ಉಡುಪಿ; ಸ್ಫೋಟಕ ತಿರುವು ಪಡೆದ ವಿಶಾಲ ಗಾಣಿಗ ಕೊಲೆ ಕೇಸ್!
ಉಡುಪಿ, ಜುಲೈ 20; ತೀವ್ರ ಸಂಚಲನ ಮೂಡಿಸಿದ್ದ ಉಡುಪಿ ಜಿಲ್ಲೆಯ ವಿಶಾಲ ಗಾಣಿಗ ಕೊಲೆ ಪ್ರಕರಣ ತಾರ್ಕಿಕ ಅಂತ್ಯ ಕಾಣುತ್ತಿದೆ. ಉಡುಪಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶಾಲ ಗಾಣಿಗ ಪತಿ ರಾಮಕೃಷ್ಣ ಬಂಧಿಸಿದ್ದಾರೆ.
ಜುಲೈ 12ರಂದು ವಿಶಾಲ ಗಾಣಿಗ (45) ಹತ್ಯೆ ನಡೆದಿತ್ತು. ಪತಿ ರಾಮಕೃಷ್ಣ ಪತ್ನಿಯ ಹತ್ಯೆಗೆ ಸುಪಾರಿ ನೀಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ದುಬೈನಲ್ಲಿದ್ದ ರಾಮಕೃಷ್ಣ ಅಲ್ಲಿಂದಲೇ ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದ.
ಉತ್ತರ ಭಾರತ ಮೂಲದ ಸುಪಾರಿ ಹಂತಕರ ಮೂಲಕ ಕೊಲೆಗೆ ಸುಪಾರಿ ನೀಡಲಾಗಿತ್ತು. ವಿಶಾಲ ಗಾಣಿಗ ಕೊಲೆಗೆ ರಾಮಕೃಷ್ಣನ ಅಕ್ರಮ ಸಂಬಂಧ, ಆಸ್ತಿ ವ್ಯವಹಾರವೇ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಕೆಲವು ದಿನಗಳ ಹಿಂದೆ ರಾಮಕೃಷ್ಣನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ವಾಪಸ್ ಕಳಿಸಿದ್ದರು. ಸೋಮವಾರ ಬಂಧಿಸಿ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಅಡಗಿದ್ದ ಸುಪಾರಿ ಹಂತಕರನ್ನು ಬಂಧಿಸಲಾಗಿದ್ದು, ಪೊಲೀಸರು ಶೀಘ್ರವೇ ಈ ಕುರಿತು ಮಾಹಿತಿ ನೀಡಲಿದ್ದಾರೆ.
ಜುಲೈ 12ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಉಪ್ಪಿಕೋಟೆಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಿಶಾಲ ಗಾಣಿಗ ಕೊಲೆಯಾಗಿತ್ತು. ಈ ಹತ್ಯೆ ಪ್ರಕರಣದ ಜಿಲ್ಲೆಯಲ್ಲಿ ಮಾತ್ರವಲ್ಲದೆ ಇಡೀ ಕರಾವಳಿಯಲ್ಲೇ ತೀವ್ರ ಸಂಚಲನ ಉಂಟು ಮಾಡಿತ್ತು.
ಗಂಗೊಳ್ಳಿಯ ನಿವಾಸಿಯಾದ ವಿಶಾಲ ಗಾಣಿಗ ದುಬೈನಲ್ಲಿದ್ದರು. ಭಾರತಕ್ಕೆ ಮರಳಿದ ಕೆಲವೇ ದಿನಗಳಲ್ಲಿ ಅವರ ಹತ್ಯೆಯಾಗಿತ್ತು. ಪರಿಚಯಸ್ಥರೇ ಈ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದರು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications