ರೈಲು ಡಿಕ್ಕಿಯಾಗಿ ಅಪರೂಪದ ಕರಿಚಿರತೆ ಸಾವು
ಉಡುಪಿ, ಫೆಬ್ರವರಿ 3: ಉಡುಪಿ ಜಿಲ್ಲೆಯಲ್ಲಿ ರೈಲು ಡಿಕ್ಕಿಯಾಗಿ ಅಪರೂಪದ ವನ್ಯಜೀವಿ ಕರಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಡ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವೆ ಬಳಿ ಈ ಘಟನೆ ಸಂಭವಿಸಿದೆ.
ಈ ಚಿರತೆಯು ಅಂದಾಜು ಮೂರ್ನಾಲ್ಕು ವರ್ಷ ಪ್ರಾಯದ್ದಾಗಿದ್ದು, ಈ ಗಂಡು ಚಿರತೆಯು ಆಹಾರ ಅರಸಿಕೊಂಡು ನಾಡಿಗೆ ಬಂದಿದ್ದು ರೈಲ್ವೆ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಉಡುಪಿ ಡಿಸಿ ಗ್ರಾಮ ವಾಸ್ತವ್ಯ: ವಿದ್ಯಾರ್ಥಿಗಳ ಜೊತೆ ಸಂವಾದ, ಗ್ರಾಮಸ್ಥರ ಅಹವಾಲು ಸ್ವೀಕಾರ
ಕೂಡಲೇ ಸ್ಥಳೀಯರು ಮೃತದೇಹವನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಬಳಿಕ ಮೃತದೇಹವನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
Recommended Video
ಉಡುಪಿ ಜಿಲ್ಲೆ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಭಾಗದಲ್ಲಿ ಅರಣ್ಯ ಪ್ರದೇಶ ಇದ್ದು, ಕರಿ ಚಿರತೆ ಅಲ್ಲಿಂದ ಆಹಾರಕ್ಕಾಗಿ ರೈಲ್ವೆ ಮೇಲ್ಸೇತುವೆ ಬಳಿ ಬಂದಿತ್ತು ಎನ್ನಲಾಗಿದೆ.