ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಉಡುಪಿ, ಅಕ್ಟೋಬರ್ 12: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.
ಜ್ಯೋತಿಷಿ ನಿರಂಜನ್ ಭಟ್ ಅವರು ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿಯೊಂದಿಗೆ ಸೇರಿ ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಅಲ್ಲದೇ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. 2016 ಜುಲೈ 28 ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ಅವರ ತಲೆಗೆ ಬಲವಾಗಿ ರಾಡ್ ನಿಂದ ಹೊಡೆದು, ಶವವನ್ನು ಹೋಮಕುಂಡದಲ್ಲಿ ಸುಡಲಾಗಿತ್ತು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್ ಬೋಪಣ್ಣ ಮತ್ತು ವಿ.ರಾಮಸುಬ್ರಮಣ್ಯಂ ಅವರನ್ನೊಳಗೊಂಡ ಪೀಠವು ಅರ್ಜಿಯ ಕುರಿತು ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.
ಕೆಲವು ಸಾಕ್ಷಿದಾರರನ್ನು ಆರೋಪಿಗಳ ಎದುರಲ್ಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಬೇಕು ಎಂದು ಹೈಕೋರ್ಟ್ ಹೇಳಿದೆ. ಭಾಸ್ಕರ್ ಶೆಟ್ಟಿ ಪತ್ನಿಗೆ ಜಾಮೀನು ನೀಡಲಾಗಿದೆ.
ಭಾಸ್ಕರ್ ಶೆಟ್ಟಿ ಅವರನ್ನು ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಹತ್ಯೆ ಮಾಡಲಾಗಿತ್ತು. ನಂತರ ಅವರ ಶವವನ್ನು ಹೋಮಕುಂಡದಲ್ಲಿ ಸುಟ್ಟುಹಾಕಲಾಯಿತು. ಈ ಹತ್ಯೆ ಪ್ರಕರಣವು ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಟಿಸಿತ್ತು.
ಭಾಸ್ಕರ್ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಈ ಪ್ರಕರಣದ ಪ್ರಮುಖ ಆರೋಪಿಗಳು. ಸಾಕ್ಷಿ ನಾಶಪಡಿಸಿದ ಕಾರಣ ಬಂಧಿಸಲ್ಪಟ್ಟಿದ್ದ ನಿರಂಜನ್ ಭಟ್ ಅವರ ತಂದೆ ಶ್ರೀನಿವಾಸ್ ಭಟ್ ಹಾಗೂ ಚಾಲಕ ರಾಘವೇಂದ್ರ ಜಾಮೀನಿನ ಮೇಲೆ ಹೊರಬಂದಿದ್ದಾರೆ.
-
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications