ಕುಂದಾಪುರದಲ್ಲಿ “ಸಿಂಪಲ್ಲಾಗ್ ಒಂದು ಮದುವೆ ಸ್ಟೋರಿ”
“ಮದುವೆಗಳು ಸ್ವರ್ಗದಲ್ಲಿ ನಿಶ್ಚಯವಾಗುತ್ತದೆ” ಹೀಗಂತ ಒಂದು ಮಾತು ಇದೆ. ಇದಕ್ಕೆ ಯಾವುದೇ ಜಾತಿ ಅಥವಾ ಧರ್ಮ ಅಡ್ಡವಾಗುವುದಿಲ್ಲ. ಈ ಮಾತಿಗೆ ನಿದರ್ಶನವೆಂಬಂತೆ ಕುಂದಾಪುರದಲ್ಲಿ ಬೇರೆ ಬೇರೆ ಧರ್ಮದ ಜೋಡಿಯೊಂದು ಮದುವೆಯಾದ ಅಪರೂಪದ ಘಟನೆ ನಡೆದಿದೆ.
ಉಡುಪಿ, ಮೇ 03: "ಮದುವೆಗಳು ಸ್ವರ್ಗದಲ್ಲಿ ನಿಶ್ಚಯವಾಗುತ್ತದೆ" ಹೀಗಂತ ಒಂದು ಮಾತು ಇದೆ. ಇದಕ್ಕೆ ಯಾವುದೇ ಜಾತಿ ಅಥವಾ ಧರ್ಮ ಅಡ್ಡವಾಗುವುದಿಲ್ಲ. ಈ ಮಾತಿಗೆ ನಿದರ್ಶನವೆಂಬಂತೆ ಕುಂದಾಪುರದಲ್ಲಿ ಬೇರೆ ಬೇರೆ ಧರ್ಮದ ಜೋಡಿಯೊಂದು ಮದುವೆಯಾದ ಅಪರೂಪದ ಘಟನೆ ನಡೆದಿದೆ.
ಕುಂದಾಪುರದ ಕುಂಭಾಶಿಯ ವಿನಯನಗರ ಕಾಲೋನಿಯ ವಿವೇಕ್ (24) ಹಾಗೂ ಸಲ್ಮಾ (22) ನಿವಾಸಿಗಳು ಪರಸ್ಪರ ಒಬ್ಬರೊಬ್ಬರನ್ನು ಸುಮಾರು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಇಬ್ಬರ ಮನೆಯವರಿಂದ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಒಂದು ಹೆಜ್ಜೆ ಮುಂದೆ ಹೋದ ಹುಡುಗಿ ಧರ್ಮದ ಮುಖಂಡರು ಈ ಪ್ರೀತಿ ಮುಂದುವರೆದರೆ ಧರ್ಮದಿಂದ ಹೊರಹಾಕುವ ಎಚ್ಚರಿಕೆಯನ್ನೂ ನೀಡಿದ್ದರು.

ಈ ಮಧ್ಯೆ ವಿವೇಕ್ ತನ್ನ ಮನೆಯಲ್ಲಿ ತಾನು ಆ ಹುಡುಗಿಯನ್ನು ಮದುವೆಯಾದೇ ಇದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂಬ ಬೆದರಿಕೆ ಒಡ್ಡಿದ. ಇದಕ್ಕೆ ಹೆದರಿದ ಆತನ ತಂದೆ-ತಾಯಿ ಮಗನ ಮದುವೆಗೆ ಅನುಮತಿ ನೀಡಿದರು. ಆದರೆ ಈ ಮದುವೆಗೆ ಹುಡುಗಿ ಮನೆಯವರಿಂದ ತೀವ್ರ ಪ್ರತಿರೋಧ ಬಂದಿತ್ತು. ಈ ಬಗ್ಗೆ ಫೆಬ್ರವರಿಯಲ್ಲಿ ಕುಂದಾಪುರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದೂರು ಕೂಡಾ ನೀಡಲಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷೆ ರಾಧಾ ದಾಸ್ ಮದುವೆಗೆ ಒಪ್ಪಿಗೆ ನೀಡಿದ್ದರು. ಅದಕ್ಕೂ ಮೊದಲು ಎರಡೂ ಕಡೆಯವರನ್ನು ವಿಶ್ವಾಸಕ್ಕೆ ತರಲು ಪ್ರಯತ್ನಿಸಿದಾಗ ಹುಡುಗಿ ಮನೆಯವರು ತಮ್ಮ ಧರ್ಮಕ್ಕೆ ಮತಾಂತರವಾದರೆ ಮಾತ್ರ ಈ ಮದುವೆಗೆ ಒಪ್ಪಿಗೆ ಸೂಚಿಸುತ್ತೇವೆಂಬ ಬೇಡಿಕೆ ಮುಂದಿಟ್ಟಾಗ ಸಲ್ಮಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಳು.ಇಷ್ಟೆಲ್ಲಾ ವಿರೋಧದ ಮಧ್ಯೆ ಮೇ 2ರಂದು ಕಾನೂನುಬದ್ದವಾಗಿ ಹಿಂದೂ ಸಂಪ್ರದಾಯದಂತೆ ಪರಸ್ಪರ ಹಾರ ಬದಲಿಸಿ ಮದುವೆಯಾದರು.

ಸಲ್ಮಾ ಮನೆಯಲ್ಲಿ ಮದುವೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಮತಾಂತರಕ್ಕೆ ಒಪ್ಪಿದರೆ ಕುಟುಂಬದೊಳಗೆ ಸೇರಿಸಿಕೊಳ್ಳುತ್ತೇವೆ ಅಂತ ಹೇಳಿದ್ದಾರೆ. ಆದ್ರೆ ಈ ಜೋಡಿ ಮತಾಂತರಕ್ಕೆ ಒಪ್ಪುತ್ತಿಲ್ಲ. ನಾನು ಸಲ್ಮಾ ಆಗಿಯೇ ಮುಂದುವರೆಯುತ್ತೇನೆ ಅಂತಿದ್ದಾರೆ ಈಕೆ. ನಾನೂ ನನ್ನ ಧರ್ಮ ಬಿಡುವುದಿಲ್ಲ ಎಂದಿರುವ ವಿವೇಕ್, ಎಷ್ಟೇ ಕಷ್ಟ ಬಂದ್ರೂ ಇಬ್ಬರೂ ಒಟ್ಟಿಗೆ ಬಾಳುತ್ತೇವೆ ಅಂತ ಕೈ ಕೈ ಹಿಡಿದು ನಿರ್ಧಾರ ಮಾಡಿದ್ದಾರೆ. ಮದುವೆಯ ನಂತರ ಪೊಲೀಸರು ರಕ್ಷಣೆ ಕೊಡಬೇಕು ಅಂತ ಸಾಂತ್ವನ ಕೇಂದ್ರದ ಅಧ್ಯಕ್ಷೆ ರಾಧಾ ದಾಸ್ ಒತ್ತಾಯಿಸಿದ್ದಾರೆ.
ಈ ವೇಳೆ ಹುಡುಗನ ತಂದೆ ಬಾಬು, ತಾಯಿ ಶಾರದೆ, ಪೊಲೀಸ್ ಸಿಬ್ಬಂದಿ, ಮಕ್ಕಳ ಇಲಾಖೆಯ ಸಿಬ್ಬಂದಿ ಹಾಜರಿದ್ದರು. ವಿವೇಕ್ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಹುಡುಗಿ ಸಲ್ಮಾ ಕುಂದಾಪುರದ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಳೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications