ಉಡುಪಿ: ಕೃಷ್ಣಮಠದ ವತಿಯಿಂದ 400 ಮಂದಿ ಸಂತ್ರಸ್ಥರಿಗೆ ಉಪಾಹಾರ, ಭೋಜನ ವ್ಯವಸ್ಥೆ
ಉಡುಪಿ, ಸೆಪ್ಟೆಂಬರ್ 21: ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಯ ಪ್ರವಾಹದಿಂದಾಗಿ ಉಡುಪಿ ನಗರದ ಶ್ರೀಕೃಷ್ಣ ಮಠದ ಸುತ್ತಲಿನ ನೆರೆ ಪ್ರದೇಶಗಳಾದ ಕಲ್ಸಂಕ, ಪಾರ್ಕಿಂಗ್ ಏರಿಯಾ ಮತ್ತು ಬೈಲಕೆರೆಗಳಲ್ಲಿ ಅನೇಕ ಜನರು ಸಂಕಷ್ಟಕ್ಕೀಡಾಗಿದ್ದಾರೆ.
ಉಡುಪಿ ನಗರದಲ್ಲಿ ಹಲವರ ಮನೆಗಳು ಜಲಾವೃತಗೊಂಡಿದ್ದು, ನಿತ್ಯದ ಕೆಲಸಕ್ಕೆ ಹೋಗಲೂ ತೊಂದರೆ ಉಂಟಾಗಿದೆ. ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಇವರಿಗೆಲ್ಲ ಇಂದು ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಿದ್ದಾರೆ.
ಸುಮಾರು 80 ಕುಟುಂಬಗಳ 400 ಜನರಿಗೆ ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ಆಶಯದಂತೆ ಶ್ರೀಕೃಷ್ಣ ಮಠದಿಂದ ಅನ್ನ ಪ್ರಸಾದ ಬಡಿಸಲಾಯಿತು. ಪ್ರಸಾದ ರೂಪದಲ್ಲಿ ಅನ್ನ ಸಾರು, ಕುಂಬಳಕಾಯಿ ಸಾಂಬಾರು ಮತ್ತು ಪಾಯಸ ವಿತರಿಸಲಾಯಿತು.

ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಸಮಾಜದ ಒಳಿತಿಗಾಗಿ ನಿನ್ನೆ ಸಂಜೆ ಕೃಷ್ಣ ಮುಖ್ಯಪ್ರಾಣ ದೇವರಲ್ಲಿ ರಾತ್ರಿ ಪೂಜೆಯ ನಂತರ ಶ್ರೀಮಠದ ಋತ್ವಿಜರೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು.

ಭೋಜನ ವಿತರಣೆ ಸಂದರ್ಭ ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಶಾಸಕರಾದ ಕೆ.ರಘುಪತಿ ಭಟ್, ನಗರಸಭಾ ಆಯುಕ್ತರು, ಕಂದಾಯ ಸಹಾಯಕ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿಗಳು, ನಗರಸಭಾ ಸದಸ್ಯರು ಮತ್ತು ನೇತೃತ್ವ ವಹಿಸಿದ ಸ್ಥಳೀಯರಾದ ಹರೀಶ್ ಬೈಲಕೆರೆ ಮಠದ ವ್ಯವಸ್ಥಾಪಕರು ಮತ್ತು ಶ್ರೀಕೃಷ್ಣ ಸೇವಾ ಬಳಗದ ವೈ.ಎನ್.ಆರ್ ರಾವ್ ಮುಂತಾದವರು ಉಪಸ್ಥಿತರಿದ್ದರು.
Recommended Video
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications