BJP: ಉಡುಪಿಯಲ್ಲಿ ಬಿಜೆಪಿಯಲ್ಲಿ ಗುರು ಶಿಷ್ಯರ ಕಾಳಗ: ಗೊಂದಲದಲ್ಲಿ ಕಾರ್ಯಕರ್ತರು
ಉಡುಪಿ, ಮೇ 24: ಲೋಕಸಭಾ ಚುನಾವಣೆಯ ವೇಳೆ ರಾಜ್ಯ ಬಿಜೆಪಿ ಮುಖಂಡ ಈಶ್ವರಪ್ಪ ಅವರ ಬಂಡಾಯ ಸ್ಪರ್ಧೆ ಸಾಕಷ್ಟು ಸುದ್ದಿ ಮಾಡಿತ್ತು. ಸದ್ಯ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದ್ದಂತೆ ಬಿಜೆಪಿಯ ಮಾಜಿ ಶಾಸಕ ಕೂಡ ಪಕ್ಷದ ವಿರುದ್ಧ ಬಂಡಾಯ ಸಾರಿದ್ದಾರೆ.
ಉಡುಪಿ ಜಿಲ್ಲೆ ಈ ಬಾರಿ ಲೋಕಸಭಾ ಚುನಾವಣೆಯ ವೇಳೆಗೆ ಸಾಕಷ್ಟು ಸುದ್ದಿಯಲ್ಲಿತ್ತು ಎಂದರೆ ತಪ್ಪಾಗಲಾರದು. ಅದರಲ್ಲೂ ಎರಡನೇ ಹಂತದ ಲೋಕಸಭಾ ಚುನಾವಣೆಯ ವೇಳೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಉಡುಪಿ ಜಿಲ್ಲೆಯ ಬೈಂದೂರು ಸಾಕಷ್ಟು ಸುದ್ದಿಯ ಕೇಂದ್ರ ಬಿಂದು ಆಗಿತ್ತು.

ಇದೀಗ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದೆ. ಇದರಿಂದ ಮನನೊಂದ ರಘುಪತಿ ಭಟ್ ಕಾರ್ಯಕರ್ತರ ಬೆಂಬಲದೊಂದಿಗೆ ಪಕ್ಷೇತರರಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ.
ಕ್ಷೇತ್ರದ ಅತ್ಯಂತ ಸಾಕಷ್ಟು ತಿರಗಾಟಗಳನ್ನು ಮಾಡಿ ಹೊಸ ಪದವೀಧರ ಮತದಾರರನ್ನು ಸೇರ್ಪಡೆಗೊಳಿಸುವ ಕೆಲಸ ಮಾಡಿದ್ದ ರಘುಪತಿ ಭಟ್ ಬದಲಿಗೆ ಧನಂಜಯ್ ಸರ್ಜಿ ಅವರಿಗೆ ಟಿಕೆಟ್ ನೀಡಿರುವುದು ರಘುಪತಿ ಭಟ್ ಅವರ ಬೇಸರಕ್ಕೆ ಕಾರಣವಾಗಿತ್ತು. ಪಕ್ಷೇತರವಾಗಿ ಅರ್ಥಾಕಾಣದಲ್ಲಿರುವ ರಘುಪತಿ ಭಟ್ ಅವರನ್ನು ಮನವೊಲಿಸುವ ಪ್ರಯತ್ನ ಈಗಾಗಲೇ ನಡೆದಿದ್ದರೂ ಕೂಡ ಯಾವುದಕ್ಕೂ ಬಗ್ಗದ ಭಟ್ ಅವರ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಸ್ಪಷ್ಟೀಕರಣ ನೀಡುವಂತೆ ಮತ್ತು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿಗೆ ಪತ್ರ ಬರೆದಿತ್ತು.
ಇಂತಹ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿರುವ ಯಶ್ ಪಾಲ್ ಸುವರ್ಣ ಅವರು ರಘುಪತಿ ಭಟ್ ಅವರ ಕುರಿತು ಹೇಳಿದ ಹೇಳಿಕೆ ಸದ್ಯ ವಿವಾದಕ್ಕೆ ಕಾರಣವಾಗಿದೆ.

ರಘುಪತಿ ಭಟ್ ಅವರ ಬದಲಿಗೆ ಈ ಬಾರಿ ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಪಡೆದಿದ್ದ ಯಶ್ ಬಾಸ್ ಸುವರ್ಣ ರಘುಪತಿ ಭಟ್ ಅವರ ಆಪ್ತ ಎಂದೇ ಗುರುತಿಸಿಕೊಂಡವರು. ಆದರೆ ಎರಡನೇ ಬಾರಿ ರಘುಪತಿ ಭಟ್ ಅವರಿಗೆ ಪಕ್ಷದಿಂದ ಅನ್ಯಾಯ ಆಗಿದೆ ಎಂದು ತಿಳಿದರು ಕೂಡ ಪರಮಾಪ್ತ ಎನಿಸಿಕೊಂಡ ಯಶ್ ಪಾಲ್ ಸುವರ್ಣ, ರಘುಪತಿ ಭಟ್ ವಿರುದ್ಧ ಮಾತನಾಡಿರುವುದು ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ. ಇನ್ನೊಂದು ಮೂಲದ ಪ್ರಕಾರ ರಘುಪತಿ ಭಟ್ ಅವರ ಟಿಕೆಟ್ ತಪ್ಪಲು ಯಶ್ ಪಾಲ್ ಸುವರ್ಣ ಕಾರಣ ಎನ್ನುವ ಆರೋಪ ರಘುಪತಿ ಭಟ್ ಅಭಿಮಾನಿ ಬಳಗದಿಂದ ಕೇಳಿ ಬರುತ್ತಿದೆ.
ರಾಜಕೀಯ ಜೀವನದ ಪ್ರಾರಂಭದಿಂದ ಹಿಡಿದು ಇಲ್ಲಿಯವರೆಗೆ ಕೈ ಹಿಡಿದು ನಡೆಸಿದ ರಘುಪತಿ ಭಟ್ ವಿರುದ್ಧ ಯಶ್ ಪಾಲ್ ಸುವರ್ಣ ಹೋಗಿದ್ದಾರೆ ಎನ್ನುವ ಆರೋಪ ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ. ಏನೇ ಆದರೂ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಿಂದಾಗಿ ಉಡುಪಿಯ ಬಿಜೆಪಿಯಲ್ಲಿರುವ ಬಿರುಕುಗಳು ದೊಡ್ಡದಾಗುತ್ತಿದೆ. ರಾಜ್ಯ ನಾಯಕರು ಈ ಬಗ್ಗೆ ಗಮನ ಹರಿಸಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಒಗ್ಗೂಡಿಸಬೇಕು ಎನ್ನುವ ಆಗ್ರಹ ಕಾರ್ಯಕರ್ತರ ವಲಯದಲ್ಲಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications