ಉಡುಪಿಯಲ್ಲಿ ಬಿಸ್ಕೆಟ್ ನಲ್ಲಿ ಮೂಡಿದ ಗಣಪನ ಕಲಾಕೃತಿ
ಉಡುಪಿ, ಆಗಸ್ಟ್ 25: ಪರಿಸರ ಸ್ನೇಹಿ ಗಣೇಶ ಚತುರ್ಥಿಯ ಮಂತ್ರ ಜಪಿಸುತ್ತಿರುವ ಈ ಸಂದರ್ಭದಲ್ಲೇ ತಿನ್ನುವ ಬಿಸ್ಕೆಟ್ ನಿಂದ ತಯಾರಿಸಿದ ಗಣೇಶನ ಕಲಾಕೃತಿ ಉಡುಪಿಯ ಸಾಯಿರಾಧಾ ಟಿವಿಎಸ್ ಶೋರೂಮ್ನಲ್ಲಿ ಅನಾವರಣಗೊಂಡಿದೆ.
ಕಲಾವಿದರಾದ ಶ್ರೀನಾಥ್ ಮಣಿಪಾಲ, ವೆಂಕಿ ಪಲಿಮಾರು ಹಾಗೂ ರವಿ ಅವರು ಮೂರು ದಿನಗಳ ಕಾಲ ಪರಿಶ್ರಮ ಪಟ್ಟು ಸುಮಾರು 15 ಕಿಲೋ ಗ್ರಾಂನಷ್ಟು ಬಗೆಬಗೆಯ ಬಿಸ್ಕೆಟ್ ಗಳನ್ನು ಬಳಸಿಕೊಂಡು ಈ ಸುಂದರ ಗಣೇಶನ ಕಲಾಕೃತಿಯನ್ನು ರಚಿಸಿದ್ದಾರೆ.

ಗಣೇಶನ ರಚನೆಯ ಹಾದಿ
ಆರಂಭದಲ್ಲಿ ರಟ್ಟನ್ನು ಬಳಸಿಕೊಂಡು ಗಣೇಶನ ಕಲಾಕೃತಿ ರಚಿಸಿ ನಂತರ ಅದರ ಮೇಲೆ ವಿವಿಧ ವಿನ್ಯಾಸದ ಬಿಸ್ಕೆಟ್ ಗಳನ್ನು ಅಂಟಿಸಿ ಆ ಕಲಾಕೃತಿಯನ್ನು ನಿರ್ಮಿಸಿದ್ದಾರೆ. ಈ ಕಲಾಕೃತಿ ಎಂಟು ಅಡಿ ಎತ್ತರ ಹಾಗೂ ಐದು ಅಡಿ ಅಗಲವಿದೆ.

ಪರಿಸರ ಸ್ನೇಹಿ ಗಣಪ
ಈ ವಿಶಿಷ್ಟ ಕಲಾಕೃತಿಯನ್ನು ಅನಾವರಣಗೊಳಿಸಿದ ಸಂಸ್ಥೆಯ ಎಂ.ಡಿ ಮನೋಹರ್ ಶೆಟ್ಟಿ ಮಾತನಾಡಿ ಸ್ವಚ್ಛ ಭಾರತ್ ಹಾಗೂ ಪರಿಸರ ಸ್ನೇಹಿ ಜೀವನ ಕ್ರಮಕ್ಕೆ ಅನುಗುಣವಾಗಿ ಇಂತಹ ಕಲಾಕೃತಿಗಳ ನಿರ್ಮಾಣಕ್ಕೆ ಹೆಚ್ಚು ಪ್ರೋತ್ಸಾಹ ನೀಡಬೇಕು.

ಬಿಸ್ಕೆಟ್ ಗಣಪನಿಂದ ಮಾಲಿನ್ಯವಿಲ್ಲ
ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣದ ಪೇಂಟಿಂಗ್ ಗಳಿಂದ ನಿರ್ಮಾಣಗೊಂಡ ಗಣಪತಿ ವಿಗ್ರಹದಿಂದ ಪರಿಸರ ನೀರಿನ ಮೂಲಗಳ ಮಾಲಿನ್ಯವಾಗುತ್ತದೆ. ಆದರೆ ಯಾವುದೇ ಪರಿಸರ ಮಾಲಿನ್ಯಕ್ಕೆ ಅವಕಾಶವಿಲ್ಲದ ಈ ಕಲಾಕೃತಿ ಇನ್ನಷ್ಟು ಮಂದಿ ಪ್ರೇರಣೆಯಾಗಬೇಕು ಎನ್ನುತ್ತಾರೆ ಎಂ.ಡಿ ಮನೋಹರ್ ಶೆಟ್ಟಿ

ಒಂದು ವಾರ ಕಾಲ ವೀಕ್ಷಣೆಗೆ
ಈ ಕಲಾಕೃತಿ ಮುಂದಿನ ಒಂದು ವಾರಗಳ ಕಾಲ ಸಾಯಿರಾಧಾ ಟಿವಿಎಸ್ ಶೋರೂಂ ನಲ್ಲಿ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ವಿಶೇಷ ಗಣಪ
ಈ ಹಿಂದೆಯೂ ದೇಶದ ಹಲವು ಭಾಗಗಳಲ್ಲಿ ಬಿಸ್ಕೆಟ್ ನಿಂದ ಗಣಪತಿಗಳನ್ನು ತಯಾರಿಸಲಾಗಿತ್ತು. ಈ ಗಣಪತಿಯನ್ನು ನಮ್ಮ ಕರ್ನಾಟಕದಲ್ಲಿ ಅದರಲ್ಲೂ ಉಡುಪಿಯಲ್ಲಿ ರಚಿಸಿರುವುದು ವಿಶೇಷ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications