Pratap Simha: ಹಿಂದುತ್ವವಾದಿಗಳಿಗೆ ಇಂತಹ ಪರಿಸ್ಥಿತಿ ದುರದೃಷ್ಟಕರ: ರಘುಪತಿ ಭಟ್ ಪರ ಪ್ರತಾಪ್ ಸಿಂಹ ಬ್ಯಾಟಿಂಗ್
ಉಡುಪಿ, ಜೂನ್ 03: ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗಳಿದ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.
ಪಕ್ಷದಿಂದ ಉಚ್ಚಾಟನೆಗೊಂಡ ರಘುಪತಿ ಭಟ್ ಹಿಜಾಬ್ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಕೌಂಟರ್ ನೀಡಿರುವ ಬಗ್ಗೆ ವರದಿಯಾಗಿತ್ತು. ಈ ಎಲ್ಲಾ ಬೆಳವಣಿಗೆಳನ್ನು ಗಮನಿಸಿದ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರ ಬ್ಯಾಟ್ ಬೀಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ, 'ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ ಎಂಎಲ್ಎ ಟಿಕೆಟ್ಟೂ ಸಿಗಲಿಲ್ಲ, ಎಂಎಲ್ಸಿ ಟಿಕೆಟ್ಟನ್ನೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆಗೆ ಒಳಗಾಗಿ ಬುರ್ಖಾ ಸ್ಪೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ' ಎಂದಿದ್ದಾರೆ.
ಪ್ರತಾಪ್ ಸಿಂಹ ಅವರ ಬೆಂಬಲಕ್ಕೆ ಧನ್ಯವಾದ ತಿಳಿಸಿರುವ ರಘುಪತಿ ಭಟ್ 'ಪ್ರತಾಪ್ ಸಿಂಹ ಅವರಿಗೆ ವಂದನೆಗಳು. ನಿಜವಾದ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಮತ್ತು ಹಿಂದುತ್ವವಾದಿಗಳಿಗೆ ನನ್ನ ನಿಲುವು ಏನೆಂದು ಸ್ಪಷ್ಟವಾಗಿ ತಿಳಿದೆ. ಪರಿವಾರದ ಮನಸ್ಥಿತಿಯ ನಿಷ್ಠಾವಂತ ಕಾರ್ಯಕರ್ತರು ಎಂದಿಗೂ ನನ್ನ ಜೊತೆ ಇದ್ದಾರೆ. ನನ್ನ ಉಸಿರು ಇರುವವರೆಗೆ ಅವರ ಧ್ವನಿಯಾಗಿ ಇರುತ್ತೇನೆ' ಎಂದಿದ್ದಾರೆ.
ರಘುಪತಿ ಭಟ್ಗೆ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಕೌಂಟರ್ ಏನು..?
ರಘುಪತಿ ಭಟ್ ಪಕ್ಷದಿಂದ ಉಚ್ಚಾಟನೆಗೊಳ್ಳುತ್ತಿದ್ದಂತೆ ಹಿಜಾಬ್ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹೆಸರಿನ ಎಕ್ಸ್ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಾಕಲಾಗಿದ್ದು, ಮಾಜಿ ಶಾಸಕರಿಗೆ ಆಲಿಯಾ ಅಸ್ಸಾದಿ ಕೌಂಟರ್ ನೀಡಿದ್ದಾಳೆ ಎನ್ನಲಾಗಿತ್ತು.
' ಅಂದು ಹಿಜಾಬ್ ಕಾರಣಕ್ಕಾಗಿ ನನ್ನನ್ನು ನೀವು ಕಾಲೇಜಿನಿಂದ ಹೊರದಬ್ಬಿದಿರಿ. ಆ ಕಾರಣಕ್ಕಾಗಿ ನೀವು ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದಿರಿ. ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವುದನ್ನು ನೋಡುತ್ತಿದ್ದೇನೆ. ಅಂದು ನಾನು ಉಚ್ಛಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಛಾಟಿತ ವ್ಯಕ್ತಿ' ಎಂದು ಲೇವಡಿ ಮಾಡಿದ್ದಾರೆ ಎನ್ನಲಾಗಿತ್ತು.
-
Kerala: ಕೇರಳಂ ವಿಧಾನಸಭೆ ಚುನಾವಣೆ 2026: ಎಲ್ಡಿಎಫ್–ಯುಡಿಎಫ್ ನಡುವೆ ಪೈಪೋಟಿ, ಹೇಗಿದೆ ರಾಜಕೀಯ ಕಣ -
Puducherry Election 2026: ವಿಧಾನಸಭಾ ಚುನಾವಣೆಗೆ ಸಜ್ಜಾದ ಪುದುಚೇರಿ ರಾಜಕೀಯ ಅಖಾಡ: ಏಪ್ರಿಲ್ 9ಕ್ಕೆ ಮತದಾನ -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Assam Assembly Election 2026: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ, ಮತ ಏಣಿಕೆ ದಿನಾಂಕಗಳ ವಿವರ -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ








Click it and Unblock the Notifications