ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಂಗೊಳ್ಳಿಯಲ್ಲಿ ಹಿಟ್ ಆಂಡ್ ರನ್:ಬೈಕ್ ಸವಾರ ಸ್ಥಳದಲ್ಲೇ ಸಾವು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಫೆಬ್ರವರಿ 19:ಕುಂದಾಪುರ ತಾಲೂಕಿನ ಆರಾಟೆ ಸೇತುವೆ ಮೇಲೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬಿಜೆಪಿ ಶಾಸಕ ಸಿಟಿ ರವಿ ಅವರಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರ ದುರ್ಮರಣಬಿಜೆಪಿ ಶಾಸಕ ಸಿಟಿ ರವಿ ಅವರಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರ ದುರ್ಮರಣ

ಮೃತ ದೇಹ ನಜ್ಜುಗುಜ್ಜುಗೊಂಡಿದ್ದು, ಅಫಘಾತ ಸ್ಥಳದಿಂದ 2 ಕಿಲೋಮೀಟರ್ ದೂರ ಅಂದರೆ ಹೆಮ್ಮಾಡಿ ತನಕ ಮೃತಪಟ್ಟ ಯುವಕನ ಬೈಕ್ ಅನ್ನು ಖಾಸಗಿ ವಾಹನ ಎಳೆದೊಯ್ದಿದೆ. ಮೃತ ಪಟ್ಟ ಯುವಕ ಗಂಗೊಳ್ಳಿ ಸಮೀಪದ ಬಾವಿಕಟ್ಟೆ ನಿವಾಸಿ ಗಣೇಶ್ ಎಂಬುವವರ ಪುತ್ರ ವಿಖ್ಯಾತ್ (24) ಎಂದು ತಿಳಿದು ಬಂದಿದೆ.

 ಸಿಟಿ ರವಿ ಕಾರು ಅಪಘಾತ ಪ್ರಕರಣ: ಬಿಜೆಪಿ ನೀಡಿದ ಸ್ಪಷ್ಟೀಕರಣವೇನು? ಸಿಟಿ ರವಿ ಕಾರು ಅಪಘಾತ ಪ್ರಕರಣ: ಬಿಜೆಪಿ ನೀಡಿದ ಸ್ಪಷ್ಟೀಕರಣವೇನು?

ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಭೇಟಿ ನೀಡಿದ್ದು, ಹೆದ್ದಾರಿಯಲ್ಲಿ ಸಂಚರಿಸುವ ಹೈವೇ ಪೆಟ್ರೊಲ್ ವಾಹನದ ಸಿಬ್ಬಂದಿಗಳಿಂದ ಅಫಘಾತದ ಮಾಹಿತಿ ಪಡೆದಿದ್ದಾರೆ.

Bike rider died on the spot in a vehicle accident

ಮೃತದೇಹ ಹೆದ್ದಾರಿಯಲ್ಲಿ ಅನಾಥವಾಗಿ ಬಿದ್ದಿದ್ದು, ಗಂಗೊಳ್ಳಿ 24x7 ಹೆಲ್ಪ್ ಲೈನ್ ಸ್ವಯಂಸೇವಕರು ಹಾಗೂ ಪೊಲೀಸ್ ಸಿಬ್ಬಂದಿಗಳ ಸಹಾಯದಿಂದ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.ವಿಖ್ಯಾತ್ ಕುಂದಾಪುರದ ಹೊಟೇಲ್ ವೊಂದರಲ್ಲಿ ಕೆಲಸಕ್ಕಿದ್ದ. ತಡರಾತ್ರಿ 12.30 ಸುಮಾರಿಗೆ ಅಫಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ.

English summary
Bike rider died on the spot in a vehicle accident. This incident occurred on the Arate Bridge in Kundapur taluk. Gangolli police visited the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X