ಉಡುಪಿಯ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಚಂಡ ಗೆಲುವು !
ಉಡುಪಿ, ಮೇ 15: ಉಡುಪಿ ಜಿಲ್ಲೆಯಲ್ಲಿ ಸ್ವೀಪ್ ಮಾಡಿರುವ ಬಿಜೆಪಿ , ಎಲ್ಲ ಐದೂ ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು ಸಾಧಿಸಿದೆ. ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್- ಬಿಜೆಪಿ ಮಧ್ಯೆ ತುರುಸಿನ ಸ್ಪರ್ಧೆ ಬಿಟ್ಟರೆ ಉಳಿದ ನಾಲ್ಕೂ ಕ್ಷೇತ್ರಗಳಲ್ಲೂ ಫಲಿತಾಂಶ ಬಹುತೇಕ ಒನ್ ಸೈಡೆಡ್ ಆಗಿತ್ತು.
ಕುಂದಾಪುರ ಕ್ಷೇತ್ರದಲ್ಲಂತೂ ಬಿಜೆಪಿಯ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಐವತ್ತು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು ದಾಖಲೆ ಬರೆದಿದ್ದಾರೆ.
ಉಡುಪಿ ಜಿಲ್ಲೆ ಮತ್ತೆ ಕೇಸರಿಮಯವಾಗಿದೆ. ಕಳೆದ ಬಾರಿ ಏಕೈಕ ಸ್ಥಾನ ಪಡೆದಿದ್ದ ಬಿಜೆಪಿ ಈ ಬಾರಿ ಪುಟಿದೆದ್ದು ನಿಂತಿದ್ದು ,ಎಲ್ಲ ಐದೂ ಸ್ಥಾನಗಳನ್ನು ಬಾಚಿಕೊಂಡಿದೆ. ಉಡುಪಿ ಜಿಲ್ಲೆ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಎಲ್ಲ ಕ್ಷೇತ್ರವನ್ನು ಗೆದ್ದುಕೊಂಡು ಬೀಗಿರುವ ಕಮಲ ಪಕ್ಷ ,ಹೊಸ ಇತಿಹಾಸ ನಿರ್ಮಿಸಿದೆ.

ಪುನರ್ಜನ್ಮ ಪಡೆದ ರಘುಪತಿ ಭಟ್
ಬೆಳಗ್ಗೆ ಮತ ಎಣಿಕೆ ಪ್ರಾರಂಭವಾದಾಗ ನಿಧಾನಗತಿಯಲ್ಲಿ ಲೀಡ್ ಪಡೆಯತೊಡಗಿದ ಬಿಜೆಪಿ ಅಭ್ಯರ್ಥಿಗಳು ತಮ್ಮ ಲೀಡನ್ನು ಸಾವಿರಗಳಲ್ಲಿ ಹೆಚ್ಚಿಸುತ್ತಾ ಹೋದ್ರು. ಮುಖ್ಯವಾಗಿ ಮೀನುಗಾರಿಕೆ ಮತ್ತು ಯುವಜನ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಬಿಜೆಪಿಯ ರಘುಪತಿ ಭಟ್ ಸೋಲಿಸುವ ಮೂಲಕ ಮತ್ತೆ ರಾಜಕೀಯವಾಗಿ ಪುನರ್ಜನ್ಮ ಪಡೆದಿದ್ದಾರೆ.
ಕಳೆದ ಬಾರಿ ಸಿಡಿ ಹಗರಣದಿಂದಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದ ಭಟ್, ಈ ಬಾರಿ ಮತ್ತೆ ಎದ್ದು ಬಂದಿದ್ದಾರೆ. ಈ ಮೂಲಕ ರಾಜ್ಯದಲ್ಲೇ ಅತಿ ಹೆಚ್ಚು ಅಂತರದಲ್ಲಿ ಗೆಲ್ಲುತ್ತೇನೆ ಅಂತ ಬೀಗುತ್ತಿದ್ದ ಪ್ರಮೋದ್ ಮಧ್ವರಾಜ್ ತೀವ್ರ ಮುಖಭಂಗ ಅನುಭವಿಸುವಂತಾಯಿತು.
In Pics: ಕರ್ನಾಟಕ ಜನಾದೇಶ: ಒಂದಷ್ಟು ಕಹಿ, ಮತ್ತಷ್ಟು ಸಿಹಿ

ಭಾರಿ ಅಂತರದಿಂದ ಗೆದ್ದ ಹಾಲಾಡಿ
ಇನ್ನು ಕಳೆದ ಬಾರಿ ಬಿಜೆಪಿಯಿಂದ ಬಂಡಾಯ ಎದ್ದು ಪಕ್ಷೇತರವಾಗಿ ಸ್ಪರ್ಧಿಸಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ,ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ದಾಖಲೆಯ ಅಂತರದಿಂದ ಗೆದ್ದು ಬಂದಿದ್ದಾರೆ. ಹಾಲಾಡಿ ಶ್ರೀನಿವಾಸ್ ಶೆಟ್ಟಿ ಗೆಲುವಿನ ಅಂತರ 56405.

ಸುನಿಲ್ ಕುಮಾರ್ ಗೆಲುವು
ಇನ್ನು ಕಾರ್ಕಳ ಕ್ಷೇತ್ರದಲ್ಲಿ ಹಾಲಿ ಶಾಸಕ ಸುನಿಲ್ ಕುಮಾರ್ 42566 ಮತಗಳ ಅಂತರದಿಂದ ಕಾಂಗ್ರೆಸ್ ನ ಗೋಪಾಲ್ ಭಂಡಾರಿಯವರನ್ನು ಸೋಲಿಸಿ ನಗೆ ಬೀರಿದ್ದಾರೆ. ಬೈಂದೂರು ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದ ಗೋಪಾಲ್ ಪೂಜಾರಿಯವರನ್ನು ಬಿಜೆಪಿಯ ಸುಕುಮಾರ್ ಶೆಟ್ಟಿ ಮಣಿಸಿದ್ದಾರೆ.

ಗೆಲುವು ಸಾಧಿಸಿದ ಲಾಲಾಜಿ ಮೆಂಡನ್
ಬಿಜೆಪಿ ಗೆಲುವಿನ ಅಂತರ ಇಲ್ಲಿ 24500. ಇನ್ನು ಅಚ್ಚರಿ ಎಂಬಂತೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸೋತಿದ್ದಾರೆ. ಇಲ್ಲಿ ಬಿಜೆಪಿ ನಿಷ್ಠ ಲಾಲಾಜಿ ಮೆಂಡನ್ ಸೊರಕೆಯವರನ್ನು 11,919 ಮತಗಳಿಂದ ಸೋಲಿಸಿದ್ದಾರೆ.
ಒಟ್ಟಾರೆ ಈ ಮೊದಲು ಜಿಲ್ಲೆಯ ಐದು ಸ್ಥಾನಗಳ ಪೈಕಿ ಬಿಜೆಪಿ ನಾಲ್ಕರಲ್ಲಿ ಗೆಲುವಿನ ಸಾಧನೆ ಮಾಡಿತ್ತು. ಆದ್ರೆ ಈ ಬಾರಿ ಐದಕ್ಕೆ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ಕಮಲ ಪಕ್ಷ ಹೊಸ ಇತಿಹಾಸ ನಿರ್ಮಾಣ ಮಾಡಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications