ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣ, ನಿರಂಜನ್ ಭಟ್ ಸಿಐಡಿ ವಶಕ್ಕೆ

|
Google Oneindia Kannada News

ಉಡುಪಿ, ಸೆಪ್ಟೆಂಬರ್ 16 : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜ್ಯೋತಿಷಿ ನಿರಂಜನ್ ಭಟ್‌ನನ್ನು ಸಿಐಡಿ ವಶಕ್ಕೆ ನೀಡಲಾಗಿದೆ. ಸಿಐಡಿ ಪ್ರಕರಣದ ತನಿಖೆ ಆರಂಭಿಸಿದ ಬಳಿಕ ಮೊದಲ ಬಾರಿಗೆ ಆರೋಪಿಯನ್ನು ವಶಕ್ಕೆ ಪಡೆದಿದೆ.

ಸಿಐಡಿ ಉಡುಪಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಜ್ಯೋತಿಷಿ ನಿರಂಜನ್ ಭಟ್ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು. ಮನವಿ ಪುರಸ್ಕರಿಸಿದ ಕೋರ್ಟ್, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು 2 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.[ಭಾಸ್ಕರ ಶೆಟ್ಟಿ ಹತ್ಯೆ: ಜ್ಯೋತಿಷಿ ನಿರಂಜನ್ ಭಟ್ ಅನ್ನೋ ಪ್ರಳಯಾಂತಕ]

bhaskar shetty

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್, ಜ್ಯೋತಿಷಿ ನಿರಂಜನ್ ಭಟ್, ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್, ಕಾರು ಚಾಲಕ ರಾಘವೇಂದ್ರನನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೆ.19ರಂದು ಎಲ್ಲರನ್ನೂ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ.[ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಹೊಸ ತಿರುವು]

ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಿದ ಬಳಿಕ ಜ್ಯೋತಿಷಿ ನಿರಂಜನ್ ಶೆಟ್ಟಿ ಅವರ ಮನೆಯ ಹೋಮಕುಂಡದಲ್ಲಿ ಶವವನ್ನು ಸುಡಲಾಗಿದೆ ಎಂಬ ಆರೋಪವಿದೆ. ಆದ್ದರಿಂದ, ನಿರಂಜನ್ ಭಟ್ ಪ್ರಕರಣದ ಪ್ರಮುಖ ಆರೋಪಿ. ಪೊಲೀಸರ ವಶದಲ್ಲಿದ್ದಾಗಲೇ ಉಂಗುರ ನುಂಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರಂಜನ್ ಯತ್ನಿಸಿದ್ದ.[ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ ಸಿಐಡಿ ತನಿಖೆಗೆ]

ಹತ್ಯೆ ಪ್ರಕರಣದ ಸಾಕ್ಷಿಗಳನ್ನು ನಾಶ ಮಾಡಲು ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್, ಕಾರು ಚಾಲಕ ರಾಘವೇಂದ್ರ ಸಹಾಯ ಮಾಡಿದ್ದಾರೆ ಎಂಬ ಆರೋಪವೂ ಇದೆ. ಆದ್ದರಿಂದ ಅವರನ್ನೂ ಬಂಧಿಸಲಾಗಿದ್ದು, ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

English summary
Bhaskar Shetty murder case accused, Astrologer Niranjan Bhat has been sent to CID custody for 2 days. All the five accused who are in judicial custody are scheduled to be produced in court on September 19, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X