ಭಾಸ್ಕರ್ ಶೆಟ್ಟಿ ಕೊಲೆ : ರಾಜೇಶ್ವರಿ ಜಾಮೀನು ಅರ್ಜಿ ತಿರಸ್ಕೃತ
ಉಡುಪಿ, ಡಿಸೆಂಬರ್. 28 : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಥಮ ಆರೋಪಿ ಪತ್ನಿ ರಾಜೇಶ್ವರಿ ಶೆಟ್ಟಿ ಜಾಮೀನು ಅರ್ಜಿಯನ್ನು ಬುಧವಾರ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ತಿರಸ್ಕೃತ ಮಾಡಿದೆ.
ಜಾಮೀನುಗಾಗಿ ರಾಶಜೇಶ್ವರಿ ಶೆಟ್ಟಿ ಅವರು ಉಡುಪಿ ಜಿಲ್ಲಾ ಸತ್ರ ನ್ಯಾಯಲಕ್ಕೆ ಅರ್ಜಿ ಸಲ್ಲಿಸಿದ್ದರು. ಆರೋಪಿ ಪರ ವಕೀಲ ಅರುಣ್ ಬಂಗೇರ ವಾದ ಮಂಡಿಸಿದರು.
ಸರಕಾರಿ ವಿಶೇಷ ಅಭಿಯೋಜಕ ಶಾಂತರಾಮ್ ಶೆಟ್ಟಿ ಪ್ರತಿವಾದ ಮಂಡಿಸಿದರು. ವಾದ -ಪ್ರತಿವಾದವನ್ನ ಆಲಿಸಿದ ನ್ಯಾಯಾಧೀಶ ಟಿ. ವೆಂಕಟೇಶ್ ನಾಯ್ಕ್ ತೀರ್ಪು ನೀಡಿದರು. [ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ]

ಘಟನೆ ಹಿನ್ನೆಲೆ ಏನು? ಗಲ್ಫ್ ರಾಷ್ಟ್ರಗಳಲ್ಲಿ ಹಾಗೂ ಉಡುಪಿಯಲ್ಲಿ ಬಹುಕೋಟಿ ಉದ್ಯಮದ ಪಾಲುದಾರರಾಗಿದ್ದ ಭಾಸ್ಕರ ಶೆಟ್ಟಿ ಉಡುಪಿಯ ಇಂದ್ರಾಳಿಯಲ್ಲಿರುವ ತನ್ನ ಮನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು.
ಸುಮಾರು ಎಂಟು ದಿನಗಳ ಬಳಿಕ ಅವರ ಪತ್ನಿ ಮತ್ತು ಮಗನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಭಾಸ್ಕರ ಶೆಟ್ಟಿಯನ್ನು ತಾವೇ ಕೊಲೆ ಮಾಡಿರುವುದಾಗಿ ಪತ್ನಿ ಮತ್ತು ಮಗ ತಪ್ಪೊಪ್ಪಿಕೊಂಡಿದ್ದರು.
ಮಾತ್ರವಲ್ಲದೇ ನಂದಳಿಕೆಯ ಸ್ವಯಂಘೋಷಿತ ಜ್ಯೋತಿಷಿ ನಿರಂಜನ ಭಟ್ಟ ಎಂಬಾತನ ಸಹಾಯದಿಂದ ಆತನ ಮನೆಯ ಹೋಮಕುಂಡದಲ್ಲಿ ಶೆಟ್ಟಿಯವರ ಶವವನ್ನು ದಹಿಸಿ ಪಳೆಯುಳಿಕೆಗಳನ್ನು ಸಮೀಪದ ನದಿಯಲ್ಲಿ ಎಸೆದಿರುವುದಾಗಿ ಹೇಳಿಕೆ ನೀಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications