ಕರಾವಳಿಯಲ್ಲಿ ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ಟೆಂಪಲ್ ರನ್: ಯಾಕೆ?
ಬಾಲಿವುಡ್ ನಟಿ ಸಂಸದೆ ಕಂಗನಾ ರಣಾವತ್ ಉಡುಪಿ ಹಾಗೂ ದಕ್ಷಿಣ ಕನ್ನಡದ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ಕಂಗನಾ ರಣಾವತ್ ಮೊದಲು ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೆ ಬಹುಕೋಟಿ ವೆಚ್ಚದಲ್ಲಿ ನವೀಕರಣಗೊಂಡಿರುವ ಕಾಪು ಮಾರಿಯಮ್ಮನ ದೇವಾಲಯದ ರಚನೆ ಬಗ್ಗೆ ನಟಿ ಕಂಗನಾ ರಣಾವತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಕಂಗನಾ ರಣಾವತ್ ಅವರನ್ನು ಶಾಲು ಹೊದಿಸಿ ಗೌರವದಿಂದ ಕಾಪು ಮಾರಿಯಮ್ಮನ ದೇವಸ್ಥಾನದ ಆಡಳಿತ ಮಂಡಳಿ ಬರಮಾಡಿಕೊಂಡಿತು. ಮಾರಿಯಮ್ಮ ದೇವಿಯ ದರ್ಶನ ಪಡೆದ ನಂತರ ಕಂಗನಾ ರಣಾವತ್ ಹಿರಿಯ ಆರ್ಎಸ್ಎಸ್ ಮುಖಂಡ ಬಿ.ಎಲ್ ಸಂತೋಷ್ ಭಾಗಿಯಾಗಿರುವ ಸಾರ್ವಜನಿಕ ಸಭೆಯಲ್ಲಿ ಕಾಣಿಸಿಕೊಂಡರು.

ದೇವಸ್ಥಾನಕ್ಕೆ ಹಾಗೂ ಸಾರ್ವಜನಿಕ ಸಭೆಗೆ ಆಗಮಿಸುವ ವೇಳೆ ಕಂಗನಾ ರಣಾವತ್, ಹಸಿರು ಬಣ್ಣದ ಸೀರೆಯುಟ್ಟು ಮುಡಿ ತುಂಬಾ ಮಲ್ಲಿಗೆ ಮುಡಿದು ಎಲ್ಲರ ಗಮನ ಸೆಳೆದರು. ಸಾರ್ವಜನಿಕ ಸಭೆಯಲ್ಲಿ ಬಾಲಿವುಡ್ ನಟಿಯಾದರೂ ದೇವಸ್ಥಾನಕ್ಕೆ ಬರುವಾಗ ಕಂಗನಾ ರಣಾವತ್ ಸೀರೆಯುಟ್ಟು ಬಂದ ರೀತಿಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಲಾಯಿತು.
ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಂಗನಾ ರಣಾವತ್ ಭೇಟಿ
ಇಂದು ಮಾರ್ಚ್ 04 ಮಂಗಳವಾರ ಬಾಲಿವುಡ್ ನಟಿ ಬಿಜೆಪಿ ಸಂಸದೆ ಕಂಗನಾ ರಣಾವತ್ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಿ ದರ್ಶನ ಪಡೆದು ಶೇಷ ಪೂಜೆ ಸಲ್ಲಿಸಿದ್ದಾರೆ. ಮಧ್ಯಾಹ್ನದ ಮಹಾ ಪೂಜೆಯಲ್ಲಿ ಭಾಗಿಯಾದ ನಟಿ ಕಂಗನಾ ರಣಾವತ್, ದೇವಸ್ಥಾನದಲ್ಲೇ ಅನ್ನ ಪ್ರಸಾದ ಸ್ವೀಕರಿಸಿದ್ದಾರೆ. ಈ ವೇಳೆ ನಟಿಗೆ ಸ್ಥಳೀಯ ಸಂಸದ ಕ್ಯಾ ಬ್ರಿಜೇಶ್ ಚೌಟ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ ಕಂಗನಾ ರಣಾವತ್, 'ಬಹಳ ವರ್ಷಗಳಿಂದ ಈ ಭಾಗಕ್ಕೆ ಬರಬೇಕು ಎನ್ನುವ ಆಸೆ ಇತ್ತು. ಈಗ ಈಡೇರಿದೆ. ಈಗ ತಾಯಿ ತನ್ನ ಆಶೀರ್ವಾದ ನೀಡಲು ನನ್ನನ್ನು ಕರೆಸಿಕೊಂಡಿದ್ದಾಳೆ. ಕಾಪು ಮಾರಿಗುಡಿ ಹಾಗೂ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದೇನೆ. ತಾಯಿ ದರ್ಶನದಿಂದ ಬಹಳ ಖುಷಿಯಾಗಿದೆ' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications