸರು ವಾಹನವನ್ನು ಕಳೆದ ರಾತ್ರಿಯೇ ವಶಪಡಿಸಿಕೊಂಡಿದ್ದಾರೆ. ರಾತ್ರಿ ತಪ್ಪಿಸಿಕೊಂಡು ಓಡಿದ್ದ ಹುಸೇನಬ್ಬ ಮೃತದೇಹ ಬೆಳಗ್ಗೆ ಕಾಫಿ ತೋಟದಲ್ಲಿ ಪತ್ತೆಯಾಗಿದೆ. ಹಿರಿಯಡ್ಕ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲು ಮಾಡಿದ್ದಾರೆ.

ಹುಸೇನಬ್ಬನ ಮನೆಯವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ದುಷ್ಕರ್ಮಿಗಳು ಕೊಲೆ ಮಾಡಿರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಳೆದ ರಾತ್ರಿ ಪೊಲೀಸರ ಜೊತೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿದ್ದರೆಂಬ ಸಂಶಯವನ್ನು ವ್ಯಕ್ತಗೊಳಿಸಿದ್ದಾರೆ.
ಹುಸೇನಬ್ಬ ಮೃತದೇಹವನ್ನು ಮಣಿಪಾಲ ಶವಾಗಾರಕ್ಕೆ ರವಾನಿಸಲಾಗಿದೆ. ಹೃದಯಾಘಾತದಿಂದ ಸತ್ತಿರಬಹುದೆಂಬ ಶಂಕೆಯೂ ಇದೆ. ಮೃತರು ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶವಪರೀಕ್ಷಾ ವರದಿ ಬಂದ ನಂತರ ಅನುಮಾನಾಸ್ಪದ ಸಾವಿಗೆ ಸರಿಯಾದ ಕಾರಣ ತಿಳಿಯಬಹುದು.
ಈ ಬಗ್ಗೆ ಮಾತನಾಡಿದ ಎಸ್ಪಿ ಲಕ್ಷ್ಮಣ್ ನಿಂಬರ್ಗಿ, ಸಾವಿನ ಕುರಿತು ಮನೆಯವರು ಈಗಾಗಲೇ ದೂರನ್ನು ನೀಡಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ದೂರಿನಲ್ಲಿ ಸೂರ್ಯ ಎಂಬಾತನ ಮೇಲೆ ಸಂಶಯ ವ್ಯಕ್ತಪಡಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications