Get Updates
Get notified of breaking news, exclusive insights, and must-see stories!

ಉಡುಪಿಯಲ್ಲಿ 50ಕ್ಕೂ ಹೆಚ್ಚು ದಲಿತರಿಂದ ಬೌದ್ಧ ಧರ್ಮ ಸ್ವೀಕಾರ

ಉಡುಪಿ, ಅಕ್ಟೋಬರ್ 19: ಬಾಬಾಸಾಹೇಬ್ ಅಂಬೇಡ್ಕರ್ ಅವರ 64ನೇ ಧರ್ಮ ಚಕ್ರ ಪ್ರವರ್ತನಾ ದಿನದ ಪ್ರಯುಕ್ತ ಉಡುಪಿಯಲ್ಲಿ ಹಲವು‌ ಮಂದಿ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. 64ನೇ ಧರ್ಮ ಚಕ್ರ ಪ್ರವರ್ತನಾ ದಿನದ ಆಚರಣೆ ಕಾರ್ಯಕ್ರಮದಲ್ಲಿ ಐವತ್ತಕ್ಕೂ ಹೆಚ್ಚು ದಲಿತರಿಂದ ಭೌದ್ಧ ಧರ್ಮ ಸ್ವೀಕಾರ ನಡೆಯಿತು.

ಉಡುಪಿ ಜಿಲ್ಲಾ ಬೌದ್ಧ ಮಹಾ ಸಭಾದವರು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಜೀವನ ಬುದ್ಧ ವಿಹಾರ, ಕೊಳ್ಳೆಗಾಲ-ಮೈಸೂರಿನಿಂದ ಆಗಮಿಸಿದ್ದ ಸುಗತಪಾಲ ಭಂತೇಜಿ ಅವರು ಮತಾಂತರಗೊಂಡ ಬೌದ್ಧರಿಗೆ ಪ್ರಮಾಣವಚನ ಬೋಧಿಸಿದರು. ಮತಾಂತರಗೊಂಡ ಬೌದ್ಧರು ಈ ಸಂದರ್ಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಉಡುಪಿ ಜಿಲ್ಲೆಯಲ್ಲಿ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದಲ್ಲಿ ಸಹಾಯಧನ ನೀಡಿ ಸನ್ಮಾನಿಸಲಾಯಿತು.

Buddhism Is Accepted By Over 50 Dalits In Udupi This Year

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ದಲಿತ ಮುಖಂಡ ಸುಂದರ ಮಾಸ್ತರ್, ಶ್ಯಾಮರಾಜ್ ಬಿರ್ತಿ, ನಾರಾಯಣ ಮಣೂರು, ಶೇಖರ್ ಹೆಜಮಾಡಿ, ಶೇಖರ ಹಾವಂಜೆ, ಶಂಭು ಮಾಸ್ಟರ್, ಪುಷ್ಪಾಕರ್, ಮಂಜುನಾಥ್ ಗಿಳಿಯಾರು, ಅಣ್ಣಪ್ಪ ನಕ್ರೆ, ಶ್ಯಾಮಸುಂದರ್ ತೆಕ್ಕಟ್ಟೆ, ಮಂಜುನಾಥ್. ವಿ, ಕೀರ್ತಿಕುಮಾರ್ ಪಡುಬಿದ್ರಿ, ವಿಠಲ ತೊಟ್ಟಂ, ರವೀಂದ್ರ ಬಂಟಕಲ್ಲು, ರಾಘವೇಂದ್ರ ಬೆಳ್ಳೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+